4:27 AM Monday21 - July 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ನ ಗ್ಯಾರಂಟಿ ಯೋಜನೆಗಳಿಂದ ಬಿಜೆಪಿ ಹಾಗೂ ಜೆಡಿಎಸ್ ಕಂಗೆಟ್ಟಿದೆ: ಪಾವಗಡದಲ್ಲಿ ಮುಖ್ಯಮಂತ್ರಿ… ಧರ್ಮಸ್ಥಳ ಪ್ರಕರಣ; ಎಸ್ ಐಟಿ ತನಿಖೆ ಕಾಲಮಿತಿಯಲ್ಲಿ ಕಾನೂನು ಬದ್ದವಾಗಿ ನಡೆಯಲಿ: ಮಾಜಿ… ಧರ್ಮಸ್ಥಳ ಪ್ರಕರಣ; ಎಸ್‌ಐಟಿ ರಚನೆ ಸ್ವಾಗತಾರ್ಹ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ Kodagu | ಮಂಜಡ್ಕ ನದಿಯಲ್ಲಿ ಬೈಕ್ ಸಹಿತ ಕೊಚ್ಚಿ ಹೋಗಿದ್ದ ಯುವಕನ ಮೃತದೇಹ… ಸುಂಟಿಕೊಪ್ಪ: ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಆಡಿ-ಟೆಂಪೋ ಡಿಕ್ಕಿ: ಟ್ರಾಫಿಕ್ ಜಾಮ್ Kodagu | ಕುಶಾಲನಗರ: ಆಸ್ತಿಗಾಗಿ ಸ್ನೇಹಿತರ ಜತೆ ಸೇರಿ ತಂದೆಯನ್ನೇ ಕೊಂದ ಪಾಪಿ… SIT Dharmasthala | ಧರ್ಮಸ್ಥಳ ಪ್ರಕರಣ ತನಿಖೆಗೆ ವಿಶೇಷ ತನಿಖಾ ತಂಡ ರಚನೆ:… ಭಾರೀ ಮಳೆ ಮಧ್ಯೆಯೂ ಮುಳ್ಳಯ್ಯನಗಿರಿಗೆ ಪ್ರವಾಸಿಗರ ದಂಡು: ಕಾರು – ಜೀಪ್ ಮುಖಾಮುಖಿ… ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾಗಿ ಜಸ್ಟಿಸ್ ವಿಭು ಬಖ್ರು ಅಧಿಕಾರ ಸ್ವೀಕಾರ: ರಾಜ್ಯಪಾಲ… Kodagu |ಪೊನ್ನಂಪೇಟೆ: ವ್ಯಾಘ್ರನ ಸೆರೆಗೆ 75 ಮಂದಿ ಅರಣ್ಯ ಸಿಬ್ಬಂದಿಗಳ ಕೂಂಬಿಂಗ್ ಕಾರ್ಯಾಚರಣೆ…

ಇತ್ತೀಚಿನ ಸುದ್ದಿ

ಪರಿಶಿಷ್ಟ ಜಾತಿ- ಪಂಗಡಗಳ ಉನ್ನತೀಕರಣಕ್ಕೆ ಬಿಜೆಪಿ ಸರಕಾರದಿಂದ ವಿವಿಧ ಯೋಜನೆ: ಶಾಸಕ ವೇದವ್ಯಾಸ ಕಾಮತ್

04/12/2022, 14:38

ಮಂಗಳೂರು(reporterkarnataka.com): ರಾಜ್ಯ ಸರಕಾರದಿಂದ ಪರಿಶಿಷ್ಟ ಜಾತಿ ಪಂಗಡಗಳ ಉನ್ನತೀಕರಣಕ್ಕೆ ವಿವಿಧ ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಕಾಲೋನಿಗಳ ಅಭಿವೃದ್ಧಿ, ಮೀಸಲಾತಿ ಹೆಚ್ಚಳ ಸೇರಿದಂತೆ ಅವಶ್ಯಕ ಬದಲಾವಣೆಗಳನ್ನು ತಂದಿರುವುದು ನಮ್ಮ ಸರಕಾರ ಎಂದು ಶಾಸಕ ವೇದವ್ಯಾಸ ಕಾಮತ್ ಹೇಳಿದ್ದಾರೆ‌.

ನಗರ ಶಿವಭಾಗ್ ವಾರ್ಡಿನ ಕುದ್ಕೋರಿಗುಡ್ಡೆ ಕಾಲೋನಿ ಬಳಿ 75 ಲಕ್ಷ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ರಾಜ್ಯದಲ್ಲಿ ನಮ್ಮ ಸರಕಾರ ಆಡಳಿತಕ್ಕೆ ಬಂದ ಬಳಿಕ ಪ್ರತಿಯೊಂದು ಸಮುದಾಯಗಳ ಅಭಿವೃದ್ಧಿಗೆ ಪೂರಕವಾದ ಯೋಜನೆಗಳನ್ನು ರೂಪಿಸಿದೆ. ನಗರದ ಅಭಿವೃದ್ಧಿಗೆ ಮಹಾತ್ಮಗಾಂಧಿ ನಗರ ವಿಕಾಸ ಯೋಜನೆಯಡಿ ಅನುದಾನ ಬಿಡುಗಡೆಗೊಳಿಸುವ ಮೂಲಕರಾಜ್ಯ ಸರಕಾರದಿಂದ ಪರಿಶಿಷ್ಟ ಜಾತಿ ಪಂಗಡಗಳ ಉನ್ನತೀಕರಣಕ್ಕೆ ವಿವಿಧ ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಕಾಲೋನಿಗಳ ಅಭಿವೃದ್ಧಿ, ಮೀಸಲಾತಿ ಹೆಚ್ಚಳ ಸೇರಿದಂತೆ ಅವಶ್ಯಕ ಬದಲಾವಣೆಗಳನ್ನು ತಂದಿರುವುದು ನಮ್ಮ ಸರಕಾರ ಎಂದು ಶಾಸಕ ವೇದವ್ಯಾಸ್ ಕಾಮತ್ ಹೇಳಿದ್ದಾರೆ‌.

ನಗರದ ಶಿವಭಾಗ್ ವಾರ್ಡಿನ ಕುದ್ಕೋರಿಗುಡ್ಡೆ ಕಾಲೋನಿ ಬಳಿ 75 ಲಕ್ಷ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ರಾಜ್ಯದಲ್ಲಿ ನಮ್ಮ ಸರಕಾರ ಆಡಳಿತಕ್ಕೆ ಬಂದ ಬಳಿಕ ಪ್ರತಿಯೊಂದು ಸಮುದಾಯಗಳ ಅಭಿವೃದ್ಧಿಗೆ ಪೂರಕವಾದ ಯೋಜನೆಗಳನ್ನು ರೂಪಿಸಿದೆ. ನಗರದ ಅಭಿವೃದ್ಧಿಗೆ ಮಹಾತ್ಮಗಾಂಧಿ ನಗರ ವಿಕಾಸ ಯೋಜನೆಯಡಿ ಅನುದಾನ ಬಿಡುಗಡೆಗೊಳಿಸುವ ಮೂಲಕ ವಿಶಿಷ್ಟ ಕೊಡುಗೆ ನೀಡಿದೆ ಎಂದರು.

ಕುದ್ಕೋರಿಗುಡ್ಡೆಯ ಕಾಲೋನಿ ಅಭಿವೃದ್ಧಿಗೆ ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆಯಡಿ 75 ಲಕ್ಷ ರೂಪಾಯಿ ಬಿಡುಗಡೆಗೊಳಿಸಲಾಗಿದೆ. ಈ ಭಾಗದ ಜನರ ಬಹು ಸಮಯದ ಬೇಡಿಕೆಗಳನ್ನು ಪೂರೈಸಲು ಅನುದಾನ ಒದಗಿಸಲಾಗಿದ್ದು ಅತ್ಯಂತ ಶೀಘ್ರದಲ್ಲಿ ಕಾಮಗಾರಿ ಪೂರ್ಣಗೊಳಿಸಲು ಸೂಚಿಸಿದ್ದೇನೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಸ್ಥಳೀಯ ಕಾರ್ಪೋರೇಟರ್ ಕಾವ್ಯಾ ನಟರಾಜ್ ಆಳ್ವ, ಪಾಲಿಕೆ ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಕಿಶೋರ್ ಕೊಟ್ಟಾರಿ, ಶಕಿಲಾ ಕಾವಾ, ಪಾಲಿಕೆ ನಾಮನಿರ್ದೇಶಿತ ಸದಸ್ಯರಾದ ಭಾಸ್ಕರ್ ಚಂದ್ರ ಶೆಟ್ಟಿ, ಮುಖಂಡರಾದ ನವೀನ್ ಶೆಣೈ, ಯೋಗೀಶ್ ಶೆಣೈ,ನಾಗೇಶ್ ಕುದುಕೋರಿಗುಡ್ಡೆ, ರಾಧಾಕೃಷ್ಣ ಕುದುಕೋರಿಗುಡ್ಡೆ, ಮಹಾಬಲ ಸಾಲ್ಯಾನ್, ಚೇತನ್, ಪ್ರಕಾಶ್, ವಿವೇಕ್, ವಸಂತಿ, ಯಶೋಧ, ಹರಿನಾಕ್ಷಿ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು