4:25 PM Monday9 - February 2026
ಬ್ರೇಕಿಂಗ್ ನ್ಯೂಸ್
ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ*

ಇತ್ತೀಚಿನ ಸುದ್ದಿ

ಪರ್ಕಳ: ರಸ್ತೆ ಬದಿಯ ಮನೆಗೆ ಉರುಳಿ ಬಿದ್ದ ಭಾರಿ ಗಾತ್ರದ ಕಂಟೈನರ್; ಚಾಲಕ‌ ಅಪಾಯದಿಂದ ಪಾರು

04/07/2022, 21:35

ಮಣಿಪಾಲ(reporterkarnataka.com): ಪರ್ಕಳದಿಂದ ಗೋವಾ ಕಡೆಗೆ ಸಾಗುತ್ತಿದ್ದ ಭಾರಿ ಗಾತ್ರದ ಕಂಟೈನರ್ ಲಾರಿಯೊಂದು ಕೆಳಪರ್ಕಳದ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮನೆಯೊಂದಕ್ಕೆ ಉರುಳಿ ಬಿದ್ದ ಘಟನೆ ನಡೆದಿದೆ.

ಕಾಂಕ್ರಿಟ್ ರಸ್ತೆಯಿಂದ ಡಾಮಾರು ರಸ್ತೆಗೆ ಸಂಪರ್ಕ ಸಾಧಿಸುವ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಬದಿಯ ಮನೆಗೆ ಉರುಳಿಬಿದ್ದದೆ.

ಭಾನುವಾರ ರಾತ್ರಿ ಪರ್ಕಳದಿಂದ ಗೋವಾ ಕಡೆಗೆ ರದ್ದಿ ಪೇಪರ್ ತೆಗೆದುಕೊಂಡು ಹೋಗುತ್ತಿದ್ದ ಕಂಟೈನರ್ ಪರ್ಕಳದ ಶೆಣೈ ಕಂಪೌಂಡ್ ಮೇಲೆ ಮಗುಚಿ ಬಿದ್ದಿದೆ. ಚಾಲಕ ಸಣ್ಣಪುಟ್ಟ ಗಾಯದೊಂದಿಗೆ ಪಾರಾಗಿದ್ದಾರೆ.

ಸದ್ಯ ಈ ಮನೆಯಲ್ಲಿ ಯಾರು ವಾಸು ಮಾಡುತ್ತಿಲ್ಲ. ಹೀಗಾಗಿ ಹೆಚ್ಚಿನ ಅನಾಹುತ ಸಂಭವಿಸಿಲ್ಲ.

ಈ ಭಾಗದಲ್ಲಿ ಸೂಕ್ತ ದಾರಿದೀಪ, ನಾಮ ಫಲಕದ ವ್ಯವಸ್ಥೆ ಇಲ್ಲ. ಹೀಗಾಗಿ ಈ ಸ್ಥಳದಲ್ಲಿ ಪದೇ ಪದೇ ಅಪಘಾತ ನಡೆಯುತ್ತಿದೆ‌. ಈ ಹಿಂದೆಯೂ ಇದೇ ಸ್ಥಳದಲ್ಲಿ ಟ್ಯಾಂಕರ್, ಲಾರಿ ಉರುಳಿಬಿದ್ದಿತ್ತು. ಹಾಗಾಗಿ ಕೂಡಲೇ ದಾರಿ ದೀಪದ ವ್ಯವಸ್ಥೆ ಮಾಡಬೇಕು. ತಿರುವು ಇರುವ ಬಗ್ಗೆ ಸೂಚನೆ ನೀಡುವ ನಾಮಫಲಕ ಅಳವಡಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು