10:15 PM Friday3 - April 2026
ಬ್ರೇಕಿಂಗ್ ನ್ಯೂಸ್
ವಾರ್ ಎಫೆಕ್ಟ್‌‌ | ಇವಿಗೆ ಹೆಚ್ಚಿದ ಡಿಮ್ಯಾಂಡ್: ತಿಂಗಳಲ್ಲಿ 29 ಸಾವಿರಕ್ಕೂ ಅಧಿಕ… ಗೋಪಾಲಪುರದ ಸಂತ ಅಂತೋಣಿ ಚರ್ಚ್ ನಲ್ಲಿ ಗುಡ್ ಫ್ರೈಡೆಯನ್ನು ಶಿಲುಬೆಟ್ಟದಲ್ಲಿ ಶ್ರದ್ದಾ ಭಕ್ತಿಯಿಂದ… ವಿರಾಜಪೇಟೆಯಲ್ಲಿ ಸಂಭ್ರಮದ ಹನುಮ ಜಯಂತಿ ಆಚರಣೆ: ಸಹಸ್ರಾರು ಸಂಖ್ಯೆಯಲ್ಲಿ ಸಮಾಗಮ ಪಾಟೀಲ್ – ಯತ್ನಾಳ್ ವಾಕ್ಸಮರ | ಒಂದು ದಿನ ಅವರೇ ಅಪ್ಪ-ಮಕ್ಕಳನ್ನು ಕೈಬಿಟ್ಟು… ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ

ಇತ್ತೀಚಿನ ಸುದ್ದಿ

ಪರ್ಕಳ: ರಸ್ತೆ ಬದಿಯ ಮನೆಗೆ ಉರುಳಿ ಬಿದ್ದ ಭಾರಿ ಗಾತ್ರದ ಕಂಟೈನರ್; ಚಾಲಕ‌ ಅಪಾಯದಿಂದ ಪಾರು

04/07/2022, 21:35

ಮಣಿಪಾಲ(reporterkarnataka.com): ಪರ್ಕಳದಿಂದ ಗೋವಾ ಕಡೆಗೆ ಸಾಗುತ್ತಿದ್ದ ಭಾರಿ ಗಾತ್ರದ ಕಂಟೈನರ್ ಲಾರಿಯೊಂದು ಕೆಳಪರ್ಕಳದ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮನೆಯೊಂದಕ್ಕೆ ಉರುಳಿ ಬಿದ್ದ ಘಟನೆ ನಡೆದಿದೆ.

ಕಾಂಕ್ರಿಟ್ ರಸ್ತೆಯಿಂದ ಡಾಮಾರು ರಸ್ತೆಗೆ ಸಂಪರ್ಕ ಸಾಧಿಸುವ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಬದಿಯ ಮನೆಗೆ ಉರುಳಿಬಿದ್ದದೆ.

ಭಾನುವಾರ ರಾತ್ರಿ ಪರ್ಕಳದಿಂದ ಗೋವಾ ಕಡೆಗೆ ರದ್ದಿ ಪೇಪರ್ ತೆಗೆದುಕೊಂಡು ಹೋಗುತ್ತಿದ್ದ ಕಂಟೈನರ್ ಪರ್ಕಳದ ಶೆಣೈ ಕಂಪೌಂಡ್ ಮೇಲೆ ಮಗುಚಿ ಬಿದ್ದಿದೆ. ಚಾಲಕ ಸಣ್ಣಪುಟ್ಟ ಗಾಯದೊಂದಿಗೆ ಪಾರಾಗಿದ್ದಾರೆ.

ಸದ್ಯ ಈ ಮನೆಯಲ್ಲಿ ಯಾರು ವಾಸು ಮಾಡುತ್ತಿಲ್ಲ. ಹೀಗಾಗಿ ಹೆಚ್ಚಿನ ಅನಾಹುತ ಸಂಭವಿಸಿಲ್ಲ.

ಈ ಭಾಗದಲ್ಲಿ ಸೂಕ್ತ ದಾರಿದೀಪ, ನಾಮ ಫಲಕದ ವ್ಯವಸ್ಥೆ ಇಲ್ಲ. ಹೀಗಾಗಿ ಈ ಸ್ಥಳದಲ್ಲಿ ಪದೇ ಪದೇ ಅಪಘಾತ ನಡೆಯುತ್ತಿದೆ‌. ಈ ಹಿಂದೆಯೂ ಇದೇ ಸ್ಥಳದಲ್ಲಿ ಟ್ಯಾಂಕರ್, ಲಾರಿ ಉರುಳಿಬಿದ್ದಿತ್ತು. ಹಾಗಾಗಿ ಕೂಡಲೇ ದಾರಿ ದೀಪದ ವ್ಯವಸ್ಥೆ ಮಾಡಬೇಕು. ತಿರುವು ಇರುವ ಬಗ್ಗೆ ಸೂಚನೆ ನೀಡುವ ನಾಮಫಲಕ ಅಳವಡಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು