11:42 PM Saturday20 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

ನಂಜನಗೂಡು ಶ್ರೀಕಂಠೇಶ್ವರಸ್ವಾಮಿ ಸನ್ನಿಧಿಯಲ್ಲಿ ಪಾರ್ಕಿಂಗ್ ಶುಲ್ಕ ಸುಲಿಗೆ: ನಿಗದಿಗಿಂತ ಹೆಚ್ಚು ವಸೂಲಿ; ಭಕ್ತರ ಆಕ್ರೋಶ

08/02/2026, 19:47

*ಶ್ರೀಕಂಠೇಶ್ವರ ದೇವಾಲಯ ಆಡಳಿತ ಮಂಡಳಿ ಗಪ್ ಚುಪ್...!*

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ದಕ್ಷಿಣ ಕಾಶಿ ನಂಜನಗೂಡಿನ ಶ್ರೀಕಂಠೇಶ್ವರನ ದೇವಾಲಯಕ್ಕೆ ಬರುವ ಭಕ್ತರನ್ನ ಪಾರ್ಕಿಂಗ್ ಹೆಸರಿನಲ್ಲಿ ಸುಲಿಗೆ ಮಾಡುತ್ತಿರುವ ಆರೋಪ ಕೇಳಿಬಂದಿದೆ.
ಪಾರ್ಕಿಂಗ್ ಶುಲ್ಕದಲ್ಲಿ ನಿಗದಿತ ದರಕ್ಕಿಂತಲೂ ಹೆಚ್ಚು ವಸೂಲಿ ಮಾಡುವ ಮೂಲಕ ಹಗಲು ದರೋಡೆ ಮಾಡುತ್ತಿದ್ದಾರೆಂದು ಸ್ಥಳೀಯರು ಆರೋಪಿಸಿದ್ದಾರೆ.
ದಾಖಲೆ ಸಮೇತ ರೆಡ್ ಹ್ಯಾಂಡಾಗಿ ಹಿಡಿದರೂ ದೇವಾಲಯ ಆಡಳಿತ ಮಂಡಳಿ ಪ್ರತಿಕ್ರಿಯೆ ನೀಡದೆ ಮೌನಕ್ಕೆ ಶರಣಾಗಿರುವುದು ಹಲವು ಅನುಮಾನಕ್ಕೆ ಎಡ ಮಾಡಿಕೊಟ್ಟಿದೆ. ಬಸ್, ಲಾರಿ ಹಾಗೂ ಮಿನಿಬಸ್ ಗೆ 50 ರೂ., ಕಾರ್ ಜೀಪ್ ಗಳಿಗೆ 25 ರೂ., ಟೆಂಪೋಗಳಿಗೆ 35 ರೂ., ಬೈಕ್ ಸ್ಕೂಟರ್ ಗಳಿಗೆ 5 ರೂ. ಎಂದು ನಾಮಪಲಕದಲ್ಲಿ ದರನಿಗದಿಪಡಿಸಲಾಗಿದೆ.ಆದ್ರೆ ಟೆಂಡರ್ ದಾರರು ಬಸ್ ಗಳಿಗೆ 80 ರೂ. ಶುಲ್ಕ ವಸೂಲಿ ಮಾಡಿದ್ದಾರೆ. ಕಾರು, ಜೀಪ್ ಗಳಿಗೆ 30 ರೂ. ವಸೂಲಿ ಮಾಡಿದ್ದಾರೆ. ಇದಕ್ಕೆ ರಾಜಾರೋಷವಾಗಿ ರಸೀತಿಯನ್ನೂ ಸಹ ನೀಡಿದ್ದಾರೆ. ಪ್ರತಿದಿನ ಸಾವಿರಾರು ವಾಹನಗಳು ಪಾರ್ಕಿಂಗ್ ನಲ್ಲಿ ನಿಲ್ಲುತ್ತಿವೆ. ವಾಹನ ಮಾಲೀಕರಿಂದ ಹೆಚ್ಚಿನ ಹಣ ವಸೂಲಿ ಮಾಡುತ್ತಿದ್ದರೂ ಆಡಳಿತ ಮಂಡಳಿ ಗಪ್ ಚುಪ್ ಆಗಿರುವುದು ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ.ಮತ್ತೊಂದು ದುರಂತವೆಂದರೆ ರಸೀತಿಯಲ್ಲಿ *PARK AT YOUR OWN RISK…LOST AND DAMAGE WE ARE NOT RESPONCIBLE* ಎಂದು ನಮೂದಿಸಲಾಗಿದೆ.

ಪಾರ್ಕಿಂಗ್ ಶುಲ್ಕ ವಸೂಲಿ ಮಾಡಿದ್ರೂ ರಿಸ್ಕ್ ವಾಹನ ಮಾಲೀಕರದ್ದೇ ಎಂಬ ಕಂಡೀಷನ್ ಹಾಸ್ಯಾಸ್ಪದವಾಗಿದೆ. ಕಳೆದು ಹೋದ್ರೆ ಅಥವಾ ಹಾನಿಯಾದ್ರೂ ಅವರು ಜವಾಬ್ದಾರಿ ಅಲ್ಲವಂತೆ. ಹೀಗಿದ್ದಾಗ ಶುಲ್ಕ ವಸೂಲಿ ಯಾಕೆ..? ಎಂಬ ಪ್ರಶ್ನೆಗೆ ಆಡಳಿತ ಮಂಡಳಿ ಉತ್ತರಿಸಬೇಕಿದೆ. ನಿಗದಿತ ಶುಲ್ಕಕ್ಕಿಂತ ಹೆಚ್ಚು ಹಣ ಪಾವತಿಸಿದರೂ ವಾಹನಕ್ಕೆ ಯಾವುದೇ ಭದ್ರತೆ ಇಲ್ಲವಂತೆ. ಇದ್ಯಾವ ನ್ಯಾಯ ಎಂದು ಸ್ಥಳೀಯರು ಪ್ರಶ್ನಿಸಿದ್ದಾರೆ. ಕೂಡಲೇ ದೇವಾಲಯದ ಆಡಳಿತ ಮಂಡಳಿ ಮಧ್ಯ ಪ್ರವೇಶಿಸಿ ಸರಿಪಡಿಸದಿದ್ದಲ್ಲಿ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಬೇಕಾಗುತ್ತದೆ. ತಾಲೂಕು ಆಡಳಿತವಾಗಲಿ ಅಥವಾ ಶಾಸಕ ದರ್ಶನ್ ಧೃವನಾರಾಯಣ್ ಆಗಲಿ ಈ ಬಗ್ಗೆ ಗಂಭೀರವಾಗಿ ಪರಿಗಣಿಸಬೇಕಿದೆ.

ಇತ್ತೀಚಿನ ಸುದ್ದಿ

ಜಾಹೀರಾತು