2:52 PM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಪರ್ತಗಾಳಿ ಸ್ವಾಮೀಜಿ ವಿಧಿವಶ: ರಾಷ್ಟ್ರಪತಿ ಕೋವಿಂದ್, ಪ್ರಧಾನಿ ಮೋದಿ ಸಂತಾಪ

20/07/2021, 07:49

ನವದೆಹಲಿ: ಗೋಕರ್ಣ ಪರ್ತಗಾಳಿ ಮಠಾಧೀಶರಾದ ಶ್ರೀ ವಿದ್ಯಾಧಿರಾಜ ಸ್ವಾಮೀಜಿಯವರು ವಿಧಿವಶರಾಗಿರುವ ಬಗ್ಗೆ ರಾಷ್ಪ್ರಪತಿ ರಾಮ್ ನಾಥ್ ಕೋವಿಂದ್ ಹಾಗೂ ಪ್ರಧಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ.

ಸ್ವಾಮೀಜಿಯವರು ತನ್ನ ಅಸಂಖ್ಯಾತ ಅನುಯಾಯಿಗಳನ್ನು ಬಿಟ್ಟು ಹರಿಪಾದ ಸೇರಿದ್ದಾರೆ. ದಾನದ ಮೂಲಕ ಅವರು ಹೆಸರು ಪಡೆದಿದ್ದರು. ಅವರ ಆಧ್ಯಾತ್ಮಿಕ ಸಂದೇಶ ಹಾಗೂ ಆರೋಗ್ಯ ಮತ್ತು ಶಿಕ್ಷಣಕ್ಕೆ ನೀಡಿದ ಸೇವೆ ಅನುಪಮವಾದದ್ದು ಎಂದು ರಾಷ್ಟ್ರಪತಿಯವರು ಟ್ವೀಟ್ ಮೂಲಕ ತನ್ನ ಸಂತಾಪ ವ್ಯಕ್ತಪಡಿಸಿದ್ದಾರೆ.

ಸಮಾಜಕ್ಕೆ ಸ್ವಾಮೀಜಿ ನೀಡಿದ ಅನನ್ಯ ಸೇವೆ ಸ್ಮರಣೀಯ ಎಂದು ಪ್ರಧಾನಿ ತನ್ನ ಸಂತಾಪದಲ್ಲಿ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು