6:42 AM Monday26 - January 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ…

ಇತ್ತೀಚಿನ ಸುದ್ದಿ

ಪಶುಸಂಗೋಪನಾ ಮೂಲಸೌಕರ್ಯ ಅಭಿವೃದ್ಧಿ ನಿಧಿ ಯೋಜನೆ 2 ವರ್ಷಗಳವರೆಗೆ ವಿಸ್ತರಿಸಲು ಮನವಿ

10/05/2023, 20:50

ಮಂಗಳೂರು(reporterkarnataka.com): ಕರ್ನಾಟಕ ಪೌಲ್ಟ್ರಿ ಫಾರ್ಮರ್ ಆ್ಯಂಡ್ ಬ್ರೀಡರ್ಸ್ ಅಸೋಸಿಯೇಶನ್ ( ಕೆಪಿಎಫ್‍ಬಿಎ ), ಮಹಾರಾಷ್ಟ್ರದ ಪೌಲ್ಟ್ರಿ ಫಾರ್ಮರ್ ಆ್ಯಂಡ್ ಬ್ರೀಡರ್ಸ್ ಅಸೋಸಿಯೇಶನ್, ಪಶ್ಚಿಮ ಬಂಗಾಳ ಪೌಲ್ಟ್ರಿ ಫೆಡರೇಶನ್ ಮತ್ತು ವೆಂಟ್ರಲ್ ಇಂಡಿಯಾ ವೆಂಕೋಬ್ ಬ್ರಾಯ್ಲರ್ ಬ್ರೀಡರ್ಸ್ ಹ್ಯಾಚರೀಸ್ ಅಸೋಸಿಯೇಷನ್ ಅವರು ಭಾರತ ಸರ್ಕಾರದ ಪಶುಸಂಗೋಪನೆ ಮತ್ತು ಹೈನುಗಾರಿಕೆ ಇಲಾಖೆಯ ಕಾರ್ಯದರ್ಶಿ ಡಾ.ರಾಜೇಶ್ ಕುಮಾರ್ ಸಿಂಗ್ ಅವರಿಗೆ ಪತ್ರ ಬರೆದು, ಪಶುಸಂಗೋಪನಾ ಮೂಲಸೌಕರ್ಯ ಅಭಿವೃದ್ಧಿ ನಿಧಿ ಯೋಜನೆಯನ್ನು ಇನ್ನೂ ಎರಡು ವರ್ಷಗಳವರೆಗೆ ವಿಸ್ತರಿಸುವಂತೆ ಮನವಿ ಮಾಡಿದೆ.
ಕೆಪಿಎಫ್‍ಬಿಎ ಅಧ್ಯಕ್ಷ ಡಾ.ಬಿ.ಸುಶಾಂತ್ ರೈ ಅವರು ಮಾತನಾಡಿ, ಆತ್ಮನಿರ್ಭರ ಭಾರತ ಅಭಿಯಾನ ಉತ್ತೇಜನ ಪ್ಯಾಕೇಜ್‍ನ ಭಾಗವಾಗಿ ಪ್ರಾರಂಭಿಸಲಾದ ಈ ಯೋಜನೆಯು ಫೀಡ್ ಮಿಲ್‍ಗಳು, ಹ್ಯಾಚರಿಗಳು ಮತ್ತು ಸಂಸ್ಕರಣಾ ಘಟಕಗಳು ಸೇರಿದಂತೆ ಪಶುಸಂಗೋಪನಾ ಮೂಲಸೌಕರ್ಯಗಳಲ್ಲಿ ಹೂಡಿಕೆಗೆ ಪ್ರೋತ್ಸಾಹ ನೀಡುವ ಮೂಲಕ ರೈತರಿಗೆ ಹೆಚ್ಚು ಪ್ರಯೋಜನಕಾರಿಯಾಗಿದೆ. ಈ ಯೋಜನೆಯ ಮೂಲಕ ನೀಡಲಾಗುವ ಮೂರು ಪ್ರತಿಶತದಷ್ಟು ಬಡ್ಡಿ ಸಹಾಯಧನ ರೈತರಿಗೆ ಗಮನಾರ್ಹ ಉತ್ತೇಜನವನ್ನು ನೀಡಿದೆ. ಮಾ.31, 2023 ರಂದು ಕೊನೆಗೊಂಡ ಯೋಜನೆಯ ವಿಸ್ತರಣೆಯು ಮೂಲಸೌಕರ್ಯ ಯೋಜನೆಗಳನ್ನು ಸ್ಥಾಪಿಸುವುದರಿಂದ ಇನ್ನೂ ಅನೇಕ ರೈತರಿಗೆ ಪ್ರಯೋಜನ ಪಡೆಯಲು ಸಹಾಯ ಮಾಡುತ್ತದೆ ಎಂದರು.
ಈ ಉಪಕ್ರಮವು ರೈತರು ಮತ್ತು ಗ್ರಾಹಕರಿಗೆ ಅತ್ಯಗತ್ಯವಾದ ಗುಣಮಟ್ಟದ ಪ್ರಾಣಿ ಪ್ರೋಟಿನ್‍ಗಳಿಗೆ ಹೆಚ್ಚುತ್ತಿರುವ ಬೇಡಿಕೆಯನ್ನು ಪೂರೈಸಲು ಸಹಾಯ ಮಾಡುತ್ತದೆ. ಈ ಯೋಜನೆಯನ್ನು ವಿಸ್ತರಿಸುವ ಮೂಲಕ, ಆರ್ಥಿಕ ಬೆಳವಣಿಗೆಯನ್ನು ಹೆಚ್ಚಿಸುವುದರ ಜತೆಗೆ ಉದ್ಯೋಗವನ್ನು ಸೃಷ್ಟಿಸುವ ಮೂಲಸೌಕರ್ಯ ಯೋಜನೆಗಳನ್ನು ಸ್ಥಾಪಿಸಲು ಸರ್ಕಾರವು ಉದ್ಯಮಿಗಳಿಗೆ ಸಹಾಯ ಮಾಡುತ್ತದೆ ಎಂದು ಪ್ರಕಟಣೆ ಮೂಲಕ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು