2:09 AM Monday23 - March 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್… ಮಸ್ಕಿ ಪುರಸಭೆ ಮುಖ್ಯಾಧಿಕಾರಿಗೆ ಹೆಚ್ಚುವರಿ ಹೊಣೆ: ಹೆಚ್ಚುತ್ತಿರುವ ರಸ್ತೆ, ನೀರು, ಸ್ವಚ್ಛತೆ ಸಮಸ್ಯೆ ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ

ಇತ್ತೀಚಿನ ಸುದ್ದಿ

ಪತಿಯಿಂದ ಪತ್ನಿಯ ಅಪಹರಣ: ಮನೆಯಿಂದ ಹೊರ ಹಾಕಿದ ಮಡದಿಯನ್ನು ಸಂಬಂಧಿಕರ ಮನೆಯಿಂದ ಕಿಡ್ನಾಪ್

14/01/2025, 21:19

ದಾವಣಗೆರೆ(reporterkarnataka.com): ಪತ್ನಿಯನ್ನು ಪತಿಯೇ ಅಪಹರಿಸಿರುವ ವಿಲಕ್ಷಣ ಘಟನೆ ಹೊನ್ನಾಳಿ ತಾಲೂಕಿನ ದಿಡಗೂರು ಗ್ರಾಮದಲ್ಲಿ ನಡೆದಿದೆ
ಹಾಡಹಗಲೇ ಸಂಬಂಧಿಕರ ಮನೆಯಲ್ಲಿದ್ದ ಪತ್ನಿ ಅನುಂಧತಿಯನ್ನು ಪತಿ ಕಾರ್ತಿಕ್ ಅಪಹರಣ ಮಾಡಿದ ಆರೋಪ ಕೇಳಿಬಂದಿದೆ. ಈ ಸಂಬಂಧ ಮಹಿಳೆಯ ಕುಟುಂಬಸ್ಥರು ಹೊನ್ನಾಳಿ ಪೊಲೀಸ್​ ಠಾಣೆಯಲ್ಲಿ ಅಪಹರಣ ಪ್ರಕರಣ ದಾಖಲು ಮಾಡಿದ್ದಾರೆ.‌ ಅಪಹರಣದ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ನರಸಿಪುರ ಗ್ರಾಮದ ಕಾರ್ತಿಕ್ ಜೊತೆ ನಾಲ್ಕು ವರ್ಷಗಳ ಹಿಂದೆ ಅನುಂಧತಿಗೆ ವಿವಾಹ ಮಾಡಲಾಗಿತ್ತು. ದಂಪತಿಗೆ ಗಂಡು ಮಗು ಇದೆ. ಆರು ತಿಂಗಳ ಹಿಂದೆ ಪತಿ ಕಾರ್ತಿಕ್​ ಮತ್ತು ಕುಟುಂಬಸ್ಥರು ಅನುಂಧತಿ ಮತ್ತು ಮಗನನ್ನು ಮನೆಯಿಂದ ಹೊರ ಹಾಕಿದ್ದರು. ಇದರಿಂದ ಅನುಂಧತಿ ತನ್ನ ಮಗನೊಂದಿಗೆ ಹೊನ್ನಾಳಿಯ ದಿಡಗೂರು ಗ್ರಾಮದ ಅತ್ತೆ ಮನೆ ಸೇರಿದ್ದರು. ಜ.12 ರಂದು ಪತಿ ಕಾರ್ತಿಕ್​ ಮತ್ತು ಕುಟುಂಬಸ್ಥರು ಮನೆಗೆ ನುಗ್ಗಿ ಅನುಂಧತಿಯನ್ನು ಅಪಹರಿಸಿಕೊಂಡು ಹೋಗಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು