2:36 AM Friday6 - February 2026
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,…

ಇತ್ತೀಚಿನ ಸುದ್ದಿ

ಪತಿಯಿಂದ ಪತ್ನಿಯ ಅಪಹರಣ: ಮನೆಯಿಂದ ಹೊರ ಹಾಕಿದ ಮಡದಿಯನ್ನು ಸಂಬಂಧಿಕರ ಮನೆಯಿಂದ ಕಿಡ್ನಾಪ್

14/01/2025, 21:19

ದಾವಣಗೆರೆ(reporterkarnataka.com): ಪತ್ನಿಯನ್ನು ಪತಿಯೇ ಅಪಹರಿಸಿರುವ ವಿಲಕ್ಷಣ ಘಟನೆ ಹೊನ್ನಾಳಿ ತಾಲೂಕಿನ ದಿಡಗೂರು ಗ್ರಾಮದಲ್ಲಿ ನಡೆದಿದೆ
ಹಾಡಹಗಲೇ ಸಂಬಂಧಿಕರ ಮನೆಯಲ್ಲಿದ್ದ ಪತ್ನಿ ಅನುಂಧತಿಯನ್ನು ಪತಿ ಕಾರ್ತಿಕ್ ಅಪಹರಣ ಮಾಡಿದ ಆರೋಪ ಕೇಳಿಬಂದಿದೆ. ಈ ಸಂಬಂಧ ಮಹಿಳೆಯ ಕುಟುಂಬಸ್ಥರು ಹೊನ್ನಾಳಿ ಪೊಲೀಸ್​ ಠಾಣೆಯಲ್ಲಿ ಅಪಹರಣ ಪ್ರಕರಣ ದಾಖಲು ಮಾಡಿದ್ದಾರೆ.‌ ಅಪಹರಣದ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ನರಸಿಪುರ ಗ್ರಾಮದ ಕಾರ್ತಿಕ್ ಜೊತೆ ನಾಲ್ಕು ವರ್ಷಗಳ ಹಿಂದೆ ಅನುಂಧತಿಗೆ ವಿವಾಹ ಮಾಡಲಾಗಿತ್ತು. ದಂಪತಿಗೆ ಗಂಡು ಮಗು ಇದೆ. ಆರು ತಿಂಗಳ ಹಿಂದೆ ಪತಿ ಕಾರ್ತಿಕ್​ ಮತ್ತು ಕುಟುಂಬಸ್ಥರು ಅನುಂಧತಿ ಮತ್ತು ಮಗನನ್ನು ಮನೆಯಿಂದ ಹೊರ ಹಾಕಿದ್ದರು. ಇದರಿಂದ ಅನುಂಧತಿ ತನ್ನ ಮಗನೊಂದಿಗೆ ಹೊನ್ನಾಳಿಯ ದಿಡಗೂರು ಗ್ರಾಮದ ಅತ್ತೆ ಮನೆ ಸೇರಿದ್ದರು. ಜ.12 ರಂದು ಪತಿ ಕಾರ್ತಿಕ್​ ಮತ್ತು ಕುಟುಂಬಸ್ಥರು ಮನೆಗೆ ನುಗ್ಗಿ ಅನುಂಧತಿಯನ್ನು ಅಪಹರಿಸಿಕೊಂಡು ಹೋಗಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು