4:46 PM Friday30 - January 2026
ಬ್ರೇಕಿಂಗ್ ನ್ಯೂಸ್
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ ಕನ್ನಡ ಭಾಷೆ ಎಂದರೆ ಹಲವು ಆಯಾಮಗಳ ಸಾಧ್ಯತೆ: ಪುರುಷೋತ್ತಮ ಬಿಳಿಮಲೆ 600ಕ್ಕೂ ಹೆಚ್ಚು ಜಿಟಿಸಿಸಿ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಲಿರುವ ರ‍್ಯಾಂಗ್‌ಸನ್ಸ್‌ ಏರೋಸ್ಪೇಸ್, ​​ಎಕ್ಸೈಡ್ ಎನರ್ಜಿ ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ…

ಇತ್ತೀಚಿನ ಸುದ್ದಿ

ಪತಿ-ಪತ್ನಿ ಮಧ್ಯೆ ಮನಸ್ತಾಪ: ಗಂಡ ನೇಣಿಗೆ ಶರಣು; ಅಂತ್ಯ ಸಂಸ್ಕಾರಕ್ಕೂ ಬಾರದ ಸತಿ!!

05/03/2022, 09:30

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಗಂಡ ಹೆಂಡಿರು ಜಗಳ ಉಂಡು ಮಲಗುವ ತನಕ ಎಂಬ ಗಾದೆ ಮಾತಿದೆ. ಆದರೆ ಇಲ್ಲೊಬ್ಬ ಗಂಡ ಪತ್ನಿಯ ವಿಷಯದಲ್ಲಿ ಮನನೊಂದ ನೇಣಿಗೆ ಶರಣಾದ ದಾರುಣ ಘಟನೆ ನಡೆದಿದೆ.

ಅಥಣಿ ತಾಲೂಕಿನ ತಾಂವಶಿ ಗ್ರಾಮದ ಸುನೀಲ ಅರ್ಜುನ್ ಹೊಕ್ಕುಂಡಿ”(26) ಆತ್ಮಹತ್ಯೆಗೆ ಶರಣಾದ ಯುವಕ.

ಒಂದು ವರ್ಷದ ಹಿಂದೆ ಅಷ್ಟೇ ಮಹಾರಾಷ್ಟ್ರದ ಸಾಂಗ್ಲಿ ನಗರದ ಯೋಗೀತಾ ಜೋತೆ ಸುನೀಲ ವಿವಾಹವಾಗಿತ್ತು. ಮದುವೆಯ ನಂತರ ಆರು ತಿಂಗಳ ವರೆಗೆ ದಾಂಪತ್ಯ ಜೀವನ ಚನ್ನಾಗಿಯೇ ನಡೆದಿತ್ತು. ಸುನೀಲ ತನ್ನ ದಿನನಿತ್ಯದ ಬಾರ್ ಬೆಂಡಿಂಗ್ ಕೆಲಸ ಮಾಡಿಕೊಂಡು ತಂದೆ,ತಾಯಿ ಹಾಗೂ ಒಬ್ಬ ಸಹೋದರನ ಜತೆ ಒಂದೇ ಕುಟುಂಬದಲ್ಲಿ ವಾಸವಿದ್ದರೂ.

ಎರಡು ತಿಂಗಳ ಹಿಂದೆ ಸುನೀಲ ಪತ್ನಿ ಯೋಗೀತಾ  ತವರಮನೆಗೆ ಹೋಗಿ ಬರುತ್ತೇನೆ ಅಂತಾ ಹೋದವಳು ನಂತರ ಮರಳಿ ಗಂಡನ ಮನೆಗೆ ಬರಲು ನಿರಾಕರಿಸಿದ್ದಾಳೆ. ಸುನೀಲ ತಂದೆ ತಾಯಿ ಕೂಡಾ ಯೋಗೀತಾ ಬರಲು ಮನವಲಿಸಿದರು ಕೂಡಾ ಬಾರಲು ನಿರಾಕರಿದದಕ್ಕೆ ಮನ ನೊಂದು ಸುನೀಲ ಶುಕ್ರವಾರ ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ. 

ಮೃತನ ಪತ್ನಿ ಯೋಗೀತಾ ಕೊನೆಯ ಪಕ್ಷ ಅಂತ್ಯ ಸೌಂಸ್ಕಾರಕ್ಕೂ ಬಾರದೆ ಇರೋದು ಹಲವು ಅನುಮಾನಕ್ಕೆ ಕಾರಣವಾಗಿದೆ. ಈ ಕುರಿತು ಮೃತ ಸುನೀಲ ತಂದೆ ಅರ್ಜುನ್ ಹೊಕ್ಕುಂಡಿ ಅಥಣಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು