11:10 PM Saturday4 - July 2026
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ…

ಇತ್ತೀಚಿನ ಸುದ್ದಿ

ಪತಿ-ಪತ್ನಿ ಮಧ್ಯೆ ಮನಸ್ತಾಪ: ಗಂಡ ನೇಣಿಗೆ ಶರಣು; ಅಂತ್ಯ ಸಂಸ್ಕಾರಕ್ಕೂ ಬಾರದ ಸತಿ!!

05/03/2022, 09:30

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಗಂಡ ಹೆಂಡಿರು ಜಗಳ ಉಂಡು ಮಲಗುವ ತನಕ ಎಂಬ ಗಾದೆ ಮಾತಿದೆ. ಆದರೆ ಇಲ್ಲೊಬ್ಬ ಗಂಡ ಪತ್ನಿಯ ವಿಷಯದಲ್ಲಿ ಮನನೊಂದ ನೇಣಿಗೆ ಶರಣಾದ ದಾರುಣ ಘಟನೆ ನಡೆದಿದೆ.

ಅಥಣಿ ತಾಲೂಕಿನ ತಾಂವಶಿ ಗ್ರಾಮದ ಸುನೀಲ ಅರ್ಜುನ್ ಹೊಕ್ಕುಂಡಿ”(26) ಆತ್ಮಹತ್ಯೆಗೆ ಶರಣಾದ ಯುವಕ.

ಒಂದು ವರ್ಷದ ಹಿಂದೆ ಅಷ್ಟೇ ಮಹಾರಾಷ್ಟ್ರದ ಸಾಂಗ್ಲಿ ನಗರದ ಯೋಗೀತಾ ಜೋತೆ ಸುನೀಲ ವಿವಾಹವಾಗಿತ್ತು. ಮದುವೆಯ ನಂತರ ಆರು ತಿಂಗಳ ವರೆಗೆ ದಾಂಪತ್ಯ ಜೀವನ ಚನ್ನಾಗಿಯೇ ನಡೆದಿತ್ತು. ಸುನೀಲ ತನ್ನ ದಿನನಿತ್ಯದ ಬಾರ್ ಬೆಂಡಿಂಗ್ ಕೆಲಸ ಮಾಡಿಕೊಂಡು ತಂದೆ,ತಾಯಿ ಹಾಗೂ ಒಬ್ಬ ಸಹೋದರನ ಜತೆ ಒಂದೇ ಕುಟುಂಬದಲ್ಲಿ ವಾಸವಿದ್ದರೂ.

ಎರಡು ತಿಂಗಳ ಹಿಂದೆ ಸುನೀಲ ಪತ್ನಿ ಯೋಗೀತಾ  ತವರಮನೆಗೆ ಹೋಗಿ ಬರುತ್ತೇನೆ ಅಂತಾ ಹೋದವಳು ನಂತರ ಮರಳಿ ಗಂಡನ ಮನೆಗೆ ಬರಲು ನಿರಾಕರಿಸಿದ್ದಾಳೆ. ಸುನೀಲ ತಂದೆ ತಾಯಿ ಕೂಡಾ ಯೋಗೀತಾ ಬರಲು ಮನವಲಿಸಿದರು ಕೂಡಾ ಬಾರಲು ನಿರಾಕರಿದದಕ್ಕೆ ಮನ ನೊಂದು ಸುನೀಲ ಶುಕ್ರವಾರ ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ. 

ಮೃತನ ಪತ್ನಿ ಯೋಗೀತಾ ಕೊನೆಯ ಪಕ್ಷ ಅಂತ್ಯ ಸೌಂಸ್ಕಾರಕ್ಕೂ ಬಾರದೆ ಇರೋದು ಹಲವು ಅನುಮಾನಕ್ಕೆ ಕಾರಣವಾಗಿದೆ. ಈ ಕುರಿತು ಮೃತ ಸುನೀಲ ತಂದೆ ಅರ್ಜುನ್ ಹೊಕ್ಕುಂಡಿ ಅಥಣಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು