2:52 AM Friday15 - May 2026
ಬ್ರೇಕಿಂಗ್ ನ್ಯೂಸ್
ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ…

ಇತ್ತೀಚಿನ ಸುದ್ದಿ

ಪತಿ-ಪತ್ನಿ ಮಧ್ಯೆ ಮನಸ್ತಾಪ: ಗಂಡ ನೇಣಿಗೆ ಶರಣು; ಅಂತ್ಯ ಸಂಸ್ಕಾರಕ್ಕೂ ಬಾರದ ಸತಿ!!

05/03/2022, 09:30

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಗಂಡ ಹೆಂಡಿರು ಜಗಳ ಉಂಡು ಮಲಗುವ ತನಕ ಎಂಬ ಗಾದೆ ಮಾತಿದೆ. ಆದರೆ ಇಲ್ಲೊಬ್ಬ ಗಂಡ ಪತ್ನಿಯ ವಿಷಯದಲ್ಲಿ ಮನನೊಂದ ನೇಣಿಗೆ ಶರಣಾದ ದಾರುಣ ಘಟನೆ ನಡೆದಿದೆ.

ಅಥಣಿ ತಾಲೂಕಿನ ತಾಂವಶಿ ಗ್ರಾಮದ ಸುನೀಲ ಅರ್ಜುನ್ ಹೊಕ್ಕುಂಡಿ”(26) ಆತ್ಮಹತ್ಯೆಗೆ ಶರಣಾದ ಯುವಕ.

ಒಂದು ವರ್ಷದ ಹಿಂದೆ ಅಷ್ಟೇ ಮಹಾರಾಷ್ಟ್ರದ ಸಾಂಗ್ಲಿ ನಗರದ ಯೋಗೀತಾ ಜೋತೆ ಸುನೀಲ ವಿವಾಹವಾಗಿತ್ತು. ಮದುವೆಯ ನಂತರ ಆರು ತಿಂಗಳ ವರೆಗೆ ದಾಂಪತ್ಯ ಜೀವನ ಚನ್ನಾಗಿಯೇ ನಡೆದಿತ್ತು. ಸುನೀಲ ತನ್ನ ದಿನನಿತ್ಯದ ಬಾರ್ ಬೆಂಡಿಂಗ್ ಕೆಲಸ ಮಾಡಿಕೊಂಡು ತಂದೆ,ತಾಯಿ ಹಾಗೂ ಒಬ್ಬ ಸಹೋದರನ ಜತೆ ಒಂದೇ ಕುಟುಂಬದಲ್ಲಿ ವಾಸವಿದ್ದರೂ.

ಎರಡು ತಿಂಗಳ ಹಿಂದೆ ಸುನೀಲ ಪತ್ನಿ ಯೋಗೀತಾ  ತವರಮನೆಗೆ ಹೋಗಿ ಬರುತ್ತೇನೆ ಅಂತಾ ಹೋದವಳು ನಂತರ ಮರಳಿ ಗಂಡನ ಮನೆಗೆ ಬರಲು ನಿರಾಕರಿಸಿದ್ದಾಳೆ. ಸುನೀಲ ತಂದೆ ತಾಯಿ ಕೂಡಾ ಯೋಗೀತಾ ಬರಲು ಮನವಲಿಸಿದರು ಕೂಡಾ ಬಾರಲು ನಿರಾಕರಿದದಕ್ಕೆ ಮನ ನೊಂದು ಸುನೀಲ ಶುಕ್ರವಾರ ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ. 

ಮೃತನ ಪತ್ನಿ ಯೋಗೀತಾ ಕೊನೆಯ ಪಕ್ಷ ಅಂತ್ಯ ಸೌಂಸ್ಕಾರಕ್ಕೂ ಬಾರದೆ ಇರೋದು ಹಲವು ಅನುಮಾನಕ್ಕೆ ಕಾರಣವಾಗಿದೆ. ಈ ಕುರಿತು ಮೃತ ಸುನೀಲ ತಂದೆ ಅರ್ಜುನ್ ಹೊಕ್ಕುಂಡಿ ಅಥಣಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು