5:30 AM Wednesday23 - April 2025
ಬ್ರೇಕಿಂಗ್ ನ್ಯೂಸ್
ಕಾಶ್ಮೀರದಲ್ಲಿ ಕನ್ನಡಿಗರ ಮೇಲೆ ಉಗ್ರರ ದಾಳಿಗೆ ಶಿವಮೊಗ್ಗದ ಉದ್ಯಮಿ ಸಾವು: ಮುಖ್ಯಮಂತ್ರಿ ತುರ್ತುಸಭೆ;… Terrorist Attack | ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ: ಭೀಕರ ನರಮೇಧಕ್ಕೆ ಸಾವಿನ… Mandya | ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ವರದಿ ಸರಿಯಿಲ್ಲವೆನ್ನಲು ಬಿಜೆಪಿಗೆ ನೈತಿಕ… ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ: ಶಿವಮೊಗ್ಗದ ಉದ್ಯಮಿ ಸಹಿತ 5ಕ್ಕೂ ಹೆಚ್ಚು… Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ…

ಇತ್ತೀಚಿನ ಸುದ್ದಿ

ಪಠ್ಯದಲ್ಲಿ ಭಗವದ್ಗೀತೆ ಸೇರ್ಪಡೆಗೆ ವಿರೋಧವಿಲ್ಲ: ಕಾಂಗ್ರೆಸ್ ಉಪ ನಾಯಕ ಯು.ಟಿ.ಖಾದರ್

21/03/2022, 00:07

ಬೆಂಗಳೂರು(reporterkarnataka.com):

ಪಠ್ಯದಲ್ಲಿ ಭಗವದ್ಗೀತೆ ಸೇರ್ಪಡೆ ವಿಚಾರಕ್ಕೆ ನಮ್ಮ ವಿರೋಧವಿಲ್ಲ, ಎಲ್ಲಾ ಧರ್ಮಗಳನ್ನೂ ನಾವು ಸಮಾನವಾಗಿ ಗೌರವಿಸುತ್ತೇವೆ ಎಂದು ಮಾಜಿ ಸಚಿವ ಯುಟಿ.ಖಾದರ್ ಹೇಳಿದ್ದಾರೆ.

ನಗರದ ಖಾಸಗಿ ಹೋಟೆಲ್ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಖಾದರ್‌, ಭಗವದ್ಗೀತೆಯ ಮೌಲ್ಯಗಳು ಜನರ ಹೃದಯ ಸ್ವಚ್ಛಗೊಳಿಸುತ್ತದೆ. ಅದರಂತೆ ಕುರಾನ್, ಬೈಬಲ್ ಸೇರಿದಂತೆ ಎಲ್ಲ ಧರ್ಮದವರ ಗ್ರಂಥಗಳ ಬಗ್ಗೆ ಮಕ್ಕಳಿಗೆ ಪರಿಚಯವಾಗಲಿ ಎಂಬುದು ನಮ್ಮ ಒತ್ತಾಯ. ಮಹಾನ್ ವ್ಯಕ್ತಿಗಳಾದ ಶ್ರಿ ಬಸವಣ್ಣನವರ ಸಾಹಿತ್ಯ, ವಚನಗಳು, ಗ್ರಂಥಗಳ ಬಗ್ಗೆ ಹಾಗೂ ಕೋಟೆ ಚೆನ್ನಯ್ಯ ಅವರ ವ್ಯಕ್ತಿತ್ವವೂ ಮಕ್ಕಳಿಗೆ ಪರಿಚಯವಾಗಲಿ. ಆದರೆ ಯುವಜನರು, ವಿದ್ಯಾರ್ಥಿಗಳಲ್ಲಿ ಕೋಮುಭಾವನೆ ಬೆಳೆಯದಂತೆ ಎಚ್ಚರ ವಹಿಸಬೇಕು ಎಂದರು.

ಹಿಜಾಬ್ ವಿಚಾರವನ್ನು ಅನಗತ್ಯವಾಗಿ ಚರ್ಚೆಗೆಳೆದು ತರಲಾಗಿದೆ. ಉಡುಪಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಒಟ್ಟು 83 ವಿದ್ಯಾರ್ಥಿಗಳಲ್ಲಿ 6 ವಿದ್ಯಾರ್ಥಿಗಳು ಮಾತ್ರವೇ ಹಿಜಾಬ್ ಗೆ ಒತ್ತಾಯಿಸಿದ್ದರು. ಕೆಲವರು ಅದನ್ನೇ ದೊಡ್ಡ ರಾದ್ದಾಂತ ಮಾಡಿದರು. ಮಕ್ಕಳಲ್ಲಿನ ಕೋಮು ಸೌಹಾರ್ದಕ್ಕೆ ದಕ್ಕೆಯುಂಟುಮಾಡಬಾರದು. ಈ ರೀತಿ ಮಾಡಿದರೆ ಮಕ್ಕಳ‌ ಹಾಗೂ ದೇಶದ ಭವಿಷ್ಯಕ್ಕೆ ಮಾರಕವಾಗಲಿದೆ ಎಂದರು. ಬಳ್ಳಾರಿ ನಗರದ ಮಹಾ ಜನತೆ ಆರ್ಶಿವಾದದಿಂದ ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಸ್ಪಷ್ಟ ಬಹುಮತ ದೊರೆತಿದ್ದು, ಪಾಲಿಕೆ ಚುಕ್ಕಾಣಿ ಹಿಡಿದಿದೆ. ಮೇಯರ್ ಆಗಿ ರಾಜೇಶ್ವರಿ ಸುಬ್ಬರಾಯಡು ಹಾಗೂ ಉಪ‌ಮೇಯರ್ ಮಾಲಾನ್ ಬೀ ಅವರು ಆಯ್ಕೆಯಾಗಿದ್ದು, ಎಲ್ಲರಿಗೂ ಅಭಿನಂದನೆಗಳನ್ನು ಸಲ್ಲಿಸುವೆ ಎಂದರು.

ಈ ಸಂದರ್ಭದಲ್ಲಿ ಮಾಜಿ ಸಂಸದ ವಿ.ಎಸ್.ಉಗ್ರಪ್ಪ, ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಮಹ್ಮದ್ ರಫೀಕ್, ಚುನಾವಣಾ ವೀಕ್ಷಕರಾದ ಚಂದ್ರಪ್ಪ, ಮಂಜುನಾಥ್ ಮತ್ತಿತರರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು