8:51 PM Friday6 - February 2026
ಬ್ರೇಕಿಂಗ್ ನ್ಯೂಸ್
ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,… ಕಂಬನಿ ನಡುವೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್‌ ಅಂತಿಮವಿಧಿ: ಬನ್ನೇರುಘಟ್ಟದ ಕಾಸಾಗ್ರೌಂಡ್…

ಇತ್ತೀಚಿನ ಸುದ್ದಿ

ಪಠ್ಯದಲ್ಲಿ ಭಗವದ್ಗೀತೆ ಸೇರ್ಪಡೆಗೆ ವಿರೋಧವಿಲ್ಲ: ಕಾಂಗ್ರೆಸ್ ಉಪ ನಾಯಕ ಯು.ಟಿ.ಖಾದರ್

21/03/2022, 00:07

ಬೆಂಗಳೂರು(reporterkarnataka.com):

ಪಠ್ಯದಲ್ಲಿ ಭಗವದ್ಗೀತೆ ಸೇರ್ಪಡೆ ವಿಚಾರಕ್ಕೆ ನಮ್ಮ ವಿರೋಧವಿಲ್ಲ, ಎಲ್ಲಾ ಧರ್ಮಗಳನ್ನೂ ನಾವು ಸಮಾನವಾಗಿ ಗೌರವಿಸುತ್ತೇವೆ ಎಂದು ಮಾಜಿ ಸಚಿವ ಯುಟಿ.ಖಾದರ್ ಹೇಳಿದ್ದಾರೆ.

ನಗರದ ಖಾಸಗಿ ಹೋಟೆಲ್ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಖಾದರ್‌, ಭಗವದ್ಗೀತೆಯ ಮೌಲ್ಯಗಳು ಜನರ ಹೃದಯ ಸ್ವಚ್ಛಗೊಳಿಸುತ್ತದೆ. ಅದರಂತೆ ಕುರಾನ್, ಬೈಬಲ್ ಸೇರಿದಂತೆ ಎಲ್ಲ ಧರ್ಮದವರ ಗ್ರಂಥಗಳ ಬಗ್ಗೆ ಮಕ್ಕಳಿಗೆ ಪರಿಚಯವಾಗಲಿ ಎಂಬುದು ನಮ್ಮ ಒತ್ತಾಯ. ಮಹಾನ್ ವ್ಯಕ್ತಿಗಳಾದ ಶ್ರಿ ಬಸವಣ್ಣನವರ ಸಾಹಿತ್ಯ, ವಚನಗಳು, ಗ್ರಂಥಗಳ ಬಗ್ಗೆ ಹಾಗೂ ಕೋಟೆ ಚೆನ್ನಯ್ಯ ಅವರ ವ್ಯಕ್ತಿತ್ವವೂ ಮಕ್ಕಳಿಗೆ ಪರಿಚಯವಾಗಲಿ. ಆದರೆ ಯುವಜನರು, ವಿದ್ಯಾರ್ಥಿಗಳಲ್ಲಿ ಕೋಮುಭಾವನೆ ಬೆಳೆಯದಂತೆ ಎಚ್ಚರ ವಹಿಸಬೇಕು ಎಂದರು.

ಹಿಜಾಬ್ ವಿಚಾರವನ್ನು ಅನಗತ್ಯವಾಗಿ ಚರ್ಚೆಗೆಳೆದು ತರಲಾಗಿದೆ. ಉಡುಪಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಒಟ್ಟು 83 ವಿದ್ಯಾರ್ಥಿಗಳಲ್ಲಿ 6 ವಿದ್ಯಾರ್ಥಿಗಳು ಮಾತ್ರವೇ ಹಿಜಾಬ್ ಗೆ ಒತ್ತಾಯಿಸಿದ್ದರು. ಕೆಲವರು ಅದನ್ನೇ ದೊಡ್ಡ ರಾದ್ದಾಂತ ಮಾಡಿದರು. ಮಕ್ಕಳಲ್ಲಿನ ಕೋಮು ಸೌಹಾರ್ದಕ್ಕೆ ದಕ್ಕೆಯುಂಟುಮಾಡಬಾರದು. ಈ ರೀತಿ ಮಾಡಿದರೆ ಮಕ್ಕಳ‌ ಹಾಗೂ ದೇಶದ ಭವಿಷ್ಯಕ್ಕೆ ಮಾರಕವಾಗಲಿದೆ ಎಂದರು. ಬಳ್ಳಾರಿ ನಗರದ ಮಹಾ ಜನತೆ ಆರ್ಶಿವಾದದಿಂದ ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಸ್ಪಷ್ಟ ಬಹುಮತ ದೊರೆತಿದ್ದು, ಪಾಲಿಕೆ ಚುಕ್ಕಾಣಿ ಹಿಡಿದಿದೆ. ಮೇಯರ್ ಆಗಿ ರಾಜೇಶ್ವರಿ ಸುಬ್ಬರಾಯಡು ಹಾಗೂ ಉಪ‌ಮೇಯರ್ ಮಾಲಾನ್ ಬೀ ಅವರು ಆಯ್ಕೆಯಾಗಿದ್ದು, ಎಲ್ಲರಿಗೂ ಅಭಿನಂದನೆಗಳನ್ನು ಸಲ್ಲಿಸುವೆ ಎಂದರು.

ಈ ಸಂದರ್ಭದಲ್ಲಿ ಮಾಜಿ ಸಂಸದ ವಿ.ಎಸ್.ಉಗ್ರಪ್ಪ, ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಮಹ್ಮದ್ ರಫೀಕ್, ಚುನಾವಣಾ ವೀಕ್ಷಕರಾದ ಚಂದ್ರಪ್ಪ, ಮಂಜುನಾಥ್ ಮತ್ತಿತರರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು