5:55 PM Friday12 - December 2025
ಬ್ರೇಕಿಂಗ್ ನ್ಯೂಸ್
ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು… ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ: ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಭರವಸೆ ಆರೆಸ್ಸೆಸ್ ಅಂದ್ರೆ ಉರಿಯುವ ಕಾಂಗ್ರೆಸ್ ನಾಯಕರಿಗೆ ಅವರ ಸರ್ಕಾರದಿಂದಲೇ ಉತ್ತರ: ಕೇಂದ್ರ ಸಚಿವ… ಮೈಸೂರು-ಕುಶಾಲನಗರ ಹೆದ್ದಾರಿ ಪ್ಯಾಕೇಜ್ 2 ಕಾಮಗಾರಿ ಆರಂಭ: 4126 ಕೋಟಿ ವೆಚ್ಚದಲ್ಲಿ ಅಗಲೀಕರಣ ಭೂ ಪರಿವರ್ತನೆ ನಿಯಮಗಳ ಸರಳೀಕರಣ: ವಿಧಾನ ಪರಿಷತ್ ನಲ್ಲಿ ಸಚಿವ ಕೃಷ್ಣ ಬೈರೇಗೌಡ ರಾಜ್ಯದಲ್ಲಿ 37,48,700 ವಸತಿ ರಹಿತರು: ವಿಧಾನ ಪರಿಷತ್ ನಲ್ಲಿ ಸಚಿವ ಜಮೀರ್ ಖಾನ್ ಬೆಂಗಳೂರು ಸೈಂಟ್ ಜೋಸೆಫ್ಸ್ ವಿಶ್ವವಿದ್ಯಾಲಯದಲ್ಲಿ ಧರ್ಮ ಮತ್ತು ಸಂಸ್ಕೃತಿ ಅಧ್ಯಯನ ಕೇಂದ್ರ ಉದ್ಘಾಟನೆ

ಇತ್ತೀಚಿನ ಸುದ್ದಿ

ಪಠ್ಯದಲ್ಲಿ ಭಗವದ್ಗೀತೆ ಸೇರ್ಪಡೆಗೆ ವಿರೋಧವಿಲ್ಲ: ಕಾಂಗ್ರೆಸ್ ಉಪ ನಾಯಕ ಯು.ಟಿ.ಖಾದರ್

21/03/2022, 00:07

ಬೆಂಗಳೂರು(reporterkarnataka.com):

ಪಠ್ಯದಲ್ಲಿ ಭಗವದ್ಗೀತೆ ಸೇರ್ಪಡೆ ವಿಚಾರಕ್ಕೆ ನಮ್ಮ ವಿರೋಧವಿಲ್ಲ, ಎಲ್ಲಾ ಧರ್ಮಗಳನ್ನೂ ನಾವು ಸಮಾನವಾಗಿ ಗೌರವಿಸುತ್ತೇವೆ ಎಂದು ಮಾಜಿ ಸಚಿವ ಯುಟಿ.ಖಾದರ್ ಹೇಳಿದ್ದಾರೆ.

ನಗರದ ಖಾಸಗಿ ಹೋಟೆಲ್ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಖಾದರ್‌, ಭಗವದ್ಗೀತೆಯ ಮೌಲ್ಯಗಳು ಜನರ ಹೃದಯ ಸ್ವಚ್ಛಗೊಳಿಸುತ್ತದೆ. ಅದರಂತೆ ಕುರಾನ್, ಬೈಬಲ್ ಸೇರಿದಂತೆ ಎಲ್ಲ ಧರ್ಮದವರ ಗ್ರಂಥಗಳ ಬಗ್ಗೆ ಮಕ್ಕಳಿಗೆ ಪರಿಚಯವಾಗಲಿ ಎಂಬುದು ನಮ್ಮ ಒತ್ತಾಯ. ಮಹಾನ್ ವ್ಯಕ್ತಿಗಳಾದ ಶ್ರಿ ಬಸವಣ್ಣನವರ ಸಾಹಿತ್ಯ, ವಚನಗಳು, ಗ್ರಂಥಗಳ ಬಗ್ಗೆ ಹಾಗೂ ಕೋಟೆ ಚೆನ್ನಯ್ಯ ಅವರ ವ್ಯಕ್ತಿತ್ವವೂ ಮಕ್ಕಳಿಗೆ ಪರಿಚಯವಾಗಲಿ. ಆದರೆ ಯುವಜನರು, ವಿದ್ಯಾರ್ಥಿಗಳಲ್ಲಿ ಕೋಮುಭಾವನೆ ಬೆಳೆಯದಂತೆ ಎಚ್ಚರ ವಹಿಸಬೇಕು ಎಂದರು.

ಹಿಜಾಬ್ ವಿಚಾರವನ್ನು ಅನಗತ್ಯವಾಗಿ ಚರ್ಚೆಗೆಳೆದು ತರಲಾಗಿದೆ. ಉಡುಪಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಒಟ್ಟು 83 ವಿದ್ಯಾರ್ಥಿಗಳಲ್ಲಿ 6 ವಿದ್ಯಾರ್ಥಿಗಳು ಮಾತ್ರವೇ ಹಿಜಾಬ್ ಗೆ ಒತ್ತಾಯಿಸಿದ್ದರು. ಕೆಲವರು ಅದನ್ನೇ ದೊಡ್ಡ ರಾದ್ದಾಂತ ಮಾಡಿದರು. ಮಕ್ಕಳಲ್ಲಿನ ಕೋಮು ಸೌಹಾರ್ದಕ್ಕೆ ದಕ್ಕೆಯುಂಟುಮಾಡಬಾರದು. ಈ ರೀತಿ ಮಾಡಿದರೆ ಮಕ್ಕಳ‌ ಹಾಗೂ ದೇಶದ ಭವಿಷ್ಯಕ್ಕೆ ಮಾರಕವಾಗಲಿದೆ ಎಂದರು. ಬಳ್ಳಾರಿ ನಗರದ ಮಹಾ ಜನತೆ ಆರ್ಶಿವಾದದಿಂದ ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಸ್ಪಷ್ಟ ಬಹುಮತ ದೊರೆತಿದ್ದು, ಪಾಲಿಕೆ ಚುಕ್ಕಾಣಿ ಹಿಡಿದಿದೆ. ಮೇಯರ್ ಆಗಿ ರಾಜೇಶ್ವರಿ ಸುಬ್ಬರಾಯಡು ಹಾಗೂ ಉಪ‌ಮೇಯರ್ ಮಾಲಾನ್ ಬೀ ಅವರು ಆಯ್ಕೆಯಾಗಿದ್ದು, ಎಲ್ಲರಿಗೂ ಅಭಿನಂದನೆಗಳನ್ನು ಸಲ್ಲಿಸುವೆ ಎಂದರು.

ಈ ಸಂದರ್ಭದಲ್ಲಿ ಮಾಜಿ ಸಂಸದ ವಿ.ಎಸ್.ಉಗ್ರಪ್ಪ, ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಮಹ್ಮದ್ ರಫೀಕ್, ಚುನಾವಣಾ ವೀಕ್ಷಕರಾದ ಚಂದ್ರಪ್ಪ, ಮಂಜುನಾಥ್ ಮತ್ತಿತರರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು