2:39 AM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಪಠ್ಯದಲ್ಲಿ ಭಗವದ್ಗೀತೆ ಸೇರ್ಪಡೆಗೆ ವಿರೋಧವಿಲ್ಲ: ಕಾಂಗ್ರೆಸ್ ಉಪ ನಾಯಕ ಯು.ಟಿ.ಖಾದರ್

21/03/2022, 00:07

ಬೆಂಗಳೂರು(reporterkarnataka.com):

ಪಠ್ಯದಲ್ಲಿ ಭಗವದ್ಗೀತೆ ಸೇರ್ಪಡೆ ವಿಚಾರಕ್ಕೆ ನಮ್ಮ ವಿರೋಧವಿಲ್ಲ, ಎಲ್ಲಾ ಧರ್ಮಗಳನ್ನೂ ನಾವು ಸಮಾನವಾಗಿ ಗೌರವಿಸುತ್ತೇವೆ ಎಂದು ಮಾಜಿ ಸಚಿವ ಯುಟಿ.ಖಾದರ್ ಹೇಳಿದ್ದಾರೆ.

ನಗರದ ಖಾಸಗಿ ಹೋಟೆಲ್ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಖಾದರ್‌, ಭಗವದ್ಗೀತೆಯ ಮೌಲ್ಯಗಳು ಜನರ ಹೃದಯ ಸ್ವಚ್ಛಗೊಳಿಸುತ್ತದೆ. ಅದರಂತೆ ಕುರಾನ್, ಬೈಬಲ್ ಸೇರಿದಂತೆ ಎಲ್ಲ ಧರ್ಮದವರ ಗ್ರಂಥಗಳ ಬಗ್ಗೆ ಮಕ್ಕಳಿಗೆ ಪರಿಚಯವಾಗಲಿ ಎಂಬುದು ನಮ್ಮ ಒತ್ತಾಯ. ಮಹಾನ್ ವ್ಯಕ್ತಿಗಳಾದ ಶ್ರಿ ಬಸವಣ್ಣನವರ ಸಾಹಿತ್ಯ, ವಚನಗಳು, ಗ್ರಂಥಗಳ ಬಗ್ಗೆ ಹಾಗೂ ಕೋಟೆ ಚೆನ್ನಯ್ಯ ಅವರ ವ್ಯಕ್ತಿತ್ವವೂ ಮಕ್ಕಳಿಗೆ ಪರಿಚಯವಾಗಲಿ. ಆದರೆ ಯುವಜನರು, ವಿದ್ಯಾರ್ಥಿಗಳಲ್ಲಿ ಕೋಮುಭಾವನೆ ಬೆಳೆಯದಂತೆ ಎಚ್ಚರ ವಹಿಸಬೇಕು ಎಂದರು.

ಹಿಜಾಬ್ ವಿಚಾರವನ್ನು ಅನಗತ್ಯವಾಗಿ ಚರ್ಚೆಗೆಳೆದು ತರಲಾಗಿದೆ. ಉಡುಪಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಒಟ್ಟು 83 ವಿದ್ಯಾರ್ಥಿಗಳಲ್ಲಿ 6 ವಿದ್ಯಾರ್ಥಿಗಳು ಮಾತ್ರವೇ ಹಿಜಾಬ್ ಗೆ ಒತ್ತಾಯಿಸಿದ್ದರು. ಕೆಲವರು ಅದನ್ನೇ ದೊಡ್ಡ ರಾದ್ದಾಂತ ಮಾಡಿದರು. ಮಕ್ಕಳಲ್ಲಿನ ಕೋಮು ಸೌಹಾರ್ದಕ್ಕೆ ದಕ್ಕೆಯುಂಟುಮಾಡಬಾರದು. ಈ ರೀತಿ ಮಾಡಿದರೆ ಮಕ್ಕಳ‌ ಹಾಗೂ ದೇಶದ ಭವಿಷ್ಯಕ್ಕೆ ಮಾರಕವಾಗಲಿದೆ ಎಂದರು. ಬಳ್ಳಾರಿ ನಗರದ ಮಹಾ ಜನತೆ ಆರ್ಶಿವಾದದಿಂದ ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಸ್ಪಷ್ಟ ಬಹುಮತ ದೊರೆತಿದ್ದು, ಪಾಲಿಕೆ ಚುಕ್ಕಾಣಿ ಹಿಡಿದಿದೆ. ಮೇಯರ್ ಆಗಿ ರಾಜೇಶ್ವರಿ ಸುಬ್ಬರಾಯಡು ಹಾಗೂ ಉಪ‌ಮೇಯರ್ ಮಾಲಾನ್ ಬೀ ಅವರು ಆಯ್ಕೆಯಾಗಿದ್ದು, ಎಲ್ಲರಿಗೂ ಅಭಿನಂದನೆಗಳನ್ನು ಸಲ್ಲಿಸುವೆ ಎಂದರು.

ಈ ಸಂದರ್ಭದಲ್ಲಿ ಮಾಜಿ ಸಂಸದ ವಿ.ಎಸ್.ಉಗ್ರಪ್ಪ, ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಮಹ್ಮದ್ ರಫೀಕ್, ಚುನಾವಣಾ ವೀಕ್ಷಕರಾದ ಚಂದ್ರಪ್ಪ, ಮಂಜುನಾಥ್ ಮತ್ತಿತರರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು