7:52 AM Thursday9 - April 2026
ಬ್ರೇಕಿಂಗ್ ನ್ಯೂಸ್
ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತಾರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: 60 ಎಕರೆ ಅರಣ್ಯ ಪ್ರದೇಶ… ಎಲ್ಲ ಕಡೆ ಸಿದ್ದರಾಮಯ್ಯ ಬೇಕು ಎಂಬ ಬೇಡಿಕೆಯಿದೆ; ಕುಮಾರಸ್ವಾಮಿನಾ ಯಾರು ಎಂದು ಕೇಳ್ತಾರೆ:… ರಾಜ್ಯದಲ್ಲಿ ಬ್ಯಾನ್​​ ಆಗುತ್ತಾ ಸೋಲೋ ಟ್ರೆಕ್ಕಿಂಗ್?: ಅನುಭವವಿದ್ದರೂ ಅಪಾಯ ಫಿಕ್ಸ್​​; ಯಾಕೆ ಗೊತ್ತಾ? ಕೊಡಗಿನ ಅಳಿಯನಿಗೆ ಭರ್ಜರಿ ಪಾರ್ಟಿ: ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ತವರಿನಲ್ಲಿ ಅದ್ದೂರಿ… ಎನ್.ಆರ್.ಪುರ: ಶಿವಮೊಗ್ಗದ ನರ್ಸ್ ಆತ್ಮಹತ್ಯೆ; ಹೊಳೆಗೆ ಹಾರಿ ಜೀವತ್ಯಾಗ Kodagu | ನಟಿ ರಶ್ಮಿಕಾ ಮಂದಣ್ಣಗೆ ತಂದೆಯಿಂದ ವಿರಾಜಪೇಟೆಯ “ಸೆರಿನಿಟಿ ಕಾಟೇಜ್” ಗಿಫ್ಟ್ ಮಧ್ಯಪ್ರಾಚ್ಯ ಯುದ್ಧ: ಕೊಡಗಿನಲ್ಲಿ ಸಿಲುಕಿದ ಇರಾನಿ ದಂಪತಿ; ಪಾಸ್‌ಪೋರ್ಟ್ ಆತಂಕ ಬಾಗಲಕೋಟೆ ಉಪ ಚುನಾವಣೆ | ಬಿಜೆಪಿ ಅಭ್ಯರ್ಥಿ ವಿರುದ್ಧ ಕರಪತ್ರ ಹಂಚಿಕೆ: ಇಬ್ಬರು… ಮುಖ್ಯಮಂತ್ರಿ ಸಿದ್ದರಾಮಯ್ಯ ನಿದ್ದೆಗೆಡಿಸಿದ ಉಪ ಚುನಾವಣೆ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ Bangalore | ಅಡುಗೆ ಅನಿಲ ದಾಸ್ತಾನು ಕೊರತೆ ಇಲ್ಲ: ವದಂತಿಗಳಿಗೆ ಕಿವಿಗೊಡಬೇಡಿ: ಡಿಸಿ…

ಇತ್ತೀಚಿನ ಸುದ್ದಿ

ಪತ್ನಿ ಮಾಂಗಲ್ಯ ತೆಗೆಯುವುದು ಪತಿಗೆ ನೀಡುವ ಮಾನಸಿಕ ಹಿಂಸೆ: ಮದ್ರಾಸ್ ಹೈಕೋರ್ಟ್

16/07/2022, 13:31

ಚೆನ್ನೈ(reporterkarnataka.com): ಮಹಿಳೆಯ ಕುತ್ತಿಗೆಯಲ್ಲಿರುವ ತಾಳಿ ಪವಿತ್ರವಾದ ವಿಷಯವಾಗಿದ್ದು, ಅದನ್ನು ಗಂಡನ ಮರಣದ ನಂತರ ಮಾತ್ರ ತೆಗೆದುಹಾಕಲಾಗುತ್ತದೆ. ಗಂಡನಿಂದ ದೂರವಾದ ಪತ್ನಿಯು ಮಾಂಗಲ್ಯವನ್ನು ಕತ್ತಿನಿಂದ ತೆಗೆಯುವುದನ್ನು ಗಂಡನಿಗಾಗುವ ಮಾನಸಿಕ ಕ್ರೌರ್ಯವೆಂದು ಪರಿಗಣಿಸಿ ಮದ್ರಾಸ್ ಹೈಕೋರ್ಟ್ ವ್ಯಕ್ತಿಯೊಬ್ಬನಿಗೆ ವಿಚ್ಛೇದನ ಪಡೆಯಲು ಅನುಮತಿ ನೀಡಿದೆ.

ಹೆಂಡತಿ ಮಾಂಗಲ್ಯ ಧರಿಸುತ್ತಿಲ್ಲ ಎಂದು ನೊಂದ ವ್ಯಕ್ತಿ ವಿಚ್ಛೇದನ ಕೋರಿ ಸಲ್ಲಿಸಿದ ಅರ್ಜಿಗೆ ಸುಪ್ರೀಂ ಕೋರ್ಟ್  ಒಪ್ಪಿಗೆ ನೀಡಿದೆ.

ತಮಿಳುನಾಡು ಈ ರೋಡ್ ನ ವೈದ್ಯಕೀಯ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿರುವ ಸಿ. ಶಿವಕುಮಾರ್ ಅವರ ಅರ್ಜಿ ವಿಚಾರಣೆ ವೇಳೆ ನ್ಯಾಯಮೂರ್ತಿಗಳಾದ ವಿ.ಎಂ. ವೇಲುಮಣಿ ಮತ್ತು ಎಸ್. ಸೌಂಥರ್ ಅವರ ವಿಭಾಗೀಯ ಪೀಠವು ಈ ಅಭಿಪ್ರಾಯವನ್ನು ವ್ಯಕ್ತಪಡಿಸಿದೆ. ತನಗೆ ವಿಚ್ಛೇದನ ನೀಡಲು ನಿರಾಕರಿಸಿದ ಸ್ಥಳೀಯ ಕೌಟುಂಬಿಕ ನ್ಯಾಯಾಲಯದ 2016 ಜೂನ್ 15ರ ಆದೇಶಗಳನ್ನು ರದ್ದುಗೊಳಿಸುವಂತೆ ಅವರು ಕೋರಿದ್ದರು.

ಈ ಬಗ್ಗೆ ಮಹಿಳೆಯ ವಿಚಾರಣೆ ನಡೆಸಿದಾಗ ಆಕೆ ಗಂಡನಿಂದ ದೂರವಿದ್ದ ಸಮಯದಲ್ಲಿ ಮಾಂಗಲ್ಯವನ್ನು ತೆಗೆದಿಟ್ಟಿದ್ದಾಗಿ ಒಪ್ಪಿಕೊಂಡಿದ್ದು, ತಾನು ತಾಳಿಯನ್ನು ಇನ್ನೂ ಇಟ್ಟುಕೊಂಡಿದ್ದೇನೆ. ಆದರೆ, ಅದರ ಜೊತೆಗಿದ್ದ ಕರಿಮಣಿ ಸರವನ್ನು ಮಾತ್ರ ತೆಗೆದಿದ್ದೇನೆ ಎಂದು ಆಕೆ ತಿಳಿಸಿದ್ದಳು. ಮಾಂಗಲ್ಯವನ್ನು ತೆಗೆದುಹಾಕುವ ಕ್ರಿಯೆಗೆ ತನ್ನದೇ ಆದ ಮಹತ್ವವಿದೆ ಎಂದು ಕೋರ್ಟ್ ಹೇಳಿದೆ.

ಮಹಿಳೆಯ ಕುತ್ತಿಗೆಯಲ್ಲಿರುವ ತಾಳಿ ಪವಿತ್ರವಾದ ವಿಷಯವಾಗಿದ್ದು, ಅದು ವೈವಾಹಿಕ ಜೀವನದ ನಿರಂತರತೆಯನ್ನು ಸಂಕೇತಿಸುತ್ತದೆ. ಅದನ್ನು ಗಂಡನ ಮರಣದ ನಂತರ ಮಾತ್ರ ತೆಗೆದುಹಾಕಲಾಗುತ್ತದೆ. ಆದ್ದರಿಂದ, ಅರ್ಜಿದಾರರ ಹೆಂಡತಿ ಮಾಂಗಲ್ಯವನ್ನು ತೆಗೆದುಹಾಕುವ ಮೂಲಕ ಗಂಡನಿಗೆ ಮಾನಸಿಕ ಹಿಂಸೆ ನೀಡಿದ್ದಾರೆ ಎಂದು ಹೇಳಬಹುದು ಎಂದು ನ್ಯಾಯಪೀಠ ಹೇಳಿದೆ.

ಮೇಲ್ಮನವಿದಾರ ಮತ್ತು ಅವರ ಪತ್ನಿ 2011ರಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದು, ಈ ಅವಧಿಯಲ್ಲಿ ಪತ್ನಿ ಪುನರ್ಮಿಲನಕ್ಕೆ ಪ್ರಯತ್ನವನ್ನು ಮಾಡಿದ್ದಾರೆ ಎಂಬುದಕ್ಕೆ ಯಾವುದೇ ದಾಖಲೆಗಳಿಲ್ಲ. ಆದ್ದರಿಂದ ಪ್ರಕರಣದ ಸತ್ಯಗಳು ಮತ್ತು ಸನ್ನಿವೇಶಗಳಲ್ಲಿ ಮತ್ತು ಹೆಂಡತಿಯು ತನ್ನ ಕೃತ್ಯದಿಂದ ಪತಿಗೆ ಮಾನಸಿಕ ಕ್ರೌರ್ಯವನ್ನುಂಟುಮಾಡಿದ್ದಾಳೆಂದು ನಾವು ಗಮನಿಸಿದ್ದೇವೆ ಎಂದು ನ್ಯಾಯಾಲಯ ಹೇಳಿದೆ.

ಇತ್ತೀಚಿನ ಸುದ್ದಿ

ಜಾಹೀರಾತು