3:20 AM Monday3 - November 2025
ಬ್ರೇಕಿಂಗ್ ನ್ಯೂಸ್
ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:… ಡಿಜಿಟಲ್ ಅರೆಸ್ಟ್ ಮೂಲಕ ಹಣ ವರ್ಗಾವಣೆಯಾಗದಂತೆ ತಡೆದ ಪೊಲೀಸರು: ಮಂಗಳೂರು ಪೊಲೀಸರ ಕಾರ್ಯಕ್ಕೆ… Kodagu | ಪೊನ್ನಂಪೇಟೆಯಲ್ಲಿ ಮಿತಿ ಮೀರಿದ ಬೀದಿ ನಾಯಿ ಹಾವಳಿ: ಶ್ವಾನ ದಾಳಿಗೆ… ರಾಜ್ಯ ಸರ್ಕಾರ ಬೆಳೆ ನಷ್ಟಕ್ಕೆ ಸೂಕ್ತ ಪರಿಹಾರ ನೀಡದಿದ್ದರೆ ರೈತರ ಚಳವಳಿ ಎದುರಿಸಬೇಕಾಗುತ್ತದೆ:… Bangalore | ರಾಜ್ಯದಲ್ಲಿ‌ ಕುಡಿಯುವ ನೀರು, ಒಳಚರಂಡಿ ಯೋಜನೆ: ಕೇಂದ್ರಕ್ಕೆ 6,500 ಕೋಟಿ… ಸೋಮವಾರಪೇಟೆ | ಸುಮಾರು 2.4 ಲಕ್ಷ ರೂ. ಮೌಲ್ಯದ ಕಾಳು ಮೆಣಸು ಕಳ್ಳತನ:…

ಇತ್ತೀಚಿನ ಸುದ್ದಿ

ಪಟ್ರಮೆ: ಪಂಪ್ ಶೆಡ್ ಸ್ವಿಚ್  ಶಾಕ್ ಹೊಡೆದು ತಾಯಿ- ಮಗು ಸ್ಥಳದಲ್ಲೇ ದಾರುಣ ಸಾವು

30/05/2021, 16:09

ಬೆಳ್ತಂಗಡಿ(reporterkarnataka news):

ಇಲ್ಲಿನ ಪಟ್ರಮೆ ಗ್ರಾಮದ ಕೊಡಂದೂರು ಎಂಬಲ್ಲಿ ಪಂಪು ಶೆಡ್‌‌ನಲ್ಲಿ  ಸ್ವಿಚ್ ಹಾಕುತ್ತಿದ್ದಾಗ ವಿದ್ಯುತ್ ಶಾಕ್ ಹೊಡೆದು ತಾಯಿ ಹಾಗೂ  ಮಗು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.
ಕೊಡಂದೂರು ನಿವಾಸಿ ಹರೀಶ್ ಗೌಡ ಎಂಬವರ ಪತ್ನಿ ಗೀತಾ (30) ಹಾಗೂ ಪುತ್ರ ಭವಿಷ್ (4) ಅವರು ಭಾನುವಾರ ಬೆಳಗ್ಗೆ ಸ್ವಿಚ್ ಹಾಕಲು ಹೋದಾಗ ಈ ದಾರುಣ ಘಟನೆ ನಡೆದಿದೆ.
ಜಾನುವಾರುಗಳಿಗೆ ನೀರು ಕೊಡಲು ಗೀತಾ ಅವರು ಪುಟ್ಟ ಮಗುವಿನ ಜತೆ ಶೆಡ್ ಗೆ ತೆರಳಿದ್ದರು. ವಿದ್ಯುತ್ ಆಘಾತಕ್ಕೆ ಕಾರಣ ಇನ್ನಷ್ಟೇ ತಿಳಿದು ಬರಬೇಕಾಗಿದೆ.
ಘಟನಾ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಆಗಮಿಸಿದ್ದು, ತನಿಖೆ ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು