11:09 AM Sunday10 - May 2026
ಬ್ರೇಕಿಂಗ್ ನ್ಯೂಸ್
ನಂಜನಗೂಡು ತಾಲೂಕು ಮಟ್ಟದ ಕ್ರಿಕೆಟ್ ಪಂದ್ಯಾವಳಿ: ಚಿಕ್ಕರಂಗನಾಯಕ ಚಾಲನೆ ಚಿಕ್ಕಮಗಳೂರು | ಕಾಡಿನೊಳಗೂ ಕಳ್ಳರ ಕೈಚಳಕ: ಮುತ್ತೋಡಿ ಅರಣ್ಯ ವಲಯದಲ್ಲಿದ್ದ ಕ್ಯಾಮೆರಾ ಹೊತ್ತೊಯ್ದ… ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ

ಇತ್ತೀಚಿನ ಸುದ್ದಿ

ಪಟ್ಟಾ ಜಮೀನು ಹೊಂದಿರುವವರ ಅರಣ್ಯ ಹಕ್ಕು ಅರ್ಜಿ ಪರಿಶೀಲನೆಗೆ ಸಚಿವ ಖಂಡ್ರೆ ಸೂಚನೆ

03/02/2025, 09:28

ಬೆಂಗಳೂರು(reporterkarnataka.com): ಅರಣ್ಯ ಹಕ್ಕು ಕಾಯಿದೆ ಅಡಿ ಸೌಲಭ್ಯಕ್ಕಾಗಿ ಪಟ್ಟಾ ಜಮೀನು ಹೊಂದಿರುವವರೂ ಅರ್ಜಿ ಹಾಕಿದ್ದರೆ ಪರಿಶೀಲಿಸಿ ಕೈಬಿಡುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚಿಸಿದ್ದಾರೆ.
ಈ ಸಂಬಂಧ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ಸೂಚನೆ ನೀಡಿರುವ ಸಚಿವರು, ಅರಣ್ಯ ಹಕ್ಕು ಕಾಯಿದೆ ಅಡಿ ಅರ್ಹ ಫಲಾನುಭವಿಗಳಿಗೆ ಅಂದರೆ 2005ರ ಡಿಸೆಂಬರ್ 13ಕ್ಕೆ ಮೊದಲು ಜೀವನೋಪಾಯಕ್ಕಾಗಿ ಅರಣ್ಯ ಭೂಮಿ ಬಳಸುತ್ತಿರುವ ಮತ್ತು ಅರಣ್ಯದಲ್ಲಿ ವಾಸಿಸುತ್ತಿರುವವರಿಗೆ ಅನ್ಯಾಯವಾಗದಂತೆ ರಾಜ್ಯ ಸರ್ಕಾರ ಕ್ರಮ ವಹಿಸಿದೆ ಎಂದು ತಿಳಿಸಿದ್ದಾರೆ.
ಅರಣ್ಯ ಹಕ್ಕು ಕಾಯಿದೆ ಅಡಿ ಇನ್ನೂ ಸಾವಿರಾರು ಅರ್ಜಿಗಳು ಇತ್ಯರ್ಥವಾಗದೆ ಬಾಕಿ ಉಳಿದಿರುವುದನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ತಿಳಿಸಿರುವ ಸಚಿವರು, ಕಂದಾಯ ಭೂಮಿ (ಪಟ್ಟಾ ಜಮೀನು) ಮಾಲಿಕತ್ವ ಹೊಂದಿರುವವರೂ ಅರಣ್ಯ ಹಕ್ಕು ಕಾಯಿದೆ ಅಡಿ ಅರ್ಜಿ ಸಲ್ಲಿಸಿದ್ದರೆ ಪರಿಶೀಲಿಸಿ ಕ್ರಮ ವಹಿಸಲು ಸೂಚಿಸಿದ್ದಾರೆ.
ಅರಣ್ಯ ಹಕ್ಕು ಕಾಯಿದೆ ಅಡಿ ಅರ್ಜಿ ಸಲ್ಲಿಸಿರುವವರಿಂದ ತಮಗಾಗಲೀ, ತಮ್ಮ ಕುಟುಂಬದ ಸದಸ್ಯರಿಗಾಗಲೀ 2005ರ ಡಿಸೆಂಬರ್ 13ಕ್ಕೆ ಮೊದಲು ಅರಣ್ಯ ಮತ್ತು ಪಟ್ಟಾ ಜಮೀನು ಸೇರಿದಂತೆ 3 ಎಕರೆಗಿಂತ ಹಚ್ಚು ಜಮೀನು ಇರಲಿಲ್ಲ ಎಂಬ ಬಗ್ಗೆ ಸ್ವಯಂ ಘೋಷಣೆ (ಡಿಕ್ಲರೇಷನ್) ಬರೆಸಿಕೊಳ್ಳಲು ಮತ್ತು ‘ನಮೂನೆ-ಎ’ಯಲ್ಲಿರುವ ಅಂಶಗಳನ್ನು ಕಡ್ಡಾಯವಾಗಿ ಮತ್ತು ನಿಯಮಾನುಸಾರ ಪರಿಶೀಲಿಸಲು ಹಾಗೂ ತಪ್ಪು/ಸುಳ್ಳು ಮಾಹಿತಿ ಒದಗಿಸಿ ಕ್ಲೇಮ್ ಅರ್ಜಿ ಸಲ್ಲಿಸಿರುವವರನ್ನು ಅರಣ್ಯಹಕ್ಕು ಕಾಯಿದೆ ಫಲಾನುಭವಿಗಳ ಪಟ್ಟಿಯಿಂದ ಕೈಬಿಡಲು ಸೂಚಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು