4:49 AM Sunday2 - August 2026
ಬ್ರೇಕಿಂಗ್ ನ್ಯೂಸ್
ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ… ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ…

ಇತ್ತೀಚಿನ ಸುದ್ದಿ

ಪೌರಕಾರ್ಮಿಕರ ಹಿತಾಸಕ್ತಿಗಳನ್ನು ಗಾಳಿಗೆ ತೂರಿದ ಪಾಲಿಕೆ: ಹೊರಗುತ್ತಿಗೆ ನೌಕರರ ಸಂಘದ ರಾಜ್ಯಾಧ್ಯಕ್ಷ ನಾಗಣ್ಣ ಗೌಡ ಆಕ್ರೋಶ

09/03/2023, 11:41

ಮಂಗಳೂರು(reporterkarnataka.com): ಮಂಗಳೂರು ನಗರವನ್ನು ಸ್ವಚ್ಚ ಮಾಡುವ ಪೌರಕಾರ್ಮಿಕರ ಹಿತಾಸಕ್ತಿಗಳನ್ನು ಗಾಳಿಗೆ ತೂರಿರುವ ಪಾಲಿಕೆ ಕಾರ್ಮಿಕರನ್ನು ಮಧ್ಯಯುಗದ ಗುಲಾಮರಂತೆ ನಡೆಸಿಕೊಳ್ಳುತ್ತಿದೆ ಎಂದು ಕರ್ನಾಟಕ ರಾಜ್ಯ ನಗರಪಾಲಿಕೆ ನಗರಸಭೆ ಪುರಸಭೆ ಹೊರಗುತ್ತಿಗೆ ನೌಕರರ ಸಂಘದ ರಾಜ್ಯಾಧ್ಯಕ್ಷ ಎಂ.ಬಿ.ನಾಗಣ್ಣ ಗೌಡ ಆಕ್ರೋಶ ವ್ಯಕ್ತಪಡಿಸಿದರು.

ನಗರದ ಕೂಳೂರಿನ ನಾರಾಯಣ ಗುರು ಸಭಾಂಗಣದಲ್ಲಿ ಹೊರಗುತ್ತಿಗೆ ನೌಕರರ ಮಾಹಿತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು ಪೌರಕಾರ್ಮಿಕರ ಕುರಿತ ಎಲ್ಲ ನಿಯಮಗಳನ್ನು ಪಾಲಿಕೆ ನಿರ್ಲಕ್ಷಿಸಿದೆ. ಬೆಳಗಿನ ಉಪಹಾರ, ಕನಿಷ್ಟ ವೇತನ, ಶೌಚಾಲಯ ಸೇರಿದಂತೆ ಕನಿಷ್ಟ ಅಗತ್ಯಗಳನ್ನು ಒದಗಿಸುವಲ್ಲಿ ವಿಫಲವಾಗಿದೆ. ಪೌರಕಾರ್ಮಿಕರನ್ನು ಪ್ರಾಣಿಗಳಂತೆ ನಡೆಸಿಕೊಳ್ಳಲಾಗುತ್ತಿದೆ. ಹೊರಗುತ್ತಿಗೆ ನೌಕರರಿಗೆ ಯಾವುದೇ ಕೆಲಸದ ವೇಳೆಯೆ ನಿಗದಿಯಾಗಿಲ್ಲ. ಸಕಾಲಕ್ಕೆ ಸಂಬಳವೂ ಸಿಗುವುದಿಲ್ಲ ಎಂದು ಕಿಡಿಕಾರಿದರು.

ಸರಕಾರ ಕೂಡಲೆ ಎಲ್ಲ ಬಗೆಯ ಪೌರಕಾರ್ಮಿಕರನ್ನು ನೇರನೇಮಕಾತಿಗೊಳಿಸಬೇಕು ನಿಯಮಾನುಸಾರ ಸಮಾನ ಕೆಲಸಕ್ಕೆ ಸಮಾನ ವೇತನ ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು. ಜಿಲ್ಲಾಧಿಕಾರಿಗಳ ಆದೇಶವನ್ನೆ ಕಾಲಕಸ ಮಾಡಿಕೊಂಡಿರುವ ವಿಪರ್ಯಾಸ ಪಾಲಿಕೆಯಲ್ಲಿ ನಡೆದಿದೆ. ಜಿಲ್ಲಾಧಿಕಾರಿಗಳು ಈ ಸಂಬಂದ ಅಗತ್ಯಕ್ರಮ ವಹಿಸುವಂತೆ ಒತ್ತಾಯಿಸಿದರು.
ವೇದಿಕೆಯಲ್ಲಿ ಮಂಗಳೂರು ಸಫಾಯಿ ಕರ್ಮಚಾರಿ ಸಂಘದ ಜಿಲ್ಲಾಧ್ಯಕ್ಷರಾದ ನಾರಯಣ ಶೆಟ್ಟಿ ಕರಾವಳಿ ವಿಭಾಗದ ಸಂಚಾಲಕ ಅಣ್ಣಪ್ಪ ಕಾರೇಕಾಡು ಕೋಶಾಧಿಕಾರಿ ಕೃಷ್ಣ ಪೂಜಾರಿ, ಪ್ರಧಾನ ಕಾರ್ಯದರ್ಶಿ ದಿನೇಶ್ ಕುಲಾಲ, ವಿಭಾಗಾಧ್ಯಕ್ಷ ಚನ್ನಕೇಶವ ಹೊರಗುತ್ತಿಗೆ ಸಂಘದ ಸಿದ್ದರೂಡಾ, ಕರುನಾಡ ಸೇವಕರು ಸಂಘದ ಚಂದ್ರು ಎಂ.ಎನ್ ಮೊದಲಾದವರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು