4:49 AM Sunday27 - July 2025
ಬ್ರೇಕಿಂಗ್ ನ್ಯೂಸ್
ಗದಗ -ಬಂಕಾಪುರ ರಾಷ್ಟ್ರೀಯ ಹೆದ್ದಾರಿಗೆ ಗಡ್ಕರಿ ಭರವಸೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Koppa | ಬೃಹತ್ ಮರ ರಸ್ತೆಗೆ ಪತನ: ಜಯಪುರ- ಬಸರೀಕಟ್ಟೆ,- ಕಳಸ- ಹೊರನಾಡು… ಕೊಡಗಿನಲ್ಲಿ ಭಾರೀ ಮಳೆ: ತುಂಬಿ ತುಳುಕುತ್ತಿರುವ ಕಾವೇರಿ, ಕನ್ನಿಕೆ, ಸುಜ್ಜ್ಯತಿ ನದಿಗಳು; ತ್ರಿವೇಣಿ… ಕೊಡಗು: ಮಳೆ ಹಾನಿ ಪ್ರದೇಶಗಳಿಗೆ ಕಂದಾಯ ಸಚಿವ ಕೃಷ್ಣಬೈರೇ ಗೌಡ ಭೇಟಿ; ಪರಿಹಾರ… BJP Leader | ಚುನಾವಣಾ ಉದ್ದೇಶದಿಂದ ಬೆಂಗಳೂರು ಒಡೆದ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ… ಗ್ಯಾರಂಟಿಗಳ ಕಾರಣದಿಂದ ಕರ್ನಾಟಕ ತಲಾ ಆದಾಯದಲ್ಲಿ ದೇಶದಲ್ಲೇ ನಂಬರ್ ಒನ್ : ಸಿಎಂ… Mangaluru | ಸಂಸದ ತೇಜಸ್ವೀ ಸೂರ್ಯ ರಿಂದ ಲಾಲ್‌ಬಾಗ್‌ನಲ್ಲಿ ವೀಲ್‌ಚೇರ್ ಸ್ನೇಹಿ ಶೌಚಾಲಯ… Chikkamagaluru | ಕಳಸ: ಭದ್ರಾ ನದಿಯಲ್ಲಿ ಸತತ 23 ತಾಸುಗಳ ಶೋಧ ಬಳಿಕ… ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಕಡತ ಕಳವು ಪ್ರಕರಣ: ಗುತ್ತಿಗೆ ಸಿಬ್ಬಂದಿ ಕೈಚಳಕ ಸಿಸಿಟಿವಿ… Kodagu | ಕೊಡಗಿನಲ್ಲಿ ಮತ್ತಷ್ಟು ಬಿರುಸುಗೊಂಡ ಮಳೆ: ಹಲವೆಡೆ ರಸ್ತೆಗೆ ಉರುಳಿದ ಮರಗಳು;…

ಇತ್ತೀಚಿನ ಸುದ್ದಿ

ಪಾವೂರು ಗ್ರಾಪಂ ಚುನಾವಣೆ: ಅದೃಷ್ಟ ಚೀಟಿ ಮೂಲಕ ಅಧ್ಯಕ್ಷ ಸ್ಥಾನ ಕಾಂಗ್ರೆಸ್ ತೆಕ್ಕೆಗೆ; ಉಪಾಧ್ಯಕ್ಷ ಎಸ್ ಡಿಪಿಐಗೆ

11/08/2023, 13:07

ಉಳ್ಳಾಲ(reporterkarnataka.com): ಪಾವೂರು ಗ್ರಾಮ ಪಂಚಾಯತ್’ನ ಎರಡನೇ ಅವಧಿಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಅದೃಷ್ಟ ಚೀಟಿ ಎತ್ರುವ ಮೂಲಕ ಅಧ್ಯಕ್ಷ ಸ್ಥಾನ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಗೆ ಹಾಗೂ ಉಪಾಧ್ಯಕ್ಷ ಸ್ಥಾನ ಎಸ್ ಡಿಪಿಐಗೆ ಒಲಿದಿದೆ.
ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಸಾತ್ಕೋ ಮಜೀದ್ ಮತ್ತು ಉಪಾಧ್ಯಕ್ಷರಾಗಿ ಎಸ್ ಡಿಪಿಐ ಬೆಂಬಲಿತೆ ಮೆಹರುನ್ನಿಸಾ ಆಯ್ಕೆಯಾಗಿದ್ದಾರೆ.ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆಯಲ್ಲಿ
ಟೈ ಆಗುವ ಮೂಲಕ ಇಕ್ಕಟ್ಟಿನ ಪರಿಸ್ಥಿತಿ ಎದುರಾಗಿತ್ತು. ನಂತರ ಅದೃಷ್ಟ ಚೀಟಿ ಎತ್ತುವ ಮೂಲಕ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಸಾತ್ಕೋ ಮಜೀದ್ ಮತ್ತು ಉಪಾಧ್ಯಕ್ಷರಾಗಿ ಎಸ್ ಡಿಪಿಐ ಬೆಂಬಲಿತೆ ಮೆಹರುನ್ನಿಸಾ ಆಯ್ಕೆಯಾಗಿದ್ದಾರೆ.
ಪಾವೂರು ಗ್ರಾಮ ಪಂಚಾಯಿತಿ ಒಟ್ಟು 15 ಸದಸ್ಯ ಬಲ ಹೊಂದಿದೆ. ಇದರಲ್ಲಿ ಎಸ್ ಡಿಪಿಐ 6, ಕಾಂಗ್ರೆಸ್ 5, ಬಿಜೆಪಿ 2 ಮತ್ತು 2 ಸ್ಥಾನವನ್ನು ಪಕ್ಷೇತರರು ಹೊಂದಿದ್ದಾರೆ.
ಕಳೆದ ಬಾರಿ ಪಕ್ಷೇತರರ ಬೆಂಬಲದೊಂದಿಗೆ ಎಸ್ ಡಿಪಿಐ ಅಧಿಕಾರ ನಡೆಸಿತ್ತು.
ಈ ಬಾರಿ ಎಸ್ ಡಿಪಿಐ ಬೆಂಬಲದಿಂದ ಪಕ್ಷೇತರ ಅಭ್ಯರ್ಥಿ ವಲೇರಿಯನ್ ಡಿಸೋಜ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಮೆಹರುನ್ನಿಸಾ, ಕಾಂಗ್ರೆಸ್ ನಿಂದ ಅಧ್ಯಕ್ಷ ಸ್ಥಾನಕ್ಕೆ ಸಾತ್ಕೋ ಮಜೀದ್ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ರವಿಕಲಾ ಸ್ಪರ್ಧಿಸಿದ್ದರು. ಚುನಾವಣೆ ನಡೆದಾಗ ಅಧ್ಯಕ್ಷ ಸ್ಥಾನದ ಅಭ್ಯರ್ಥಿಗಳು ಏಳು ಮತಗಳನ್ನು ಪಡೆದಿದ್ದು ಒಂದು ಮತ ಅಸಿಂಧುಗೊಂಡಿತು. ಉಪಾಧ್ಯಕ್ಷ ಸ್ಥಾನದ ಅಭ್ಯರ್ಥಿಗಳೂ 7 ಮತಗಳನ್ನು ಪಡೆದಿದ್ದರು. ಒಬ್ಬರು ಮತ ಚಲಾಯಿಸದ ಕಾರಣ ಸಮ ಬಲಗೊಂಡಿದ್ದು ಇದರಿಂದಾಗಿ ಅದೃಷ್ಟ ಚೀಟಿ ಎತ್ತಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು