3:05 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಪಾವೂರು ಉಳಿಯ ದ್ವೀಪದಲ್ಲಿ ಅಕ್ರಮ ಮರಳುಗಾರಿಕೆ ಶಾಶ್ವತ ತಡೆಗೆ, ದ್ವೀಪವಾಸಿಗಳ ರಕ್ಷಣೆಗೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ

05/07/2024, 15:48

ಮಂಗಳೂರು(reporterkarnataka.com): ಪಾವೂರು ಉಳಿಯ ದ್ವೀಪದಲ್ಲಿ ನಿರಂತರವಾಗಿ ನಡೆಯುತ್ತಿರುವ ಅಕ್ರಮ ಮರಳುಗಾರಿಕೆಯನ್ನು ಶಾಶ್ವತವಾಗಿ ತಡೆಗಟ್ಟಬೇಕು, ಅಲ್ಲಿನ ದ್ವೀಪವಾಸಿಗಳ ಬದುಕನ್ನು ರಕ್ಷಿಸಬೇಕು ಹಾಗೂ ವಾಸ್ತವ ಚಿತ್ರಣವನ್ನು ಮರೆಮಾಚಿ ಅಕ್ರಮ‌ ಮರಳುಗಾರಿಕೆಯಲ್ಲಿ ತೊಡಗಿರುವ ವ್ಯಕ್ತಿಗಳ ಜೊತೆಗೆ ಕೈಜೋಡಿಸಿ ಜಿಲ್ಲಾಡಳಿತಕ್ಕೆ ಸುಳ್ಳು ಮಾಹಿತಿ ನೀಡಿದ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳ ವಿರುದ್ದ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕೆಂದು ಒತ್ತಾಯಿಸಿ ಸಮಾನ ಮನಸ್ಕ ಸಂಘಟನೆಗಳ ಜಂಟಿ ವೇದಿಕೆ ಹಾಗೂ ಕೆಥೊಲಿಕ್ ಸಭಾ ಮಂಗಳೂರು ಪ್ರದೇಶ್(ರಿ) ಇವುಗಳ ಜಂಟಿ ಆಶ್ರಯದಲ್ಲಿ ಇಂದು ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರಿಗೆ ಮನವಿ ಅರ್ಪಿಸಲಾಯಿತು.
ನಿಯೋಗದಲ್ಲಿ ಸಮಾನ ಮನಸ್ಕ ಸಂಘಟನೆ ಗಳ ಜಂಟಿ ವೇದಿಕೆಯ ಪ್ರಮುಖರಾದ ಮುನೀರ್ ಕಾಟಿಪಳ್ಳ, ರೋಯ್ ಕ್ಯಾಸ್ಟಲಿನೋ, ಸುನಿಲ್ ಕುಮಾರ್ ಬಜಾಲ್, ಕೆಥೋಲಿಕ್ ಸಭಾದ ಅಧ್ಯಕ್ಷರಾದ ಆಲ್ವಿನ್ ಡಿಸೋಜ, ಇತರ ಪ್ರಮುಖರಾದ ಸ್ಟಾನಿ ಲೋಬೋ,ಜೋನ್ ಲಸ್ರದೋ ಹಾಗೂ ಪಾವೂರು ಉಳಿಯ ದ್ವೀಪವಾಸಿಗಳಾದ ಗಿಲ್ಬರ್ಟ್ ಡಿಸೋಜ, ರೊನಾಲ್ಡ್ ಡಿಸೋಜ, ಬೆನೆಡಿಕ್ಟ್ ಡಿಸೋಜ, ಬಜಿಲ್ ಡಿಸೋಜ, ಫಿಲಿಫ್ ಡಿಸೋಜ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು