5:02 AM Saturday5 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಪಾವೂರು ಉಳಿಯ ದ್ವೀಪದಲ್ಲಿ ಅಕ್ರಮ ಮರಳುಗಾರಿಕೆ ಶಾಶ್ವತ ತಡೆಗೆ, ದ್ವೀಪವಾಸಿಗಳ ರಕ್ಷಣೆಗೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ

05/07/2024, 15:48

ಮಂಗಳೂರು(reporterkarnataka.com): ಪಾವೂರು ಉಳಿಯ ದ್ವೀಪದಲ್ಲಿ ನಿರಂತರವಾಗಿ ನಡೆಯುತ್ತಿರುವ ಅಕ್ರಮ ಮರಳುಗಾರಿಕೆಯನ್ನು ಶಾಶ್ವತವಾಗಿ ತಡೆಗಟ್ಟಬೇಕು, ಅಲ್ಲಿನ ದ್ವೀಪವಾಸಿಗಳ ಬದುಕನ್ನು ರಕ್ಷಿಸಬೇಕು ಹಾಗೂ ವಾಸ್ತವ ಚಿತ್ರಣವನ್ನು ಮರೆಮಾಚಿ ಅಕ್ರಮ‌ ಮರಳುಗಾರಿಕೆಯಲ್ಲಿ ತೊಡಗಿರುವ ವ್ಯಕ್ತಿಗಳ ಜೊತೆಗೆ ಕೈಜೋಡಿಸಿ ಜಿಲ್ಲಾಡಳಿತಕ್ಕೆ ಸುಳ್ಳು ಮಾಹಿತಿ ನೀಡಿದ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳ ವಿರುದ್ದ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕೆಂದು ಒತ್ತಾಯಿಸಿ ಸಮಾನ ಮನಸ್ಕ ಸಂಘಟನೆಗಳ ಜಂಟಿ ವೇದಿಕೆ ಹಾಗೂ ಕೆಥೊಲಿಕ್ ಸಭಾ ಮಂಗಳೂರು ಪ್ರದೇಶ್(ರಿ) ಇವುಗಳ ಜಂಟಿ ಆಶ್ರಯದಲ್ಲಿ ಇಂದು ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರಿಗೆ ಮನವಿ ಅರ್ಪಿಸಲಾಯಿತು.
ನಿಯೋಗದಲ್ಲಿ ಸಮಾನ ಮನಸ್ಕ ಸಂಘಟನೆ ಗಳ ಜಂಟಿ ವೇದಿಕೆಯ ಪ್ರಮುಖರಾದ ಮುನೀರ್ ಕಾಟಿಪಳ್ಳ, ರೋಯ್ ಕ್ಯಾಸ್ಟಲಿನೋ, ಸುನಿಲ್ ಕುಮಾರ್ ಬಜಾಲ್, ಕೆಥೋಲಿಕ್ ಸಭಾದ ಅಧ್ಯಕ್ಷರಾದ ಆಲ್ವಿನ್ ಡಿಸೋಜ, ಇತರ ಪ್ರಮುಖರಾದ ಸ್ಟಾನಿ ಲೋಬೋ,ಜೋನ್ ಲಸ್ರದೋ ಹಾಗೂ ಪಾವೂರು ಉಳಿಯ ದ್ವೀಪವಾಸಿಗಳಾದ ಗಿಲ್ಬರ್ಟ್ ಡಿಸೋಜ, ರೊನಾಲ್ಡ್ ಡಿಸೋಜ, ಬೆನೆಡಿಕ್ಟ್ ಡಿಸೋಜ, ಬಜಿಲ್ ಡಿಸೋಜ, ಫಿಲಿಫ್ ಡಿಸೋಜ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು