2:36 PM Wednesday24 - December 2025
ಬ್ರೇಕಿಂಗ್ ನ್ಯೂಸ್
ಸಂಸದ ಯದುವೀರ್‌ ಪ್ರಯತ್ನದ ಫಲಶ್ರುತಿ : ತಂಬಾಕು ಮಾರಾಟಕ್ಕೆ ಅನುಮತಿ ರಾಮೇಶ್ವರಂ ಕೆಫೆ ವಿರುದ್ಧದ ಪ್ರಕರಣದಲ್ಲಿ ಹೆಚ್ಚಿನ ತನಿಖೆಗೆ ಕರ್ನಾಟಕ ಹೈಕೋರ್ಟ್ ವತಿಯಿಂದ ತಡೆಯಾಜ್ಞೆ;… ಅಟಲ್ ಜೀ ವೃಕ್ಷ ಯೋಜನೆಯಡಿ 2240 ಸಸಿ ಸಂರಕ್ಷಣೆ: ವರ್ಷಪೂರ್ತಿ ಅಟಲ್ ಜನ್ಮ… ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ! ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

ಇತ್ತೀಚಿನ ಸುದ್ದಿ

ಪಾವೂರು ಉಳಿಯ ದ್ವೀಪದಲ್ಲಿ ಅಕ್ರಮ ಮರಳುಗಾರಿಕೆ ಶಾಶ್ವತ ತಡೆಗೆ, ದ್ವೀಪವಾಸಿಗಳ ರಕ್ಷಣೆಗೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ

05/07/2024, 15:48

ಮಂಗಳೂರು(reporterkarnataka.com): ಪಾವೂರು ಉಳಿಯ ದ್ವೀಪದಲ್ಲಿ ನಿರಂತರವಾಗಿ ನಡೆಯುತ್ತಿರುವ ಅಕ್ರಮ ಮರಳುಗಾರಿಕೆಯನ್ನು ಶಾಶ್ವತವಾಗಿ ತಡೆಗಟ್ಟಬೇಕು, ಅಲ್ಲಿನ ದ್ವೀಪವಾಸಿಗಳ ಬದುಕನ್ನು ರಕ್ಷಿಸಬೇಕು ಹಾಗೂ ವಾಸ್ತವ ಚಿತ್ರಣವನ್ನು ಮರೆಮಾಚಿ ಅಕ್ರಮ‌ ಮರಳುಗಾರಿಕೆಯಲ್ಲಿ ತೊಡಗಿರುವ ವ್ಯಕ್ತಿಗಳ ಜೊತೆಗೆ ಕೈಜೋಡಿಸಿ ಜಿಲ್ಲಾಡಳಿತಕ್ಕೆ ಸುಳ್ಳು ಮಾಹಿತಿ ನೀಡಿದ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳ ವಿರುದ್ದ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕೆಂದು ಒತ್ತಾಯಿಸಿ ಸಮಾನ ಮನಸ್ಕ ಸಂಘಟನೆಗಳ ಜಂಟಿ ವೇದಿಕೆ ಹಾಗೂ ಕೆಥೊಲಿಕ್ ಸಭಾ ಮಂಗಳೂರು ಪ್ರದೇಶ್(ರಿ) ಇವುಗಳ ಜಂಟಿ ಆಶ್ರಯದಲ್ಲಿ ಇಂದು ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರಿಗೆ ಮನವಿ ಅರ್ಪಿಸಲಾಯಿತು.
ನಿಯೋಗದಲ್ಲಿ ಸಮಾನ ಮನಸ್ಕ ಸಂಘಟನೆ ಗಳ ಜಂಟಿ ವೇದಿಕೆಯ ಪ್ರಮುಖರಾದ ಮುನೀರ್ ಕಾಟಿಪಳ್ಳ, ರೋಯ್ ಕ್ಯಾಸ್ಟಲಿನೋ, ಸುನಿಲ್ ಕುಮಾರ್ ಬಜಾಲ್, ಕೆಥೋಲಿಕ್ ಸಭಾದ ಅಧ್ಯಕ್ಷರಾದ ಆಲ್ವಿನ್ ಡಿಸೋಜ, ಇತರ ಪ್ರಮುಖರಾದ ಸ್ಟಾನಿ ಲೋಬೋ,ಜೋನ್ ಲಸ್ರದೋ ಹಾಗೂ ಪಾವೂರು ಉಳಿಯ ದ್ವೀಪವಾಸಿಗಳಾದ ಗಿಲ್ಬರ್ಟ್ ಡಿಸೋಜ, ರೊನಾಲ್ಡ್ ಡಿಸೋಜ, ಬೆನೆಡಿಕ್ಟ್ ಡಿಸೋಜ, ಬಜಿಲ್ ಡಿಸೋಜ, ಫಿಲಿಫ್ ಡಿಸೋಜ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು