1:54 AM Saturday11 - July 2026
ಬ್ರೇಕಿಂಗ್ ನ್ಯೂಸ್
ಆಸ್ಟ್ರೇಲಿಯಾ | ಪ್ರಧಾನಿ ಮೋದಿ ತಂಗಿದ್ದ ಆಸೀಸ್‌ ಹೋಟೆಲ್‌ಗೆ ನುಗ್ಗಿ ಭಾರತ ವಿರೋಧಿ… ಬೆಂಗಳೂರು: ಶಾಸಕಿ ನಯನ ಮೋಟಮ್ಮ ಪರ ಕಾರ್ಯಕರ್ತರ ಬ್ಯಾಟಿಂಗ್; ಕೆಪಿಸಿಸಿ ಅಧ್ಯಕ್ಷರಿಗೆ ವಿವರಣೆ ಮಂಡ್ಯ: ಕಟ್ಟಡದ ಮೇಲಿಂದ ಬಿದ್ದು ಫೈಂಟ್ ಮಾಡುತ್ತಿದ್ದ ಕಾರ್ಮಿಕ ದಾರುಣ ಸಾವು ಕೊಡಗು ಜೆಡಿಎಸ್‌ಗೆ ಶೀಘ್ರದಲ್ಲೇ ಜಿಲ್ಲಾಧ್ಯಕ್ಷ?: ಕುಮಾರಸ್ವಾಮಿ ಭೇಟಿ ಮಾಡಿದ ತಾಲೂಕು ಅಧ್ಯಕ್ಷರ ನಿಯೋಗ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ತನಿಖೆಯಲ್ಲಿ ಮಹತ್ವದ ಅಂಶ ಬಹಿರಂಗ; ಶೀಘ್ರದಲ್ಲೇ… ಶೃಂಗೇರಿ | ಗೋರಿಗುಡ್ಡ ಮಸೀದಿ ರಕ್ಷಣೆಗೆ ಕಟ್ಟಿದ್ದ ಕಾಂಕ್ರೀಟ್ ವಾಲ್ ನಲ್ಲಿ ಬಿರುಕು:… ಮಡಿಕೇರಿಯಲ್ಲಿ ಭಾರಿ ಮಳೆಗೆ ಭೂಕುಸಿತ: ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಏರು ರಸ್ತೆ ಹಾನಿ;… Kodagu | ಮಡಿಕೇರಿ ರಾಜಾಸೀಟ್ ನಾಳೆಯಿಂದ ಜುಲೈ 12ರವರೆಗೆ ಕ್ಲೋಸ್: ಜಿಲ್ಲಾಧಿಕಾರಿ ಆದೇಶ ನಾಗರಹೊಳೆ ಉದ್ಯಾನದ ಬೀಟ್‌ಗಾರ್ಡ್ ಮನೆಯಲ್ಲಿ ಅಕ್ರಮ ಜಿಂಕೆ ಪತ್ತೆ: ಬಂಧನ; ಬಂದೂಕು ವಶ ಮೂಗ್ರಹಳ್ಳಿ ಸೇತುವೆ ಕಾಮಗಾರಿಯಲ್ಲಿ ಸುರಕ್ಷತೆ ನಿರ್ಲಕ್ಷ್ಯ ಆರೋಪ; ಕಾಮಗಾರಿ ತಾತ್ಕಾಲಿಕ ಸ್ಥಗಿತಕ್ಕೆ ಗ್ರಾಮಸ್ಥರ…

ಇತ್ತೀಚಿನ ಸುದ್ದಿ

ಪಾವೂರು ಉಳಿಯ ದ್ವೀಪದಲ್ಲಿ ಅಕ್ರಮ ಮರಳುಗಾರಿಕೆ ಶಾಶ್ವತ ತಡೆಗೆ, ದ್ವೀಪವಾಸಿಗಳ ರಕ್ಷಣೆಗೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ

05/07/2024, 15:48

ಮಂಗಳೂರು(reporterkarnataka.com): ಪಾವೂರು ಉಳಿಯ ದ್ವೀಪದಲ್ಲಿ ನಿರಂತರವಾಗಿ ನಡೆಯುತ್ತಿರುವ ಅಕ್ರಮ ಮರಳುಗಾರಿಕೆಯನ್ನು ಶಾಶ್ವತವಾಗಿ ತಡೆಗಟ್ಟಬೇಕು, ಅಲ್ಲಿನ ದ್ವೀಪವಾಸಿಗಳ ಬದುಕನ್ನು ರಕ್ಷಿಸಬೇಕು ಹಾಗೂ ವಾಸ್ತವ ಚಿತ್ರಣವನ್ನು ಮರೆಮಾಚಿ ಅಕ್ರಮ‌ ಮರಳುಗಾರಿಕೆಯಲ್ಲಿ ತೊಡಗಿರುವ ವ್ಯಕ್ತಿಗಳ ಜೊತೆಗೆ ಕೈಜೋಡಿಸಿ ಜಿಲ್ಲಾಡಳಿತಕ್ಕೆ ಸುಳ್ಳು ಮಾಹಿತಿ ನೀಡಿದ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳ ವಿರುದ್ದ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕೆಂದು ಒತ್ತಾಯಿಸಿ ಸಮಾನ ಮನಸ್ಕ ಸಂಘಟನೆಗಳ ಜಂಟಿ ವೇದಿಕೆ ಹಾಗೂ ಕೆಥೊಲಿಕ್ ಸಭಾ ಮಂಗಳೂರು ಪ್ರದೇಶ್(ರಿ) ಇವುಗಳ ಜಂಟಿ ಆಶ್ರಯದಲ್ಲಿ ಇಂದು ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರಿಗೆ ಮನವಿ ಅರ್ಪಿಸಲಾಯಿತು.
ನಿಯೋಗದಲ್ಲಿ ಸಮಾನ ಮನಸ್ಕ ಸಂಘಟನೆ ಗಳ ಜಂಟಿ ವೇದಿಕೆಯ ಪ್ರಮುಖರಾದ ಮುನೀರ್ ಕಾಟಿಪಳ್ಳ, ರೋಯ್ ಕ್ಯಾಸ್ಟಲಿನೋ, ಸುನಿಲ್ ಕುಮಾರ್ ಬಜಾಲ್, ಕೆಥೋಲಿಕ್ ಸಭಾದ ಅಧ್ಯಕ್ಷರಾದ ಆಲ್ವಿನ್ ಡಿಸೋಜ, ಇತರ ಪ್ರಮುಖರಾದ ಸ್ಟಾನಿ ಲೋಬೋ,ಜೋನ್ ಲಸ್ರದೋ ಹಾಗೂ ಪಾವೂರು ಉಳಿಯ ದ್ವೀಪವಾಸಿಗಳಾದ ಗಿಲ್ಬರ್ಟ್ ಡಿಸೋಜ, ರೊನಾಲ್ಡ್ ಡಿಸೋಜ, ಬೆನೆಡಿಕ್ಟ್ ಡಿಸೋಜ, ಬಜಿಲ್ ಡಿಸೋಜ, ಫಿಲಿಫ್ ಡಿಸೋಜ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು