12:34 PM Thursday13 - August 2026
ಬ್ರೇಕಿಂಗ್ ನ್ಯೂಸ್
ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ…

ಇತ್ತೀಚಿನ ಸುದ್ದಿ

ಪಾಲ್ದನೆ ಸಂತ ತೆರೆಸಾ ಚರ್ಚ್ ನ ಐಸಿವೈಎಂ ಸದಸ್ಯರಿಂದ ಪಾವ್ಸಾಂತ್ ಉಡ್ಕಣಾಂ ಕಾರ್ಯಕ್ರಮ

13/08/2026, 12:25

ಮಂಗಳೂರು(reporterkarnataka.com): ಮಂಗಳೂರಿನ ಪಾಲ್ದನೆ ಸಂತ ತೆರೆಸಾ ಚರ್ಚ್ ನ ಐಸಿವೈಎಂ ಘಟಕದ ಸದಸ್ಯರಿಂದ ಪಾವ್ಸಾಂತ್ ಉಡ್ಕಣಾಂ (ಮಳೆಯಲ್ಲಿ ಆಟ) ಎಂಬ ವಾರ್ಡ್ ಮಟ್ಟದ ಆಟೋಟ ಸ್ಪರ್ಧೆಗಳನ್ನು ಚರ್ಚ್ ನ ತೆರೆದ ಮೈದಾನದಲ್ಲಿ ಆಯೋಜಿಸಲಾಗಿತ್ತು.
ಪಂದ್ಯಾಟದ ಮೊದಲು ಚರ್ಚ್ ನ ಸಹಾಯಕ ಧರ್ಮ ಗುರು ವಂದನೀಯ ಫಾ. ಜೋಸೆಫ್ ಕುವೆಲ್ಲೊ ಪ್ರಾರ್ಥಿಸಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ವಂದನೀಯ ಫಾ. ರೋಶ್ವಿನ್ ಲೋಪೆಜ್ ಮಾತನಾಡಿ ಯುವ ಶಕ್ತಿಯ ಸದುಪಯೋಗ ಅಗತ್ಯ. ಇಂತಹ ಕ್ರೀಡೆಗಳಿಂದ ವಾರ್ಡುಗಳ ಸದಸ್ಯರ ಪ್ರತಿಭೆಗಳು ಹೊರ ಹೊಮ್ಮುತ್ತವೆ. ಸಂಘಟನೆ, ಏಕತೆ, ಒಗ್ಗಟ್ಟು ಹಾಗೂ ಸೇವಾ ಮನೋಭಾವನೆಗೆ ವೇದಿಕೆ ಕಲ್ಪಿಸಿದಂತಾಗುತ್ತದೆ ಎಂದರು.
ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿದ್ದ ಚರ್ಚ್ ನ ಪ್ರಧಾನ ಧರ್ಮಗುರು ವಂದನೀಯ ಫಾ. ರಿಚಾರ್ಡ್ ಅಲೋಶಿಯಸ್ ಕುವೆಲ್ಲೊ ಅವರು ವಿಜೇತ ವಾರ್ಡುಗಳ ಸದಸ್ಯರ ತಂಡಗಳಿಗೆ ಟ್ರೋಫಿಯನ್ನು ವಿತರಿಸಿ ಐ ಸಿ ವೈ ಎಂ ಸದಸ್ಯರ ಕಾರ್ಯ ವೈಖರಿಯನ್ನು ಕೊಂಡಾಡಿ ಮುಂದೆಯೂ ಚರ್ಚ್ ನ ಏಳಿಗೆಗಾಗಿ ಶ್ರಮಿಸ ಬೇಕೆಂದರು.
ಸ್ಪರ್ಧೆಯಲ್ಲಿ ಸೆಲಿನ್ ಡಿ ಸೋಜಾ ನೇತೃತ್ವದ ಸಂತ ಸೆಬಾಸ್ಟಿಯನ್ ತಂಡ ಪ್ರಥಮ, ಶೀಲಾ ಡಿ ಸೋಜಾ ನೇತೃತ್ವದ ತಂಡ ದ್ವಿತೀಯ ಹಾಗೂ ರೋಷನ್ ಮೊಂತೇರೊ ನೇತೃತ್ವದ ತಂಡ ತೃತೀಯ ಬಹುಮಾನ ಪಡೆದುಕೊಂಡಿತು.
ಕಾರ್ಯಕ್ರಮದಲ್ಲಿ ಚರ್ಚ್ ನ ಉಪಾಧ್ಯಕ್ಷ ಎಲಿಯಾಸ್ ಫೆರ್ನಾಂಡಿಸ್ ,ಕಾರ್ಯದರ್ಶಿ ಹಾಗೂ ಐ ಸಿ ವೈ ಎಂ ಘಟಕದ ಸಚೇತಕ ರೋಷನ್ ಮೊಂತೇರೊ , ಐ ಸಿ ವೈ ಎಂ ಘಟಕದ ಅಧ್ಯಕ್ಷ ಡ್ಯಾರನ್ ಅರಾನ್ಹಾ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು