5:01 AM Sunday5 - April 2026
ಬ್ರೇಕಿಂಗ್ ನ್ಯೂಸ್
ಕೇರಳ ಚುನಾವಣೆಗೆ ಕರ್ನಾಟಕದ ಹಣ?: ತಿರುವನಂತಪುರದಲ್ಲಿ ಕಂತೆ ಕಂತೆ ನೋಟು ಸಮೇತ ಸಿಕ್ಕಿಬಿದ್ದ… ಚಾರಣಕ್ಕೆ ತೆರಳಿ 4 ದಿನಗಳಿಂದ ನಾಪತ್ತೆಯಾಗಿದ್ದ ಕೇರಳದ ಟೆಕ್ಕಿ ಶರಣ್ಯ ಪತ್ತೆ ಸಿದ್ದರಾಮಯ್ಯ ಬಗ್ಗೆ ಪ್ರತಾಪ್ ಸಿಂಹ ನೀಡಿರುವ ಹೀನಾಯ ಹೇಳಿಕೆ ಬಿಜೆಪಿಯ ನೀಚ ರಾಜಕಾರಣ… ಎಸ್ಸೆಸ್ಸೆಲ್ಸಿ ಗ್ರೇಡಿಂಗ್ ಪದ್ಧತಿಗೆ ರಾಜ್ಯಪಾಲರು ವಿರೋಧ: ನಾಳೆ ರಾಜಭವನಕ್ಕೆ ಕರವೇ ಮುತ್ತಿಗೆ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ’: ರಾಜ್ಯಪಾಲರಿಗೆ ಕರವೇ ನಾರಾಯಣ ಗೌಡ ಖಡಕ್… ದೇಶದಲ್ಲೇ ಅತಿ ಹೆಚ್ಚು | ಬೆಂಗಳೂರಿಂದ 272 ಅಕ್ರಮ ಬಂಗ್ಲಾ ವಲಸಿಗರು ಗಡಿಪಾರು Kodagu | ಕುಶಾಲನಗರ: ಹರದೂರು – ಕಾಜೂರು ಮಕಾಂ ಉರೂಸ್ ಗೆ ಚಾಲನೆ ತ.ನಾ. ಚುನಾವಣೆ | ಚಾಮರಾಜನಗರ ಸಮೀಪದ ಮೆಟ್ಟೂರು ಕ್ಷೇತ್ರದಿಂದ ವೀರಪ್ಪನ್‌ ಪುತ್ರಿ ವಿದ್ಯಾರಾಣಿ… ಅಡಿಕೆಯೊಳಗಿದ್ದ ಸ್ಫೋಟಕ ಸಿಡಿದು ಮಹಿಳೆಗೆ ಗಾಯ: ಅಡಿಕೆಯಲ್ಲಿ ಇದ್ದಿದ್ದಾದರೂ ಏನು..? ಪ್ರಕರಣದ ಸತ್ಯಾಂಶ… ನಂಜನಗೂಡು: ಶ್ರದ್ಧಾ ಭಕ್ತಿಯಿಂದ ನಡೆದ ಪುರಾಣ ಪ್ರಸಿದ್ಧ ಕಳಲೆ ಶ್ರೀ ಲಕ್ಷ್ಮಿಕಾಂತ ಸ್ವಾಮಿ…

ಇತ್ತೀಚಿನ ಸುದ್ದಿ

‘ಪೇ ಸಿಎಂ’ ಅಭಿಯಾನ: ಮುಖ್ಯಮಂತ್ರಿ ಬೊಮ್ಮಾಯಿ ತೀವ್ರ ಆಕ್ರೋಶ; ಕಾಂಗ್ರೆಸ್ ವಿರುದ್ಧ ಚಾಟಿ

22/09/2022, 11:01

ಬೆಂಗಳೂರು(reporterkarnataka.com): ಪೇ ಸಿಎಂ ಅಭಿಯಾನದ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಫುಲ್ ಗರಂ ಆಗಿದ್ದಾರೆ. ರಾಜ್ಯದ ಪ್ರಮುಖ ಪ್ರತಿಪಕ್ಷವಾದ ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಇದು ರಾಜ್ಯದ ಮತ್ತು ನನ್ನ ಹೆಸರು ಕೆಡಿಸಲು ನಡೆಸಿರುವ ಷಡ್ಯಂತ್ರ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವ್ಯಾಖ್ಯಾನಿಸಿದ್ದಾರೆ.

ಕಾಂಗ್ರೆಸ್ ಪಕ್ಷ ಪೇ ಸಿಎಂ ಅಭಿಯಾನ ಕೈಗೊಂಡಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಇದು ವ್ಯವಸ್ಥಿತವಾಗಿ ಕರ್ನಾಟಕ ರಾಜ್ಯ ಮತ್ತು ನನ್ನ ಹೆಸರು ಕೆಡಿಸಲು ಷಡ್ಯಂತ್ರ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಪ್ರಕರಣ ದಾಖಲು ಮಾಡಲು ಸೂಚಿಸಿದ್ದೇನೆ ಎಂದರು.

ಆಧಾರ ರಹಿತವಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ಅಭಿಯಾನ ಮಾಡುವುದು ಎಲ್ಲರಿಗೂ ಬರುತ್ತದೆ. ಆದರೆ ಇದು ಸುಳ್ಳು ಎಂದು ಜನಕ್ಕೆ ತಿಳಿಯುತ್ತದೆ. ಇದಕ್ಕೆ ಯಾವ ಬೆಲೆಯೂ ಇಲ್ಲ. ಆದರೆ ರಾಜ್ಯದ ಹೆಸರು ಕೆಡಿಸುವ ಪ್ರಯತ್ನಕ್ಕೆ ಕಡಿವಾಣ ಹಾಕುವ ಪ್ರಯತ್ನ ನಮ್ಮದು ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು