11:01 PM Friday21 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

‘ಪೇ ಸಿಎಂ’ ಅಭಿಯಾನ: ಮುಖ್ಯಮಂತ್ರಿ ಬೊಮ್ಮಾಯಿ ತೀವ್ರ ಆಕ್ರೋಶ; ಕಾಂಗ್ರೆಸ್ ವಿರುದ್ಧ ಚಾಟಿ

22/09/2022, 11:01

ಬೆಂಗಳೂರು(reporterkarnataka.com): ಪೇ ಸಿಎಂ ಅಭಿಯಾನದ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಫುಲ್ ಗರಂ ಆಗಿದ್ದಾರೆ. ರಾಜ್ಯದ ಪ್ರಮುಖ ಪ್ರತಿಪಕ್ಷವಾದ ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಇದು ರಾಜ್ಯದ ಮತ್ತು ನನ್ನ ಹೆಸರು ಕೆಡಿಸಲು ನಡೆಸಿರುವ ಷಡ್ಯಂತ್ರ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವ್ಯಾಖ್ಯಾನಿಸಿದ್ದಾರೆ.

ಕಾಂಗ್ರೆಸ್ ಪಕ್ಷ ಪೇ ಸಿಎಂ ಅಭಿಯಾನ ಕೈಗೊಂಡಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಇದು ವ್ಯವಸ್ಥಿತವಾಗಿ ಕರ್ನಾಟಕ ರಾಜ್ಯ ಮತ್ತು ನನ್ನ ಹೆಸರು ಕೆಡಿಸಲು ಷಡ್ಯಂತ್ರ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಪ್ರಕರಣ ದಾಖಲು ಮಾಡಲು ಸೂಚಿಸಿದ್ದೇನೆ ಎಂದರು.

ಆಧಾರ ರಹಿತವಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ಅಭಿಯಾನ ಮಾಡುವುದು ಎಲ್ಲರಿಗೂ ಬರುತ್ತದೆ. ಆದರೆ ಇದು ಸುಳ್ಳು ಎಂದು ಜನಕ್ಕೆ ತಿಳಿಯುತ್ತದೆ. ಇದಕ್ಕೆ ಯಾವ ಬೆಲೆಯೂ ಇಲ್ಲ. ಆದರೆ ರಾಜ್ಯದ ಹೆಸರು ಕೆಡಿಸುವ ಪ್ರಯತ್ನಕ್ಕೆ ಕಡಿವಾಣ ಹಾಕುವ ಪ್ರಯತ್ನ ನಮ್ಮದು ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು