12:26 AM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಪೇಜಾವರ ಶ್ರೀಗಳಿಂದ ಮಾಜಿ ಉಪ ಪ್ರಧಾನಿ ಅಡ್ವಾಣಿ ಭೇಟಿ: ಶ್ರೀಕೃಷ್ಣನ ಗಂಧ ಪ್ರಸಾದ, ಸ್ಮರಣಿಕೆ ಅರ್ಪಣೆ

12/10/2022, 21:41

ಹೊಸದಿಲ್ಲಿ(reporterkarnataka.com); ಉಡುಪಿ ಪೇಜಾವರ ಮಠಾಧೀಶಾದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಬುಧವಾರ ದೆಹಲಿಯಲ್ಲಿ ಮಾಜಿ ಉಪ ಪ್ರಧಾನಿ ಬಿಜೆಪಿ ಹಿರಿಯ ಧುರೀಣ ಎಲ್. ಕೆ. ಅಡ್ವಾಣಿ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿದರು.

ಅಡ್ವಾಣಿಯವರೊಂದಿಗೆ ಉಭಯಕುಶಲೋಪರಿ ನಡೆಸಿ ಅವರಿಗೆ ದೀರ್ಘಾಯುರಾರೋಗ್ಯವನ್ನು ಶ್ರೀಕೃಷ್ಣನಲ್ಲಿ ಪ್ರಾರ್ಥಿಸುವುದಾಗಿ ತಿಳಿಸಿದರು.
ಅಯೋಧ್ಯಾ ರಾಮಜನ್ಮಭೂಮಿ ಆಂದೋಲನದಲ್ಲಿ ಅಡ್ವಾಣಿ ಯವರ ಪಾತ್ರವನ್ನು ಶ್ರೀಗಳು ಬಣ್ಣಿಸಿ ಆ ಹೋರಾಟದ ಫಲವಾಗಿ ಇಂದು ಭವ್ಯ ರಾಮ ಮಂದಿರ ನಿರ್ಮಾಣಗೊಳ್ಳುವಂತಾಗಿದೆ ಎಂದರು . ಶ್ತೀ ವಿಶ್ವೇಶತೀರ್ಥ ಶ್ರೀಪಾದರು ತಮಗೆ ಯಾವತ್ತೂ ನೀಡಿದ ಸ್ಫೂರ್ತಿಯನ್ನು ಮನಸಾರೆ ಸ್ಮರಿಸಿದರು.


ಅಡ್ವಾಣಿಯವರಿಗೆ ಶ್ರೀ ಕೃಷ್ಣನ ಗಂಧ ಪ್ರಸಾದ ಶಾಲು ಸ್ಮರಣಿಕೆ ಫಲಮಂತ್ರಾಕ್ಷತೆಯಿತ್ತು ಆಶೀರ್ವದಿಸಿದರು.ಅಡ್ವಾಣಿ ಅವರ ಪುತ್ರಿ ಪ್ರತಿಭಾ ಅಡ್ವಾಣಿ ಮತ್ತು ಮನೆ ಮಂದಿ ಶ್ರೀಗಳವರನ್ನು ಬರಮಾಡಿಕೊಂಡರು.ಸ್ವಲ್ಪ ಅನಾರೋಗ್ಯವಿದ್ದರೂ ಅಡ್ವಾಣಿಜೀ ಮನೆ ಬಾಗಿಲಿನ ಬಂದು ಶ್ರೀಗಳವರನ್ನು ಬೀಳ್ಕೊಟ್ಟರು.


ವಿದ್ವಾನ್ ದೇವಿಪ್ರಸಾದ್ ಭಟ್ವ, ವಿಷ್ಣುಮೂರ್ತಿ ಆಚಾರ್ಯ , ಕೃಷ್ಣ ಭಟ್ ಉಪಸ್ಥಿತರಿದ್ದರು .

ಇತ್ತೀಚಿನ ಸುದ್ದಿ

ಜಾಹೀರಾತು