4:58 AM Tuesday3 - March 2026
ಬ್ರೇಕಿಂಗ್ ನ್ಯೂಸ್
ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು

ಇತ್ತೀಚಿನ ಸುದ್ದಿ

ಸೇನೆಯಲ್ಲಿ 15 ವರ್ಷಕ್ಕಿಂತ ಕಡಿಮೆ ಸೇವೆ ಸಲ್ಲಿಸಿದವರಿಗೂ ಪಿಂಚಣಿ ಸೌಲಭ್ಯ

23/11/2025, 17:16

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಸುಮಾರು15 ವರ್ಷಕ್ಕಿಂತ ಕಡಿಮೆ ಸೇನೆಯಲ್ಲಿ ಸೇವೆ ಸಲ್ಲಿಸಿ ಸೈನಿಕ ಪಿಂಚಣಿ ವಂಚಿತರಾದವರಿಗೂ ‘ಪಿಂಚಣಿ ಸೌಲಭ್ಯವಿದ್ದು, ಇದನ್ನು ಪಡೆದುಕೊಳ್ಳುವಂತೆ ಅಖಿಲ ಮಾಜಿ ಸೈನಿಕರ ಕರ್ನಾಟಕ ಮಾಜಿ ಸೈನಿಕರ ಸಂಘದ ಕೊಡಗು ಘಟಕದ ಗೌರವಾಧ್ಯಕ್ಷ ಕೊಟ್ಟುಕತ್ತಿರ ಸೋಮಣ್ಣ ತಿಳಿಸಿದ್ದಾರೆ.
ಇಂದಿಗೂ ಪಿಂಚಣಿ ಸೌಲಭ್ಯ ಇಲ್ಲದ ಹದಿನೈದು ವರ್ಷಕ್ಕಿಂತ ಕಡಿಮೆ ಸೇವೆ ಸಲ್ಲಿಸಿದ ಮಾಜಿ ಸೈನಿಕರು ಇಲ್ಲವೆ ವಿಧವೆಯರು ಈ ಸೌಲಭ್ಯವನ್ನು ಹೊಂದಿಕೊಳ್ಳಲು ಅವಕಾಶವಿದೆ. ಈ ಪಿಂಚಣಿ ಯೋಜನೆಯಡಿ 8 ಸಾವಿರ ರೂ. ಮಾಸಿಕ ಪಡೆಯಲು ಅವಕಾಶವಿದೆ,” ಎಂದು ತಿಳಿಸಿದರು. ”ಯೋಜನೆಯಡಿ ಸೌಲಭ್ಯ ಪಡೆಯಲು ಬಯಸುವವರ ಆದಾಯ ವಾರ್ಷಿಕ 80 ಸಾವಿರ ರೂ. ಒಳಗಿರಬೇಕು ಮತ್ತು 4 ಎಕರೆಗಿಂತ ಹೆಚ್ಚಿನ ಜಮೀನು ಹೊಂದಿರಬಾರದೆನ್ನುವ ನಿಯಮವಿದೆ. ಹದಿನೈದು ವರ್ಷ ಕ್ಕಿಂತ ಕಡಿಮೆ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿ ಸೈನ್ಯದ ಪಿಂಚಣಿ ಯಿಂದ ವಂಚಿತರಾಗಿರುವವರು ಸೈನಿಕ ಬೋರ್ಡ್ ಮೂಲಕ ಪಿಂಚಣಿ ಸೌಲಭ್ಯ ಪಡೆಯಲು ಅವಕಾಶವಿದೆ. ಇದಕ್ಕಾಗಿ ಅಸಕ್ತರು ಡಿಸ್ಟಾರ್ಜ್ ಸರ್ಟಿಫಿಕೇಟ್, ಸೈನಿಕ ಬೋರ್ಡ್ ಐಡಿ ಕಾರ್ಡ್, ಆಧಾರ್, ಪ್ಯಾನ್, ಅದಾಯ ದೃಢೀಕರಣ ಪತ್ರ ದಾಖಲಾತಿಗಳೊಂದಿಗೆ ಸೈನಿಕ ಬೋರ್ಡ್ ಸಂಪರ್ಕಿಸಬಹುದು. ಮಾಹಿತಿಗಾಗಿ ತನ್ನ ಮೊ. 9448447158 ಅನ್ನು ಸಂಪರ್ಕಿಸಬಹುದು,” ಎಂದು ತಿಳಿಸಿದರು. ಮಾಹಿತಿಯ ಕೊರತೆ: ಈ ಪಿಂಚಣಿ ಹಿಂದಿನಿಂದಲೂ ಜಾರಿಯಲ್ಲಿದ್ದರು ಬಹಳಷ್ಟು ಮಾಜಿ ಸೈನಿಕರಿಗೆ ಇದರ ಕುರಿತಾದ ಮಾಹಿತಿ ಇಲ್ಲದೆ, ಪಿಂಚಣಿಯಿಂದ ವಂಚಿತರಾಗಿದ್ದಾರೆ. ಇನ್ನಾದರು ಇದರ ಸೌಲಭ್ಯ ಹೊಂದಿಕೊಳ್ಳಬೇಕು,” ಎಂದು ಮನವಿ ಮಾಡಿದರು. ಕಡುಬಡವರಿಗೆ ನೆರವು: ಸೈನಿಕ ಪಿಂಚಣಿ ಸೌಲಭ್ಯವನ್ನು ಪಡೆಯುತ್ತಿರುವ ಕಡುಬಡವರಾದ ಮಾಜಿ ಸೈನಿಕರ ಮಕ್ಕಳು ವೈದ್ಯಕೀಯ, ಎಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದಲ್ಲಿ, ಅವರಿಗೆ ಗದಗ್‌ನ ದೇವಪ್ರಭು ಎಂಬುವವರು ಧನ ಸಹಾಯ ಮಾಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಧನ ಸಹಾಯ ಬಯಸುವ ಕಡುಬಡವರಾದ ಮಾಜಿ ಸೈನಿಕರು ಮೊ. 8660737534 ಅನ್ನು ಸಂಪರ್ಕಿಸಬಹುದು,” ಎಂದು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು