5:22 PM Sunday23 - November 2025
ಬ್ರೇಕಿಂಗ್ ನ್ಯೂಸ್
ಹದಗೆಟ್ಟ ರಸ್ತೆಯಲ್ಲಿ ಅವಘಡಗಳ ಸರಮಾಲೆ: ಮಾಕುಟ್ಟಾ ರಸ್ತೆ ಮದ್ಯ ಲಾರಿ ಮಗುಚ್ಚಿ ಸುಗಮ… Chikkamagaluru | ಎನ್.ಆರ್.ಪುರ: ರಾಜ್ಯ ಹೆದ್ದಾರಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ; ಜನರಲ್ಲಿ ಮತ್ತೆ… ಸಿದ್ದರಾಮಯ್ಯರ ಹಣಕಾಸು ಮಂತ್ರಿ ಮಾಡಿದ್ದೇ ನಾನು: ಸಿಎಂ ವಿರುದ್ದ ಮಾಜಿ ಪಿಎಂ ದೇವೇಗೌಡ… ಮೆಕ್ಕೆಜೋಳ ಖರೀದಿ-ಆಮದು ಬಗ್ಗೆ ಹಸಿ ಹಸಿ ಸುಳ್ಳು ಹೇಳುತ್ತಿದ್ದಾರೆ ಸಿಎಂ: ಕೇಂದ್ರ ಸಚಿವ… ರಾಜ್ಯಕ್ಕೆ ಯಾರು ಮುಖ್ಯಮಂತ್ರಿ ಎಂದು ಕಾಂಗ್ರೆಸ್‌ ಹೈಕಮಾಂಡ್‌ ಸ್ಪಷ್ಟವಾಗಿ ತಿಳಿಸಲಿ: ಪ್ರತಿಪಕ್ಷ ನಾಯಕ… ಕೇರಳದಿಂದ ಮಡಿಕೇರಿಗೆ ಅಕ್ರಮ ಕೆಂಪು ಕಲ್ಲು ಸಾಗಾಟ: ಸುಳ್ಯ ಪೊಲೀಸರಿಂದ ಲಾರಿ ವಶ ಡಿಕೆಶಿ ಮುಖ್ಯಮಂತ್ರಿ ಆಗಲಿ ಎಂದು 91 ಕೆಜಿ ಎಳ್ಳಿನ ತುಲಾಭಾರ: ಪಾವಗಡದಲ್ಲಿ ಅಭಿಮಾನಿಗಳ… ಮೀನುಗಾರಿಕಾ ವಿಶ್ವ ವಿದ್ಯಾಲಯ ಸ್ಥಾಪಿಸಲು ಸರಕಾರ ಸಿದ್ಧವಿದೆ: ಸಿಎಂ ಸಿದ್ದರಾಮಯ್ಯ ಘೋಷಣೆ ಮಂಡ್ಯ ಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಸಚಿನ್ ಚಲುವರಾಯಸ್ವಾಮಿ ಆಯ್ಕೆ ಅರಣ್ಯ ಪ್ರದೇಶದಿಂದ ಅಕ್ರಮವಾಗಿ ಮಣ್ಣು ಸಾಗಾಟ: ಸ್ಥಳೀಯರ ತೀವ್ರ ಆಕ್ಷೇಪ; ಮೌನ ವಹಿಸಿದ…

ಇತ್ತೀಚಿನ ಸುದ್ದಿ

ಸೇನೆಯಲ್ಲಿ 15 ವರ್ಷಕ್ಕಿಂತ ಕಡಿಮೆ ಸೇವೆ ಸಲ್ಲಿಸಿದವರಿಗೂ ಪಿಂಚಣಿ ಸೌಲಭ್ಯ

23/11/2025, 17:16

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಸುಮಾರು15 ವರ್ಷಕ್ಕಿಂತ ಕಡಿಮೆ ಸೇನೆಯಲ್ಲಿ ಸೇವೆ ಸಲ್ಲಿಸಿ ಸೈನಿಕ ಪಿಂಚಣಿ ವಂಚಿತರಾದವರಿಗೂ ‘ಪಿಂಚಣಿ ಸೌಲಭ್ಯವಿದ್ದು, ಇದನ್ನು ಪಡೆದುಕೊಳ್ಳುವಂತೆ ಅಖಿಲ ಮಾಜಿ ಸೈನಿಕರ ಕರ್ನಾಟಕ ಮಾಜಿ ಸೈನಿಕರ ಸಂಘದ ಕೊಡಗು ಘಟಕದ ಗೌರವಾಧ್ಯಕ್ಷ ಕೊಟ್ಟುಕತ್ತಿರ ಸೋಮಣ್ಣ ತಿಳಿಸಿದ್ದಾರೆ.
ಇಂದಿಗೂ ಪಿಂಚಣಿ ಸೌಲಭ್ಯ ಇಲ್ಲದ ಹದಿನೈದು ವರ್ಷಕ್ಕಿಂತ ಕಡಿಮೆ ಸೇವೆ ಸಲ್ಲಿಸಿದ ಮಾಜಿ ಸೈನಿಕರು ಇಲ್ಲವೆ ವಿಧವೆಯರು ಈ ಸೌಲಭ್ಯವನ್ನು ಹೊಂದಿಕೊಳ್ಳಲು ಅವಕಾಶವಿದೆ. ಈ ಪಿಂಚಣಿ ಯೋಜನೆಯಡಿ 8 ಸಾವಿರ ರೂ. ಮಾಸಿಕ ಪಡೆಯಲು ಅವಕಾಶವಿದೆ,” ಎಂದು ತಿಳಿಸಿದರು. ”ಯೋಜನೆಯಡಿ ಸೌಲಭ್ಯ ಪಡೆಯಲು ಬಯಸುವವರ ಆದಾಯ ವಾರ್ಷಿಕ 80 ಸಾವಿರ ರೂ. ಒಳಗಿರಬೇಕು ಮತ್ತು 4 ಎಕರೆಗಿಂತ ಹೆಚ್ಚಿನ ಜಮೀನು ಹೊಂದಿರಬಾರದೆನ್ನುವ ನಿಯಮವಿದೆ. ಹದಿನೈದು ವರ್ಷ ಕ್ಕಿಂತ ಕಡಿಮೆ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿ ಸೈನ್ಯದ ಪಿಂಚಣಿ ಯಿಂದ ವಂಚಿತರಾಗಿರುವವರು ಸೈನಿಕ ಬೋರ್ಡ್ ಮೂಲಕ ಪಿಂಚಣಿ ಸೌಲಭ್ಯ ಪಡೆಯಲು ಅವಕಾಶವಿದೆ. ಇದಕ್ಕಾಗಿ ಅಸಕ್ತರು ಡಿಸ್ಟಾರ್ಜ್ ಸರ್ಟಿಫಿಕೇಟ್, ಸೈನಿಕ ಬೋರ್ಡ್ ಐಡಿ ಕಾರ್ಡ್, ಆಧಾರ್, ಪ್ಯಾನ್, ಅದಾಯ ದೃಢೀಕರಣ ಪತ್ರ ದಾಖಲಾತಿಗಳೊಂದಿಗೆ ಸೈನಿಕ ಬೋರ್ಡ್ ಸಂಪರ್ಕಿಸಬಹುದು. ಮಾಹಿತಿಗಾಗಿ ತನ್ನ ಮೊ. 9448447158 ಅನ್ನು ಸಂಪರ್ಕಿಸಬಹುದು,” ಎಂದು ತಿಳಿಸಿದರು. ಮಾಹಿತಿಯ ಕೊರತೆ: ಈ ಪಿಂಚಣಿ ಹಿಂದಿನಿಂದಲೂ ಜಾರಿಯಲ್ಲಿದ್ದರು ಬಹಳಷ್ಟು ಮಾಜಿ ಸೈನಿಕರಿಗೆ ಇದರ ಕುರಿತಾದ ಮಾಹಿತಿ ಇಲ್ಲದೆ, ಪಿಂಚಣಿಯಿಂದ ವಂಚಿತರಾಗಿದ್ದಾರೆ. ಇನ್ನಾದರು ಇದರ ಸೌಲಭ್ಯ ಹೊಂದಿಕೊಳ್ಳಬೇಕು,” ಎಂದು ಮನವಿ ಮಾಡಿದರು. ಕಡುಬಡವರಿಗೆ ನೆರವು: ಸೈನಿಕ ಪಿಂಚಣಿ ಸೌಲಭ್ಯವನ್ನು ಪಡೆಯುತ್ತಿರುವ ಕಡುಬಡವರಾದ ಮಾಜಿ ಸೈನಿಕರ ಮಕ್ಕಳು ವೈದ್ಯಕೀಯ, ಎಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದಲ್ಲಿ, ಅವರಿಗೆ ಗದಗ್‌ನ ದೇವಪ್ರಭು ಎಂಬುವವರು ಧನ ಸಹಾಯ ಮಾಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಧನ ಸಹಾಯ ಬಯಸುವ ಕಡುಬಡವರಾದ ಮಾಜಿ ಸೈನಿಕರು ಮೊ. 8660737534 ಅನ್ನು ಸಂಪರ್ಕಿಸಬಹುದು,” ಎಂದು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು