5:31 PM Wednesday8 - July 2026
ಬ್ರೇಕಿಂಗ್ ನ್ಯೂಸ್
ನಾಗರಹೊಳೆ ಉದ್ಯಾನದ ಬೀಟ್‌ಗಾರ್ಡ್ ಮನೆಯಲ್ಲಿ ಅಕ್ರಮ ಜಿಂಕೆ ಪತ್ತೆ: ಬಂಧನ; ಬಂದೂಕು ವಶ ಮೂಗ್ರಹಳ್ಳಿ ಸೇತುವೆ ಕಾಮಗಾರಿಯಲ್ಲಿ ಸುರಕ್ಷತೆ ನಿರ್ಲಕ್ಷ್ಯ ಆರೋಪ; ಕಾಮಗಾರಿ ತಾತ್ಕಾಲಿಕ ಸ್ಥಗಿತಕ್ಕೆ ಗ್ರಾಮಸ್ಥರ… ಮರದ ದಿಮ್ಮಿ ಸಾಗಾಟ | ದಸರಾ ಅಂಬಾರಿ ಆನೆ ಕ್ಯಾಪ್ಟನ್ ಅಭಿಮನ್ಯು ದಂತ… ಬೇಲೂರು | SIR ಕರ್ತವ್ಯದ ಒತ್ತಡಕ್ಕೆ ಕುಸಿದು ಬಿದ್ದ ನಿವೃತ್ತಿಯಂಚಿನಲ್ಲಿರುವ 60ರ ಹರೆಯದ… ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿ ಮತ್ತು ಅನಾವೃಷ್ಟಿ ಎದುರಿಸಲು ಸಜ್ಜಾಗಿ: ಮೇಲುಸ್ತುವಾರಿ ಸಚಿವ ಯು.ಟಿ.… ಕಳಸ: ಬೈಕಿಗೆ ಸೈಡ್ ಕೊಡಲು ಹೋಗಿ ತೋಟಕ್ಕೆ ನುಗ್ಗಿದ ಕಾರು; ಪ್ರಯಾಣಿಕರು ಪಾರು ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ…

ಇತ್ತೀಚಿನ ಸುದ್ದಿ

ಸೇನೆಯಲ್ಲಿ 15 ವರ್ಷಕ್ಕಿಂತ ಕಡಿಮೆ ಸೇವೆ ಸಲ್ಲಿಸಿದವರಿಗೂ ಪಿಂಚಣಿ ಸೌಲಭ್ಯ

23/11/2025, 17:16

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಸುಮಾರು15 ವರ್ಷಕ್ಕಿಂತ ಕಡಿಮೆ ಸೇನೆಯಲ್ಲಿ ಸೇವೆ ಸಲ್ಲಿಸಿ ಸೈನಿಕ ಪಿಂಚಣಿ ವಂಚಿತರಾದವರಿಗೂ ‘ಪಿಂಚಣಿ ಸೌಲಭ್ಯವಿದ್ದು, ಇದನ್ನು ಪಡೆದುಕೊಳ್ಳುವಂತೆ ಅಖಿಲ ಮಾಜಿ ಸೈನಿಕರ ಕರ್ನಾಟಕ ಮಾಜಿ ಸೈನಿಕರ ಸಂಘದ ಕೊಡಗು ಘಟಕದ ಗೌರವಾಧ್ಯಕ್ಷ ಕೊಟ್ಟುಕತ್ತಿರ ಸೋಮಣ್ಣ ತಿಳಿಸಿದ್ದಾರೆ.
ಇಂದಿಗೂ ಪಿಂಚಣಿ ಸೌಲಭ್ಯ ಇಲ್ಲದ ಹದಿನೈದು ವರ್ಷಕ್ಕಿಂತ ಕಡಿಮೆ ಸೇವೆ ಸಲ್ಲಿಸಿದ ಮಾಜಿ ಸೈನಿಕರು ಇಲ್ಲವೆ ವಿಧವೆಯರು ಈ ಸೌಲಭ್ಯವನ್ನು ಹೊಂದಿಕೊಳ್ಳಲು ಅವಕಾಶವಿದೆ. ಈ ಪಿಂಚಣಿ ಯೋಜನೆಯಡಿ 8 ಸಾವಿರ ರೂ. ಮಾಸಿಕ ಪಡೆಯಲು ಅವಕಾಶವಿದೆ,” ಎಂದು ತಿಳಿಸಿದರು. ”ಯೋಜನೆಯಡಿ ಸೌಲಭ್ಯ ಪಡೆಯಲು ಬಯಸುವವರ ಆದಾಯ ವಾರ್ಷಿಕ 80 ಸಾವಿರ ರೂ. ಒಳಗಿರಬೇಕು ಮತ್ತು 4 ಎಕರೆಗಿಂತ ಹೆಚ್ಚಿನ ಜಮೀನು ಹೊಂದಿರಬಾರದೆನ್ನುವ ನಿಯಮವಿದೆ. ಹದಿನೈದು ವರ್ಷ ಕ್ಕಿಂತ ಕಡಿಮೆ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿ ಸೈನ್ಯದ ಪಿಂಚಣಿ ಯಿಂದ ವಂಚಿತರಾಗಿರುವವರು ಸೈನಿಕ ಬೋರ್ಡ್ ಮೂಲಕ ಪಿಂಚಣಿ ಸೌಲಭ್ಯ ಪಡೆಯಲು ಅವಕಾಶವಿದೆ. ಇದಕ್ಕಾಗಿ ಅಸಕ್ತರು ಡಿಸ್ಟಾರ್ಜ್ ಸರ್ಟಿಫಿಕೇಟ್, ಸೈನಿಕ ಬೋರ್ಡ್ ಐಡಿ ಕಾರ್ಡ್, ಆಧಾರ್, ಪ್ಯಾನ್, ಅದಾಯ ದೃಢೀಕರಣ ಪತ್ರ ದಾಖಲಾತಿಗಳೊಂದಿಗೆ ಸೈನಿಕ ಬೋರ್ಡ್ ಸಂಪರ್ಕಿಸಬಹುದು. ಮಾಹಿತಿಗಾಗಿ ತನ್ನ ಮೊ. 9448447158 ಅನ್ನು ಸಂಪರ್ಕಿಸಬಹುದು,” ಎಂದು ತಿಳಿಸಿದರು. ಮಾಹಿತಿಯ ಕೊರತೆ: ಈ ಪಿಂಚಣಿ ಹಿಂದಿನಿಂದಲೂ ಜಾರಿಯಲ್ಲಿದ್ದರು ಬಹಳಷ್ಟು ಮಾಜಿ ಸೈನಿಕರಿಗೆ ಇದರ ಕುರಿತಾದ ಮಾಹಿತಿ ಇಲ್ಲದೆ, ಪಿಂಚಣಿಯಿಂದ ವಂಚಿತರಾಗಿದ್ದಾರೆ. ಇನ್ನಾದರು ಇದರ ಸೌಲಭ್ಯ ಹೊಂದಿಕೊಳ್ಳಬೇಕು,” ಎಂದು ಮನವಿ ಮಾಡಿದರು. ಕಡುಬಡವರಿಗೆ ನೆರವು: ಸೈನಿಕ ಪಿಂಚಣಿ ಸೌಲಭ್ಯವನ್ನು ಪಡೆಯುತ್ತಿರುವ ಕಡುಬಡವರಾದ ಮಾಜಿ ಸೈನಿಕರ ಮಕ್ಕಳು ವೈದ್ಯಕೀಯ, ಎಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದಲ್ಲಿ, ಅವರಿಗೆ ಗದಗ್‌ನ ದೇವಪ್ರಭು ಎಂಬುವವರು ಧನ ಸಹಾಯ ಮಾಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಧನ ಸಹಾಯ ಬಯಸುವ ಕಡುಬಡವರಾದ ಮಾಜಿ ಸೈನಿಕರು ಮೊ. 8660737534 ಅನ್ನು ಸಂಪರ್ಕಿಸಬಹುದು,” ಎಂದು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು