12:01 PM Friday30 - January 2026
ಬ್ರೇಕಿಂಗ್ ನ್ಯೂಸ್
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ ಕನ್ನಡ ಭಾಷೆ ಎಂದರೆ ಹಲವು ಆಯಾಮಗಳ ಸಾಧ್ಯತೆ: ಪುರುಷೋತ್ತಮ ಬಿಳಿಮಲೆ 600ಕ್ಕೂ ಹೆಚ್ಚು ಜಿಟಿಸಿಸಿ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಲಿರುವ ರ‍್ಯಾಂಗ್‌ಸನ್ಸ್‌ ಏರೋಸ್ಪೇಸ್, ​​ಎಕ್ಸೈಡ್ ಎನರ್ಜಿ ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ…

ಇತ್ತೀಚಿನ ಸುದ್ದಿ

ಪೆರಾಜೆ: ಬಾಲವಿಕಾಸ ಆಂಗ್ಲ‌ ಮಾಧ್ಯಮ ಶಾಲೆಯ‌ 2 ದಿನಗಳ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ

09/12/2023, 12:16

ಬಂಟ್ವಾಳ(reporterkarnataka.com): ಪೆರಾಜೆ ವಿದ್ಯಾನಗರದ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಎರಡು ದಿನಗಳ ಕಾಲ ನಡೆಯಲಿರುವ ವಾರ್ಷಿಕ ಕ್ರೀಡಾಕೂಟಕ್ಕೆ ಡಿಸೆಂಬರ್ 8 ರಂದು ಚಾಲನೆ ನೀಡಲಾಯಿತು. ಕಲ್ಲಡ್ಕ ಮ್ಯೂಸಿಯಂನ ಸಂಸ್ಥಾಪಕ, ಬಾಲವಿಕಾಸ ಶಾಲೆಯ ಹಿರಿಯ ವಿದ್ಯಾರ್ಥಿ ಮೊಹಮ್ಮದ್ ಯಾಸಿರ್ ಅವರು ಕ್ರೀಡಾಕೂಟವನ್ನು ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು,ಬಾಲವಿಕಾಸ ಶಾಲೆಯು ಇದೀಗ ಎಲ್ಲಾ ಸೌಕರ್ಯಗಳನ್ನು ಅಳವಡಿಸಿಕೊಂಡು ಬೆಳೆಯುತ್ತಿದೆ. ವಿಸ್ತಾರವಾದ ಆಟದ ಮೈದಾನವನ್ನು ಹೊಂದಿದ್ದು ಕ್ರೀಡಾಪಟುಗಳಿಗೆ ಉತ್ತಮ ಅವಕಾಶ ನೀಡುತ್ತಿದೆ‌, ಶಾಲಾ ವಿದ್ಯಾರ್ಥಿಗಳು ಈ ಸೌಕರ್ಯಗಳನ್ನು ಬಳಸಿಕೊಂಡು ಕ್ರೀಡೆಯಲ್ಲಿ ಉತ್ತಮ ಸಾಧನೆಗೈಯುವಂತೆ ಕರೆ ನೀಡಿದರು.
ಅಧ್ಯಕ್ಷತೆ ವಹಿಸಿದ್ದ ಶಾಲಾ ಆಡಳಿತಾಧಿಕಾರಿ ರವೀಂದ್ರ ದರ್ಬೆಯವರು”ಇಂದಿನ ಮಕ್ಕಳಿಗೆ ವ್ಯಾಯಾಮದ ಅಗತ್ಯವಿದೆ, ಅದು ಕ್ರೀಡೆಯಲ್ಲಿ ದೊರೆಯುತ್ತದೆ.ಶಿಕ್ಷಣ ಎಂದರೆ ಕೇವಲ‌ ಅಂಕಗಳನ್ನು ಗಳಿಸುವುದು ಮಾತ್ರವಲ್ಲ, ಪ್ರತಿಭೆಯ ಅನ್ವೇಷಣೆಯೂ ಶಿಕ್ಷಣವಾಗಿದೆ”ಎಂದರು. ಕ್ರೀಡೋತ್ಸವದಲ್ಲಿ ಕ್ರೀಡಾ ಜ್ಯೋತಿಯ ಆಗಮನ ಹಾಗೂ ಆಕರ್ಷಣೀಯ ಪಥಸಂಚಲನವು ಎಲ್ಲರ ಗಮನ ಸೆಳೆಯಿತು.

ಕಾರ್ಯಕ್ರಮದಲ್ಲಿ ಬಾಲವಿಕಾಸ ಟ್ರಸ್ಟ್ ನ ಕಾರ್ಯದರ್ಶಿ ಮಹೇಶ್ ಜೆ ಶೆಟ್ಟಿ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷೆ ಕಸ್ತೂರಿ ಪಿ. ಶೆಟ್ಟಿ ಉಪಸ್ಥಿತರಿದ್ದರು.
ದೈಹಿಕ ಶಿಕ್ಷಣ ಶಿಕ್ಷಕರಾದ ದಿನಕರ್ ಪೂಜಾರಿ ಹಾಗೂ ವಿಶಾಲಾಕ್ಷಿ ಎಚ್. ಆಳ್ವ ಸಹಕರಿಸಿದರು. ಶಿಕ್ಷಕಿ ಮೋಹಿನಿ ಎ. ರೈ ಸ್ವಾಗತಿಸಿ, ಮುಖ್ಯೋಪಾಧ್ಯಾಯಿನಿ ವಿಜಯಲಕ್ಷ್ಮಿ ವಿ. ಶೆಟ್ಟಿ ವಂದಿಸಿದರು. ಶಿಕ್ಷಕಿಯರಾದ ರಶ್ಮಿ ಫೆರ್ನಾಂಡಿಸ್ ಹಾಗೂ ಯಜ್ಞೇಶ್ವರಿ ಎನ್. ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು