4:17 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಪೆರಾಜೆ ಮಠದಲ್ಲಿ ಉಪ್ಪಿನಂಗಡಿ ವಲಯ ವಿದ್ಯಾರ್ಥಿ ಯುವ ಪ್ರತಿಭಾ ಪ್ರದರ್ಶನ, ಕ್ರೀಡೋತ್ಸವ

07/11/2024, 10:53

ಬಂಟ್ವಾಳ(reporterkarnataka.com): ಉಪ್ಪಿನಂಗಡಿ ವಲಯ ವಿದ್ಯಾರ್ಥಿ ಯುವ ಪ್ರತಿಭಾ ಪ್ರದರ್ಶನ ಮತ್ತು ಕ್ರೀಡೋತ್ಸವ ಪೆರಾಜೆ ಮಾಣಿ ಮಠದಲ್ಲಿ ಜರುಗಿತು.
ಉಪ್ಪಿನಂಗಡಿ ಹವ್ಯಕ ಮಂಡಲ ಗುರಿಕ್ಕಾರ ಶಂಕರ ಭಟ್ ಬಲ್ಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಇಂದು ಜಾತಿ ಮತಗಳ‌‌ ವೈಭವೀಕರಣವಾಗುತ್ತಿದ್ದು, ನಮ್ಮ ಅಸ್ತಿತ್ವಕ್ಕಾಗಿ ಸಂಘಟಿತರಾಗುವುದು ಅನಿವಾರ್ಯವಾಗಿದೆ. ಸಂಘಟನೆಗಾಗಿ ಕ್ರೀಡಾಕೂಟ‌‌ ಏರ್ಪಡಿಸಲಾಗಿದೆ‌ ಎಂದರು. ಬಾಲಸುಬ್ರಹ್ಮಣ್ಯ ಭಟ್ ಸರ್ಪಮೂಲೆ ಮಾತನಾಡಿ, ವೈದಿಕ, ಧಾರ್ಮಿಕ,‌ ಶಿಕ್ಷಕ ಹಾಗೂ ಮಾತೆಯರ ಸಮಾವೇಶಗಳು ಯಶಸ್ವಿಯಾಗಿ ನಡೆದಿದೆ. ವಿದ್ಯಾರ್ಥಿ ಯುವಕರ ಒಗ್ಗೂಡಿಸಲು ಕಾರ್ಯಕ್ರಮ ನಡೆಯುತ್ತಿದೆ ಎಂದರು.


ಕೇಶವ ಪ್ರಕಾಶ‌ ಎಂ.ಶುಭಹಾರೈಸಿದರು. ಪ್ರತಿಭಾನ್ವಿತ ವಿದ್ಯಾರ್ಥಿಗಳು ಹಾಗೂ ಬೆಳ್ತಂಗಡಿ ಶ್ರೀಭಾರತಿ ಉರ್ವಾಲು ಶಾಲೆಯ ವಿದ್ಯಾರ್ಥಿಗಳನ್ನು ಸ್ಮರಣಿಕೆ ನೀಡಿ ಪುರಸ್ಕರಿಸಲಾಯಿತು.
ಹಾರಕೆರೆ ನಾರಾಯಣ ಭಟ್, ಶೈಲಜಾ ಭಟ್ ಕೆ.ಟಿ. ಮತ್ತಿತರರು ಉಪಸ್ಥಿತರಿದ್ದರು.
ಮಹೇಶ ಸ್ವಾಗತಿಸಿದರು.ಅವನೀಶ ಪೆರಿಯಡ್ಕ ನಿರೂಪಿಸಿ ವಂದಿಸಿದರು. ಬಳಿಕ ಮಠದಲ್ಲಿ ಹಿರಿಯರಿಂದ ರುದ್ರ ಪಠಣ ನಡೆಯಿತು.ವಿದ್ಯಾರ್ಥಿಗಳ ಬೌದ್ಧಿಕ ಸ್ಪರ್ಧೆಗಳು,ಹೊರಾಂಗಣ ಮತ್ತು ಒಳಾಂಗಣ ಕ್ರೀಡೆಗಳು ಜರಗಿತು.

ಇತ್ತೀಚಿನ ಸುದ್ದಿ

ಜಾಹೀರಾತು