8:48 AM Thursday5 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಪೆರಾಜೆ ಮಠದಲ್ಲಿ ಉಪ್ಪಿನಂಗಡಿ ವಲಯ ವಿದ್ಯಾರ್ಥಿ ಯುವ ಪ್ರತಿಭಾ ಪ್ರದರ್ಶನ, ಕ್ರೀಡೋತ್ಸವ

07/11/2024, 10:53

ಬಂಟ್ವಾಳ(reporterkarnataka.com): ಉಪ್ಪಿನಂಗಡಿ ವಲಯ ವಿದ್ಯಾರ್ಥಿ ಯುವ ಪ್ರತಿಭಾ ಪ್ರದರ್ಶನ ಮತ್ತು ಕ್ರೀಡೋತ್ಸವ ಪೆರಾಜೆ ಮಾಣಿ ಮಠದಲ್ಲಿ ಜರುಗಿತು.
ಉಪ್ಪಿನಂಗಡಿ ಹವ್ಯಕ ಮಂಡಲ ಗುರಿಕ್ಕಾರ ಶಂಕರ ಭಟ್ ಬಲ್ಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಇಂದು ಜಾತಿ ಮತಗಳ‌‌ ವೈಭವೀಕರಣವಾಗುತ್ತಿದ್ದು, ನಮ್ಮ ಅಸ್ತಿತ್ವಕ್ಕಾಗಿ ಸಂಘಟಿತರಾಗುವುದು ಅನಿವಾರ್ಯವಾಗಿದೆ. ಸಂಘಟನೆಗಾಗಿ ಕ್ರೀಡಾಕೂಟ‌‌ ಏರ್ಪಡಿಸಲಾಗಿದೆ‌ ಎಂದರು. ಬಾಲಸುಬ್ರಹ್ಮಣ್ಯ ಭಟ್ ಸರ್ಪಮೂಲೆ ಮಾತನಾಡಿ, ವೈದಿಕ, ಧಾರ್ಮಿಕ,‌ ಶಿಕ್ಷಕ ಹಾಗೂ ಮಾತೆಯರ ಸಮಾವೇಶಗಳು ಯಶಸ್ವಿಯಾಗಿ ನಡೆದಿದೆ. ವಿದ್ಯಾರ್ಥಿ ಯುವಕರ ಒಗ್ಗೂಡಿಸಲು ಕಾರ್ಯಕ್ರಮ ನಡೆಯುತ್ತಿದೆ ಎಂದರು.


ಕೇಶವ ಪ್ರಕಾಶ‌ ಎಂ.ಶುಭಹಾರೈಸಿದರು. ಪ್ರತಿಭಾನ್ವಿತ ವಿದ್ಯಾರ್ಥಿಗಳು ಹಾಗೂ ಬೆಳ್ತಂಗಡಿ ಶ್ರೀಭಾರತಿ ಉರ್ವಾಲು ಶಾಲೆಯ ವಿದ್ಯಾರ್ಥಿಗಳನ್ನು ಸ್ಮರಣಿಕೆ ನೀಡಿ ಪುರಸ್ಕರಿಸಲಾಯಿತು.
ಹಾರಕೆರೆ ನಾರಾಯಣ ಭಟ್, ಶೈಲಜಾ ಭಟ್ ಕೆ.ಟಿ. ಮತ್ತಿತರರು ಉಪಸ್ಥಿತರಿದ್ದರು.
ಮಹೇಶ ಸ್ವಾಗತಿಸಿದರು.ಅವನೀಶ ಪೆರಿಯಡ್ಕ ನಿರೂಪಿಸಿ ವಂದಿಸಿದರು. ಬಳಿಕ ಮಠದಲ್ಲಿ ಹಿರಿಯರಿಂದ ರುದ್ರ ಪಠಣ ನಡೆಯಿತು.ವಿದ್ಯಾರ್ಥಿಗಳ ಬೌದ್ಧಿಕ ಸ್ಪರ್ಧೆಗಳು,ಹೊರಾಂಗಣ ಮತ್ತು ಒಳಾಂಗಣ ಕ್ರೀಡೆಗಳು ಜರಗಿತು.

ಇತ್ತೀಚಿನ ಸುದ್ದಿ

ಜಾಹೀರಾತು