11:36 PM Thursday20 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಪೆರಾಜೆ ಮಠದಲ್ಲಿ ಉಪ್ಪಿನಂಗಡಿ ವಲಯ ವಿದ್ಯಾರ್ಥಿ ಯುವ ಪ್ರತಿಭಾ ಪ್ರದರ್ಶನ, ಕ್ರೀಡೋತ್ಸವ

07/11/2024, 10:53

ಬಂಟ್ವಾಳ(reporterkarnataka.com): ಉಪ್ಪಿನಂಗಡಿ ವಲಯ ವಿದ್ಯಾರ್ಥಿ ಯುವ ಪ್ರತಿಭಾ ಪ್ರದರ್ಶನ ಮತ್ತು ಕ್ರೀಡೋತ್ಸವ ಪೆರಾಜೆ ಮಾಣಿ ಮಠದಲ್ಲಿ ಜರುಗಿತು.
ಉಪ್ಪಿನಂಗಡಿ ಹವ್ಯಕ ಮಂಡಲ ಗುರಿಕ್ಕಾರ ಶಂಕರ ಭಟ್ ಬಲ್ಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಇಂದು ಜಾತಿ ಮತಗಳ‌‌ ವೈಭವೀಕರಣವಾಗುತ್ತಿದ್ದು, ನಮ್ಮ ಅಸ್ತಿತ್ವಕ್ಕಾಗಿ ಸಂಘಟಿತರಾಗುವುದು ಅನಿವಾರ್ಯವಾಗಿದೆ. ಸಂಘಟನೆಗಾಗಿ ಕ್ರೀಡಾಕೂಟ‌‌ ಏರ್ಪಡಿಸಲಾಗಿದೆ‌ ಎಂದರು. ಬಾಲಸುಬ್ರಹ್ಮಣ್ಯ ಭಟ್ ಸರ್ಪಮೂಲೆ ಮಾತನಾಡಿ, ವೈದಿಕ, ಧಾರ್ಮಿಕ,‌ ಶಿಕ್ಷಕ ಹಾಗೂ ಮಾತೆಯರ ಸಮಾವೇಶಗಳು ಯಶಸ್ವಿಯಾಗಿ ನಡೆದಿದೆ. ವಿದ್ಯಾರ್ಥಿ ಯುವಕರ ಒಗ್ಗೂಡಿಸಲು ಕಾರ್ಯಕ್ರಮ ನಡೆಯುತ್ತಿದೆ ಎಂದರು.


ಕೇಶವ ಪ್ರಕಾಶ‌ ಎಂ.ಶುಭಹಾರೈಸಿದರು. ಪ್ರತಿಭಾನ್ವಿತ ವಿದ್ಯಾರ್ಥಿಗಳು ಹಾಗೂ ಬೆಳ್ತಂಗಡಿ ಶ್ರೀಭಾರತಿ ಉರ್ವಾಲು ಶಾಲೆಯ ವಿದ್ಯಾರ್ಥಿಗಳನ್ನು ಸ್ಮರಣಿಕೆ ನೀಡಿ ಪುರಸ್ಕರಿಸಲಾಯಿತು.
ಹಾರಕೆರೆ ನಾರಾಯಣ ಭಟ್, ಶೈಲಜಾ ಭಟ್ ಕೆ.ಟಿ. ಮತ್ತಿತರರು ಉಪಸ್ಥಿತರಿದ್ದರು.
ಮಹೇಶ ಸ್ವಾಗತಿಸಿದರು.ಅವನೀಶ ಪೆರಿಯಡ್ಕ ನಿರೂಪಿಸಿ ವಂದಿಸಿದರು. ಬಳಿಕ ಮಠದಲ್ಲಿ ಹಿರಿಯರಿಂದ ರುದ್ರ ಪಠಣ ನಡೆಯಿತು.ವಿದ್ಯಾರ್ಥಿಗಳ ಬೌದ್ಧಿಕ ಸ್ಪರ್ಧೆಗಳು,ಹೊರಾಂಗಣ ಮತ್ತು ಒಳಾಂಗಣ ಕ್ರೀಡೆಗಳು ಜರಗಿತು.

ಇತ್ತೀಚಿನ ಸುದ್ದಿ

ಜಾಹೀರಾತು