10:07 PM Sunday12 - October 2025
ಬ್ರೇಕಿಂಗ್ ನ್ಯೂಸ್
ಹಾಸನಾಂಬ ದರ್ಶನಕ್ಕೆ ಜನರಿಗೆ ತಮ್ಮ ಗುರುತಿನ ಚೀಟಿ ನೀಡಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;…

ಇತ್ತೀಚಿನ ಸುದ್ದಿ

ಪೆರಾಜೆ: ಸಾರ್ವಜನಿಕರಿಂದ ಸಂಭ್ರಮದ ದೀಪಾವಳಿ ಉತ್ಸವ; ಮುಸ್ಸಂಜೆಯ ಮಬ್ಬು ಕತ್ತಲಿನಲ್ಲಿ ಬೆಳಕಿನಾಟ

13/11/2023, 19:45

ಬಂಟ್ವಾಳ(reporterkarnataka.com): ಸೀತಾರಾಮ‌ ನಗರ ಅಶ್ವತ್ಥಡಿ ಮಿತ್ತಪೆರಾಜೆ ಅಂಗನವಾಡಿ ಕೇಂದ್ರದ ವಠಾರದಲ್ಲಿ ಶ್ರೀ ಗುಡ್ಡಚಾಮುಂಡೇಶ್ವರಿ ಸೇವಾ ಟ್ರಸ್ಟ್ ಸಹಕಾರದಲ್ಲಿ ವಿಶ್ವ ಹಿಂದೂ ಪರಿಷತ್ತು ಪುತ್ತೂರು ವತಿಯಿಂದ ಸಾರ್ವಜನಿಕ ದೀಪಾವಳಿ ಉತ್ಸವ ಸಂಪನ್ನಗೊಂಡಿತು.
ಮುಸ್ಸಂಜೆಯ ವೇಳೆ ಬೆಳಕಿನ ಮರದಲ್ಲಿ ಮಾತೆಯರು ಹಣತೆ ಹಚ್ಚಿ ತುಡರ್ ಪರ್ಬಕ್ಕೆ ಚಾಲನೆ ನೀಡಿದರು. ನೆರೆದಿರುವ ಸಾರ್ವಜನಿಕರು ನೂರಾರು ಸಾಲು ದೀಪಗಳನ್ನು ಹಚ್ಚಿ ಅಂಗಣದಲ್ಲಿ ಬೆಳಕು ಚೆಲ್ಲಿದರು.


ಮುಖ್ಯ‌ಅತಿಥಿಯಾಗಿ ಆಗಮಿಸಿದ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಗೋಪಾಲಕೃಷ್ಣ ನೇರಳಕಟ್ಟೆ ದೀಪಾವಳಿ ಹಬ್ಬದ ಸಂದೇಶ ನೀಡಿ ಮಾತನಾಡಿದರು.
ಕೃಷಿ ಸಂಸ್ಕೃತಿಯ ತುಳುನಾಡಿನಲ್ಲಿ ದೀಪಾವಳಿ ಹಬ್ಬ ವಿಶೇಷವಾಗಿದೆ. ಜನಪದೀಯವಾದ ತುಡರ್ ಪರ್ಬ ನಿನ್ನೆ ಇಂದು ನಾಳೆ‌ ಎಂಬ ಪರಿಕಲ್ಪನೆಯಲ್ಲಿ ಆಚರಿಸಿಕೊಂಡು ಬರಲಾಗುತ್ತಿದೆ. ಆಚರಣೆಯ ಸಡಗರದೊಂದಿಗೆ ಮಕ್ಕಳಿಗೆ ಸಂಸ್ಕೃತಿಯ ಪರಿಚಯ ಮಾಡಿ ಉತ್ತಮ ಸಂಸ್ಕಾರ ನೀಡುವುದು ಹಿರಿಯರ ಜವಾಬ್ದಾರಿಯಾಗಿದೆ ಎಂದು ಹಬ್ಬದ ಶುಭಾಶಯ ತಿಳಿಸಿದರು.
ವಿಶ್ವ ಹಿಂದೂ ಪರಿಷತ್ತಿನ ಸೇವಾ ಪ್ರಮುಖ್ ಪಿ.ಸೀತಾರಾಮ ಭಟ್‌ ವಾಮನ ಅವತಾರದ ಕತೆಯನ್ನು ಹೇಳಿ ಸಮಾಜದಲ್ಲಿಅನ್ಯಾಯ ಮಿತಿಮೀರಿದಾಗ ಸತ್ಯನಾರಾಯಣ‌ನ ಅವತಾರವಾಗುತ್ತದೆ. ಸಜ್ಜನ ಶಕ್ತಿ ರಾಷ್ಟ್ರ ಶಕ್ತಿಯಾಗಿ ದುಷ್ಟಶಕ್ತಿಗಳು ನಾಶವಾಗಬೇಕು ಎಂದರು.
ಹಿರಿಯ ಶಿಕ್ಷಕ ಜಯಾನಂದ ಪೆರಾಜೆ ಅಮ್ಮುಂಜೆಗುತ್ತು, ಪೊಳಲಿ ಸೀನಪ್ಪ ಹೆಗ್ಗಡೆಯವರ ತುಲುವಾಲ ಬಲಿಯೇಂದ್ರ ಪುಸ್ತಕದ ಸಂದಿ ಪಾಡ್ದನವನ್ನು ವಾಚಿಸಿದರು.
ನಿವೃತ್ತ ಪೊಲೀಸ್ ‌ಅಧಿಕಾರಿ ಅಶ್ವತ್ಥಡಿ ಉಮೇಶ ಸಮೃದ್ಧಿ,ಕೃಷಿಕ ನಾರಾಯಣ ಎಂ.ಪಿ.,ಉಪನ್ಯಾಸಕ ಅನಿಲ್ ಕುಮಾರ್,ಸಾಮಾಜಿಕ ಕಾರ್ಯಕರ್ತ ಭುಜಂಗ,ಮಾತೆಯರಾದ ಗಾಯತ್ರಿ ಸೀತಾರಾಮ, ಭಾರತಿ ಪೆರಾಜೆ ಸಹಕರಿಸಿದರು.ಮಕ್ಕಳು ಸಿಡುಮದ್ದು ಸಿಡಿಸಿ ಸಂಭ್ರಮಿದರು.

ಇತ್ತೀಚಿನ ಸುದ್ದಿ

ಜಾಹೀರಾತು