8:16 PM Friday11 - April 2025
ಬ್ರೇಕಿಂಗ್ ನ್ಯೂಸ್
Karnataka BJP | ದಲಿತರ ತುಳಿದವರೇ ಕಾಂಗ್ರೆಸಿಗರು: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ ಜನ ಬೇಸತ್ತಿರುವುದಕ್ಕೆ ಜನಾಕ್ರೋಶ ಯಾತ್ರೆಗೆ ಸಿಗುತ್ತಿರುವ ಬೆಂಬಲವೇ ಸಾಕ್ಷಿ : ಪ್ರತಿಪಕ್ಷದ ನಾಯಕ… ಅತ್ಯಾಧುನಿಕ ಮಾಲಿನ್ಯ ನಿಯಂತ್ರಣ ತಂತ್ರಜ್ಞಾನದ ಬಾಲ್ಡೋಟಾ ಇಂಟಿಗ್ರೇಟೆಡ್ ಸ್ಟೀಲ್ ಪ್ರಾಜೆಕ್ಟ್ ಎಂಬೆಸ್ಸಿ ಗಾಲ್ಫ್ ಲಿಂಕ್ ನ ಸಿಎಸ್ಆರ್ ನಿಧಿಯಿಂದ ಮರಿಯ ನಿಕೇತನ ಶಿಕ್ಷಣ ಸಂಸ್ಥೆಗೆ… Home Minister | ಡಿಸಿಆರ್ ಇ ಪೊಲೀಸ್ ಠಾಣೆಗಳಿಗೆ ನೂತನ ವಾಹನ ಹಸ್ತಾಂತರ:… ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ವಿರುದ್ಧ ಧ್ವನಿ ಎತ್ತಲಾಗದ ಪ್ರತಿಪಕ್ಷ: ಬಿಜೆಪಿ ವಿರುದ್ದ… UGCET- 25 | 3.30 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಅರ್ಹತೆ: ಕ್ಯೂಆರ್ ಕೋಡ್,… Bangalore | ರಾಜ್ಯದ ಕಟ್ಟ ಕಡೆಯ ಮನುಷ್ಯನಿಗೂ ನ್ಯಾಯ, ನೆಮ್ಮದಿ ಕೊಡಿಸಲು ಜನ… ಕುತ್ಲುರು ಸರಕಾರಿ ಶಾಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ 2 ಕಂಪ್ಯೂಟರ್ ಹಾಗೂ ಪ್ರೊಜೆಕ್ಟರ್… ವಿರಳಾತಿ ವಿರಳ ಕಾಯಿಲೆಗೆ ತುತ್ತಾದ ಚಿಣ್ಣರ ಚಿಕಿತ್ಸೆಗೆ ಕಾರ್ಪೊರೇಟ್‌ ಕಂಪನಿಗಳು ನೆರವು ನೀಡಲಿ:…

ಇತ್ತೀಚಿನ ಸುದ್ದಿ

ಪೆರಾಜೆ: ಉಪ್ಪಿನಂಗಡಿ ಮಂಡಲ ವಿದ್ಯಾರ್ಥಿ ಯುವ ಪ್ರತಿಭಾ ಪ್ರದರ್ಶನ ಹಾಗೂ ಕ್ರೀಡೋತ್ಸವ

04/12/2023, 20:40

ಬಂಟ್ವಾಳ(reporterkarnataka.com): ಸಹಬಾಳ್ವೆ, ಸಹಕಾರ, ಸಮರ್ಪಣಾಭಾವ ಮನುಷ್ಯನ ಬೆಳವಣಿಗೆಗೆ ಪೂರಕವಾಗಿದೆ. ಕ್ರೀಯಾಶೀಲರಾಗಿ ಚಟುವಟಿಕೆಗಳಲ್ಲಿ ಭಾಗವಹಿಸುವ ಮೂಲಕ ಸಂಘಟಿತವಾಗಿ ಕೆಲಸ ಮಾಡಬೇಕು. ಬಿಂದು ಸಿಂಧುವಾಗಿ ರೂಪುಗೊಳ್ಳಲು ಯುವ ಜನತೆಗೆ ಸೂಕ್ತ ಮಾರ್ಗದರ್ಶನ ಬೇಕಾಗಿದೆ ಎಂದು ಕನ್ಯಾನ ಸರಸ್ವತಿ ವಿದ್ಯಾಲಯದ ಅಧ್ಯಕ್ಷ ಈಶ್ವರ ಪ್ರಸಾದ ಹೇಳಿದರು.


ಅವರು ಶ್ರೀರಾಮಚಂದ್ರಪುರ ಮಠ ಪೆರಾಜೆ ಮಾಣಿಯಲ್ಲಿ ಉಪ್ಪಿನಂಗಡಿ ಮಂಡಲದ ವಿದ್ಯಾರ್ಥಿ ಯುವ ಪ್ರತಿಭಾ ಪ್ರದರ್ಶನ ಹಾಗೂ ಕ್ರೀಡೋತ್ಸವದ ಮುಖ್ಯ ಅತಿಥಿಯಾಗಿ ಮಾತನಾಡಿದರು. ಅಂತಾರಾಷ್ಟ್ರೀಯ ಚೆಸ್ ಕ್ರೀಡಾಪಟು ಇಶಾ ಶರ್ಮ ಕಾಂತಾಜೆ, ರಾಷ್ಟ್ರೀಯ ಕಾಮನ್ ವೆಲ್ತ್ ಕ್ರೀಡಾಪಟು ದೀಪ್ತಿ ಲಕ್ಷ್ಮಿ ಚಿಕ್ಕಮುಂಡೇಲು ಉದ್ಘಾಟಿಸಿದರು. ಉಪ್ಪಿನಂಗಡಿ ಹವ್ಯಕ ಮಂಡಲದ ಅಧಕ್ಷ ಈಶ್ವರ ಪ್ರಸನ್ನ ಪೆರ್ನೆಕೋಡಿ ಅಧ್ಯಕ್ಷತೆ ವಹಿಸಿದ್ದರು. ಹವ್ಯಕ ಮಹಾಮಂಡಲದ ಪ್ರಧಾನ ಕಾರ್ಯದರ್ಶಿ ಉದಯಶಂಕರ ಭಟ್ ಮಿತ್ತೂರು ಶುಭ ಹಾರೈಸಿ ಮಾತನಾಡಿದರು.
ಅತಿಥಿಗಳಾಗಿ ಶ್ರೀರಾಮ ಚಂದ್ರಾಪುರ ಮಠದ ಅಧ್ಯಕ್ಷ ಹಾರಕೆರೆ ನಾರಾಯಣ ಭಟ್ ಶುಭ ಕೋರಿದರು. ವಿಷ್ಣುಗುಪ್ತ ವಿದ್ಯಾಪೀಠ ಅಶೋಕೆಯ ಪ್ರಧಾನ ಕಾರ್ಯದರ್ಶಿ ನಾಗರಾಜ ಭಟ್ ಪೆದಮಲೆ, ಮಹಾಮಂಡಲದ ಪ್ರಮುಖರಾದ ಬಾಲಸುಬ್ರಮಣ್ಯ ಭಟ್ ಸರ್ಪಮೂಲೆ, ಹೇರಂಭ ಶಾಸ್ರ್ತೀ,ಮಹೇಶ ಚೂಂತಾರು, ದೇವಿಕಾ ಶಾಸ್ತ್ರೀ ಅರವಿಂದ ದರ್ಭೆ, ಪರಮೇಶ್ವರ ಭಟ್ ವೇಣೂರು , ಶೈಲಜಾ ಭಟ್ ಕೆ.ಟಿ. ಮೊದಲಾದವರು ಉಪಸ್ಥಿತರಿದ್ದರು. ವಿವೇಕಾನಂದ ಕಾಲೇಜು ಪುತ್ತೂರಿನ ರೋವರ್‍ಸ್ ರೇಂಜರ್‍ಸ್ ತಂಡವನ್ನು ಅಭಿನಂದಿಸಲಾಯಿತು. ಅವನೀಶ ಪೆರಿಯಡ್ಕ ನಿರೂಪಿಸಿ ವಂದಿಸಿದರು. ಆರಂಭದಲ್ಲಿ ಪಥಸಂಚನದ ಬಳಿಕ ದಿನವಿಡಿ ಬೌದ್ಧಿಕ ಸ್ಪರ್ಧೆಗಳು ಮತ್ತು ಹೊರಾಂಗಣ ಒಳಾಂಗಣ ಆಟಗಳು ಜರಗಿತು. ಸಮಾರೋಪ ಸಮಾರಂಭದಲ್ಲಿ ಹವ್ಯಕ ಮಂಡಲಾಧ್ಯಕ್ಷ ಈಶ್ವರ ಪ್ರಸನ್ನ ಪೆರ್ನೆಕೋಡಿ ಇವರ ಅಧ್ಯಕ್ಷತೆಯಲ್ಲಿ ಬಹುಮಾನ ವಿತರಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು