7:58 PM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಪೆರಾಜೆ: ಉಪ್ಪಿನಂಗಡಿ ಮಂಡಲ ವಿದ್ಯಾರ್ಥಿ ಯುವ ಪ್ರತಿಭಾ ಪ್ರದರ್ಶನ ಹಾಗೂ ಕ್ರೀಡೋತ್ಸವ

04/12/2023, 20:40

ಬಂಟ್ವಾಳ(reporterkarnataka.com): ಸಹಬಾಳ್ವೆ, ಸಹಕಾರ, ಸಮರ್ಪಣಾಭಾವ ಮನುಷ್ಯನ ಬೆಳವಣಿಗೆಗೆ ಪೂರಕವಾಗಿದೆ. ಕ್ರೀಯಾಶೀಲರಾಗಿ ಚಟುವಟಿಕೆಗಳಲ್ಲಿ ಭಾಗವಹಿಸುವ ಮೂಲಕ ಸಂಘಟಿತವಾಗಿ ಕೆಲಸ ಮಾಡಬೇಕು. ಬಿಂದು ಸಿಂಧುವಾಗಿ ರೂಪುಗೊಳ್ಳಲು ಯುವ ಜನತೆಗೆ ಸೂಕ್ತ ಮಾರ್ಗದರ್ಶನ ಬೇಕಾಗಿದೆ ಎಂದು ಕನ್ಯಾನ ಸರಸ್ವತಿ ವಿದ್ಯಾಲಯದ ಅಧ್ಯಕ್ಷ ಈಶ್ವರ ಪ್ರಸಾದ ಹೇಳಿದರು.


ಅವರು ಶ್ರೀರಾಮಚಂದ್ರಪುರ ಮಠ ಪೆರಾಜೆ ಮಾಣಿಯಲ್ಲಿ ಉಪ್ಪಿನಂಗಡಿ ಮಂಡಲದ ವಿದ್ಯಾರ್ಥಿ ಯುವ ಪ್ರತಿಭಾ ಪ್ರದರ್ಶನ ಹಾಗೂ ಕ್ರೀಡೋತ್ಸವದ ಮುಖ್ಯ ಅತಿಥಿಯಾಗಿ ಮಾತನಾಡಿದರು. ಅಂತಾರಾಷ್ಟ್ರೀಯ ಚೆಸ್ ಕ್ರೀಡಾಪಟು ಇಶಾ ಶರ್ಮ ಕಾಂತಾಜೆ, ರಾಷ್ಟ್ರೀಯ ಕಾಮನ್ ವೆಲ್ತ್ ಕ್ರೀಡಾಪಟು ದೀಪ್ತಿ ಲಕ್ಷ್ಮಿ ಚಿಕ್ಕಮುಂಡೇಲು ಉದ್ಘಾಟಿಸಿದರು. ಉಪ್ಪಿನಂಗಡಿ ಹವ್ಯಕ ಮಂಡಲದ ಅಧಕ್ಷ ಈಶ್ವರ ಪ್ರಸನ್ನ ಪೆರ್ನೆಕೋಡಿ ಅಧ್ಯಕ್ಷತೆ ವಹಿಸಿದ್ದರು. ಹವ್ಯಕ ಮಹಾಮಂಡಲದ ಪ್ರಧಾನ ಕಾರ್ಯದರ್ಶಿ ಉದಯಶಂಕರ ಭಟ್ ಮಿತ್ತೂರು ಶುಭ ಹಾರೈಸಿ ಮಾತನಾಡಿದರು.
ಅತಿಥಿಗಳಾಗಿ ಶ್ರೀರಾಮ ಚಂದ್ರಾಪುರ ಮಠದ ಅಧ್ಯಕ್ಷ ಹಾರಕೆರೆ ನಾರಾಯಣ ಭಟ್ ಶುಭ ಕೋರಿದರು. ವಿಷ್ಣುಗುಪ್ತ ವಿದ್ಯಾಪೀಠ ಅಶೋಕೆಯ ಪ್ರಧಾನ ಕಾರ್ಯದರ್ಶಿ ನಾಗರಾಜ ಭಟ್ ಪೆದಮಲೆ, ಮಹಾಮಂಡಲದ ಪ್ರಮುಖರಾದ ಬಾಲಸುಬ್ರಮಣ್ಯ ಭಟ್ ಸರ್ಪಮೂಲೆ, ಹೇರಂಭ ಶಾಸ್ರ್ತೀ,ಮಹೇಶ ಚೂಂತಾರು, ದೇವಿಕಾ ಶಾಸ್ತ್ರೀ ಅರವಿಂದ ದರ್ಭೆ, ಪರಮೇಶ್ವರ ಭಟ್ ವೇಣೂರು , ಶೈಲಜಾ ಭಟ್ ಕೆ.ಟಿ. ಮೊದಲಾದವರು ಉಪಸ್ಥಿತರಿದ್ದರು. ವಿವೇಕಾನಂದ ಕಾಲೇಜು ಪುತ್ತೂರಿನ ರೋವರ್‍ಸ್ ರೇಂಜರ್‍ಸ್ ತಂಡವನ್ನು ಅಭಿನಂದಿಸಲಾಯಿತು. ಅವನೀಶ ಪೆರಿಯಡ್ಕ ನಿರೂಪಿಸಿ ವಂದಿಸಿದರು. ಆರಂಭದಲ್ಲಿ ಪಥಸಂಚನದ ಬಳಿಕ ದಿನವಿಡಿ ಬೌದ್ಧಿಕ ಸ್ಪರ್ಧೆಗಳು ಮತ್ತು ಹೊರಾಂಗಣ ಒಳಾಂಗಣ ಆಟಗಳು ಜರಗಿತು. ಸಮಾರೋಪ ಸಮಾರಂಭದಲ್ಲಿ ಹವ್ಯಕ ಮಂಡಲಾಧ್ಯಕ್ಷ ಈಶ್ವರ ಪ್ರಸನ್ನ ಪೆರ್ನೆಕೋಡಿ ಇವರ ಅಧ್ಯಕ್ಷತೆಯಲ್ಲಿ ಬಹುಮಾನ ವಿತರಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು