1:03 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಪೆರಾಜೆ: ಉಪ್ಪಿನಂಗಡಿ ಮಂಡಲ ವಿದ್ಯಾರ್ಥಿ ಯುವ ಪ್ರತಿಭಾ ಪ್ರದರ್ಶನ ಹಾಗೂ ಕ್ರೀಡೋತ್ಸವ

04/12/2023, 20:40

ಬಂಟ್ವಾಳ(reporterkarnataka.com): ಸಹಬಾಳ್ವೆ, ಸಹಕಾರ, ಸಮರ್ಪಣಾಭಾವ ಮನುಷ್ಯನ ಬೆಳವಣಿಗೆಗೆ ಪೂರಕವಾಗಿದೆ. ಕ್ರೀಯಾಶೀಲರಾಗಿ ಚಟುವಟಿಕೆಗಳಲ್ಲಿ ಭಾಗವಹಿಸುವ ಮೂಲಕ ಸಂಘಟಿತವಾಗಿ ಕೆಲಸ ಮಾಡಬೇಕು. ಬಿಂದು ಸಿಂಧುವಾಗಿ ರೂಪುಗೊಳ್ಳಲು ಯುವ ಜನತೆಗೆ ಸೂಕ್ತ ಮಾರ್ಗದರ್ಶನ ಬೇಕಾಗಿದೆ ಎಂದು ಕನ್ಯಾನ ಸರಸ್ವತಿ ವಿದ್ಯಾಲಯದ ಅಧ್ಯಕ್ಷ ಈಶ್ವರ ಪ್ರಸಾದ ಹೇಳಿದರು.


ಅವರು ಶ್ರೀರಾಮಚಂದ್ರಪುರ ಮಠ ಪೆರಾಜೆ ಮಾಣಿಯಲ್ಲಿ ಉಪ್ಪಿನಂಗಡಿ ಮಂಡಲದ ವಿದ್ಯಾರ್ಥಿ ಯುವ ಪ್ರತಿಭಾ ಪ್ರದರ್ಶನ ಹಾಗೂ ಕ್ರೀಡೋತ್ಸವದ ಮುಖ್ಯ ಅತಿಥಿಯಾಗಿ ಮಾತನಾಡಿದರು. ಅಂತಾರಾಷ್ಟ್ರೀಯ ಚೆಸ್ ಕ್ರೀಡಾಪಟು ಇಶಾ ಶರ್ಮ ಕಾಂತಾಜೆ, ರಾಷ್ಟ್ರೀಯ ಕಾಮನ್ ವೆಲ್ತ್ ಕ್ರೀಡಾಪಟು ದೀಪ್ತಿ ಲಕ್ಷ್ಮಿ ಚಿಕ್ಕಮುಂಡೇಲು ಉದ್ಘಾಟಿಸಿದರು. ಉಪ್ಪಿನಂಗಡಿ ಹವ್ಯಕ ಮಂಡಲದ ಅಧಕ್ಷ ಈಶ್ವರ ಪ್ರಸನ್ನ ಪೆರ್ನೆಕೋಡಿ ಅಧ್ಯಕ್ಷತೆ ವಹಿಸಿದ್ದರು. ಹವ್ಯಕ ಮಹಾಮಂಡಲದ ಪ್ರಧಾನ ಕಾರ್ಯದರ್ಶಿ ಉದಯಶಂಕರ ಭಟ್ ಮಿತ್ತೂರು ಶುಭ ಹಾರೈಸಿ ಮಾತನಾಡಿದರು.
ಅತಿಥಿಗಳಾಗಿ ಶ್ರೀರಾಮ ಚಂದ್ರಾಪುರ ಮಠದ ಅಧ್ಯಕ್ಷ ಹಾರಕೆರೆ ನಾರಾಯಣ ಭಟ್ ಶುಭ ಕೋರಿದರು. ವಿಷ್ಣುಗುಪ್ತ ವಿದ್ಯಾಪೀಠ ಅಶೋಕೆಯ ಪ್ರಧಾನ ಕಾರ್ಯದರ್ಶಿ ನಾಗರಾಜ ಭಟ್ ಪೆದಮಲೆ, ಮಹಾಮಂಡಲದ ಪ್ರಮುಖರಾದ ಬಾಲಸುಬ್ರಮಣ್ಯ ಭಟ್ ಸರ್ಪಮೂಲೆ, ಹೇರಂಭ ಶಾಸ್ರ್ತೀ,ಮಹೇಶ ಚೂಂತಾರು, ದೇವಿಕಾ ಶಾಸ್ತ್ರೀ ಅರವಿಂದ ದರ್ಭೆ, ಪರಮೇಶ್ವರ ಭಟ್ ವೇಣೂರು , ಶೈಲಜಾ ಭಟ್ ಕೆ.ಟಿ. ಮೊದಲಾದವರು ಉಪಸ್ಥಿತರಿದ್ದರು. ವಿವೇಕಾನಂದ ಕಾಲೇಜು ಪುತ್ತೂರಿನ ರೋವರ್‍ಸ್ ರೇಂಜರ್‍ಸ್ ತಂಡವನ್ನು ಅಭಿನಂದಿಸಲಾಯಿತು. ಅವನೀಶ ಪೆರಿಯಡ್ಕ ನಿರೂಪಿಸಿ ವಂದಿಸಿದರು. ಆರಂಭದಲ್ಲಿ ಪಥಸಂಚನದ ಬಳಿಕ ದಿನವಿಡಿ ಬೌದ್ಧಿಕ ಸ್ಪರ್ಧೆಗಳು ಮತ್ತು ಹೊರಾಂಗಣ ಒಳಾಂಗಣ ಆಟಗಳು ಜರಗಿತು. ಸಮಾರೋಪ ಸಮಾರಂಭದಲ್ಲಿ ಹವ್ಯಕ ಮಂಡಲಾಧ್ಯಕ್ಷ ಈಶ್ವರ ಪ್ರಸನ್ನ ಪೆರ್ನೆಕೋಡಿ ಇವರ ಅಧ್ಯಕ್ಷತೆಯಲ್ಲಿ ಬಹುಮಾನ ವಿತರಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು