2:29 PM Wednesday29 - April 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು…

ಇತ್ತೀಚಿನ ಸುದ್ದಿ

ಪೆರಾಜೆ: ಉಪ್ಪಿನಂಗಡಿ ಮಂಡಲ ವಿದ್ಯಾರ್ಥಿ ಯುವ ಪ್ರತಿಭಾ ಪ್ರದರ್ಶನ ಹಾಗೂ ಕ್ರೀಡೋತ್ಸವ

04/12/2023, 20:40

ಬಂಟ್ವಾಳ(reporterkarnataka.com): ಸಹಬಾಳ್ವೆ, ಸಹಕಾರ, ಸಮರ್ಪಣಾಭಾವ ಮನುಷ್ಯನ ಬೆಳವಣಿಗೆಗೆ ಪೂರಕವಾಗಿದೆ. ಕ್ರೀಯಾಶೀಲರಾಗಿ ಚಟುವಟಿಕೆಗಳಲ್ಲಿ ಭಾಗವಹಿಸುವ ಮೂಲಕ ಸಂಘಟಿತವಾಗಿ ಕೆಲಸ ಮಾಡಬೇಕು. ಬಿಂದು ಸಿಂಧುವಾಗಿ ರೂಪುಗೊಳ್ಳಲು ಯುವ ಜನತೆಗೆ ಸೂಕ್ತ ಮಾರ್ಗದರ್ಶನ ಬೇಕಾಗಿದೆ ಎಂದು ಕನ್ಯಾನ ಸರಸ್ವತಿ ವಿದ್ಯಾಲಯದ ಅಧ್ಯಕ್ಷ ಈಶ್ವರ ಪ್ರಸಾದ ಹೇಳಿದರು.


ಅವರು ಶ್ರೀರಾಮಚಂದ್ರಪುರ ಮಠ ಪೆರಾಜೆ ಮಾಣಿಯಲ್ಲಿ ಉಪ್ಪಿನಂಗಡಿ ಮಂಡಲದ ವಿದ್ಯಾರ್ಥಿ ಯುವ ಪ್ರತಿಭಾ ಪ್ರದರ್ಶನ ಹಾಗೂ ಕ್ರೀಡೋತ್ಸವದ ಮುಖ್ಯ ಅತಿಥಿಯಾಗಿ ಮಾತನಾಡಿದರು. ಅಂತಾರಾಷ್ಟ್ರೀಯ ಚೆಸ್ ಕ್ರೀಡಾಪಟು ಇಶಾ ಶರ್ಮ ಕಾಂತಾಜೆ, ರಾಷ್ಟ್ರೀಯ ಕಾಮನ್ ವೆಲ್ತ್ ಕ್ರೀಡಾಪಟು ದೀಪ್ತಿ ಲಕ್ಷ್ಮಿ ಚಿಕ್ಕಮುಂಡೇಲು ಉದ್ಘಾಟಿಸಿದರು. ಉಪ್ಪಿನಂಗಡಿ ಹವ್ಯಕ ಮಂಡಲದ ಅಧಕ್ಷ ಈಶ್ವರ ಪ್ರಸನ್ನ ಪೆರ್ನೆಕೋಡಿ ಅಧ್ಯಕ್ಷತೆ ವಹಿಸಿದ್ದರು. ಹವ್ಯಕ ಮಹಾಮಂಡಲದ ಪ್ರಧಾನ ಕಾರ್ಯದರ್ಶಿ ಉದಯಶಂಕರ ಭಟ್ ಮಿತ್ತೂರು ಶುಭ ಹಾರೈಸಿ ಮಾತನಾಡಿದರು.
ಅತಿಥಿಗಳಾಗಿ ಶ್ರೀರಾಮ ಚಂದ್ರಾಪುರ ಮಠದ ಅಧ್ಯಕ್ಷ ಹಾರಕೆರೆ ನಾರಾಯಣ ಭಟ್ ಶುಭ ಕೋರಿದರು. ವಿಷ್ಣುಗುಪ್ತ ವಿದ್ಯಾಪೀಠ ಅಶೋಕೆಯ ಪ್ರಧಾನ ಕಾರ್ಯದರ್ಶಿ ನಾಗರಾಜ ಭಟ್ ಪೆದಮಲೆ, ಮಹಾಮಂಡಲದ ಪ್ರಮುಖರಾದ ಬಾಲಸುಬ್ರಮಣ್ಯ ಭಟ್ ಸರ್ಪಮೂಲೆ, ಹೇರಂಭ ಶಾಸ್ರ್ತೀ,ಮಹೇಶ ಚೂಂತಾರು, ದೇವಿಕಾ ಶಾಸ್ತ್ರೀ ಅರವಿಂದ ದರ್ಭೆ, ಪರಮೇಶ್ವರ ಭಟ್ ವೇಣೂರು , ಶೈಲಜಾ ಭಟ್ ಕೆ.ಟಿ. ಮೊದಲಾದವರು ಉಪಸ್ಥಿತರಿದ್ದರು. ವಿವೇಕಾನಂದ ಕಾಲೇಜು ಪುತ್ತೂರಿನ ರೋವರ್‍ಸ್ ರೇಂಜರ್‍ಸ್ ತಂಡವನ್ನು ಅಭಿನಂದಿಸಲಾಯಿತು. ಅವನೀಶ ಪೆರಿಯಡ್ಕ ನಿರೂಪಿಸಿ ವಂದಿಸಿದರು. ಆರಂಭದಲ್ಲಿ ಪಥಸಂಚನದ ಬಳಿಕ ದಿನವಿಡಿ ಬೌದ್ಧಿಕ ಸ್ಪರ್ಧೆಗಳು ಮತ್ತು ಹೊರಾಂಗಣ ಒಳಾಂಗಣ ಆಟಗಳು ಜರಗಿತು. ಸಮಾರೋಪ ಸಮಾರಂಭದಲ್ಲಿ ಹವ್ಯಕ ಮಂಡಲಾಧ್ಯಕ್ಷ ಈಶ್ವರ ಪ್ರಸನ್ನ ಪೆರ್ನೆಕೋಡಿ ಇವರ ಅಧ್ಯಕ್ಷತೆಯಲ್ಲಿ ಬಹುಮಾನ ವಿತರಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು