9:45 PM Wednesday11 - February 2026
ಬ್ರೇಕಿಂಗ್ ನ್ಯೂಸ್
ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:…

ಇತ್ತೀಚಿನ ಸುದ್ದಿ

ಪೆರ್ಡೂರಿನಲ್ಲಿ ಬೈಕ್ ಮತ್ತು ಕಾರು ನಡುವೆ ಅಪಘಾತ: ಗಾಯಾಳು ಖ್ಯಾತ ಕಟ್ಟಡ ವಿನ್ಯಾಸಕಾರ ಮಧ್ವರಾಜ್ ಭಟ್ ಸಾವು

17/08/2022, 10:14

ಪೆರ್ಡೂರು(reporterkarnataka.com): ಮಣಿಪಾಲದ ಆರ್ಕಿಟೆಕ್ಟ್ ಡಿಪಾರ್ಟ್ಮೆಂಟ್ ನ ನಿವೃತ್ತ ಉದ್ಯೋಗಿ, ಕಟ್ಟಡಗಳ ವಿನ್ಯಾಸಕಾರ ಮಧ್ವರಾಜ್ ಭಟ್ ರವರು ಇಂದು ಬೆಳಿಗ್ಗೆ ನಿಧನರಾದರು.

ಮಧ್ವರಾಜ್ ಅವರು ಆ‌.13ರಂದು ಪೆರ್ಡೂರಿನ ಪಕ್ಕಾಲು ಬಳಿ ನಡೆದ ಬೈಕ್ ಮತ್ತು ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಧ್ವರಾಜ್ ಭಟ್ ಅವರು ಇಂದು ಕೊನೆಯುಸಿರೆಳೆದಿದ್ದಾರೆ.

ಮಧ್ವರಾಜ್ ಭಟ್ ಅವರು ಶ್ರೀಕೃಷ್ಣ ಮಠದ ಸುತ್ತು ಪೌಳಿಯ ನಿರ್ಮಾಣ ಕಾರ್ಯದಲ್ಲಿ, ರಾಜಾಂಗಣ, ಗೀತಾ ಮಂದಿರ ನಿರ್ಮಾಣ ಸಂಧರ್ಭ ವಿಶೇಷ ಮುತುವರ್ಜಿ ವಹಿಸಿದ್ದರು. ಇವರಿಗೆ ಪೇಜಾವರ ಹಿರಿಯ ಶ್ರೀಗಳು  ಶ್ರೀಕೃಷಾನುಗ್ರಹ ಪ್ರಶಸ್ತಿ ನೀಡಿ ಪುರಸ್ಕರಿಸಿದ್ದರು. ನೇಪಾಳ, ಗುಜರಾತ್ ನ ದ್ವಾರಕಾ, ದ.ಕ, ಉಡುಪಿ, ಬೆಂಗಳೂರು, ಕೋಲಾರ,ಕುಂಭಾಶಿ ಅಯ್ಯಪ್ಪ ಸ್ವಾಮಿ ದೇವಾಲಯ, ಸಹಿತ  ಹಲವೆಡೆ ದೇವಸ್ಥಾನ ಮತ್ತು ಮಠಗಳ ಮರು ನಿರ್ಮಾಣದ ಕಾಮಗಾರಿಗೆ ನಕ್ಷೆ ಗಳನ್ನು ತಯಾರಿಸಿ ಕಟ್ಟಡಗಳ ನಿರ್ಮಾಣಕ್ಕೆ  ರೂಪು ರೇಷೆಗಳನ್ನು ತಯಾರಿಸಿಕೊಡುತ್ತಿದ್ದರು. 

ಮೃತರು ಪತ್ನಿ,ಇಬ್ಬರು ಪುತ್ರರು, ಓರ್ವ ಪುತ್ರಿಯನ್ನು ಅಗಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು