2:24 AM Tuesday16 - December 2025
ಬ್ರೇಕಿಂಗ್ ನ್ಯೂಸ್
1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

ಪೆರ್ಡೂರಿನಲ್ಲಿ ಬೈಕ್ ಮತ್ತು ಕಾರು ನಡುವೆ ಅಪಘಾತ: ಗಾಯಾಳು ಖ್ಯಾತ ಕಟ್ಟಡ ವಿನ್ಯಾಸಕಾರ ಮಧ್ವರಾಜ್ ಭಟ್ ಸಾವು

17/08/2022, 10:14

ಪೆರ್ಡೂರು(reporterkarnataka.com): ಮಣಿಪಾಲದ ಆರ್ಕಿಟೆಕ್ಟ್ ಡಿಪಾರ್ಟ್ಮೆಂಟ್ ನ ನಿವೃತ್ತ ಉದ್ಯೋಗಿ, ಕಟ್ಟಡಗಳ ವಿನ್ಯಾಸಕಾರ ಮಧ್ವರಾಜ್ ಭಟ್ ರವರು ಇಂದು ಬೆಳಿಗ್ಗೆ ನಿಧನರಾದರು.

ಮಧ್ವರಾಜ್ ಅವರು ಆ‌.13ರಂದು ಪೆರ್ಡೂರಿನ ಪಕ್ಕಾಲು ಬಳಿ ನಡೆದ ಬೈಕ್ ಮತ್ತು ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಧ್ವರಾಜ್ ಭಟ್ ಅವರು ಇಂದು ಕೊನೆಯುಸಿರೆಳೆದಿದ್ದಾರೆ.

ಮಧ್ವರಾಜ್ ಭಟ್ ಅವರು ಶ್ರೀಕೃಷ್ಣ ಮಠದ ಸುತ್ತು ಪೌಳಿಯ ನಿರ್ಮಾಣ ಕಾರ್ಯದಲ್ಲಿ, ರಾಜಾಂಗಣ, ಗೀತಾ ಮಂದಿರ ನಿರ್ಮಾಣ ಸಂಧರ್ಭ ವಿಶೇಷ ಮುತುವರ್ಜಿ ವಹಿಸಿದ್ದರು. ಇವರಿಗೆ ಪೇಜಾವರ ಹಿರಿಯ ಶ್ರೀಗಳು  ಶ್ರೀಕೃಷಾನುಗ್ರಹ ಪ್ರಶಸ್ತಿ ನೀಡಿ ಪುರಸ್ಕರಿಸಿದ್ದರು. ನೇಪಾಳ, ಗುಜರಾತ್ ನ ದ್ವಾರಕಾ, ದ.ಕ, ಉಡುಪಿ, ಬೆಂಗಳೂರು, ಕೋಲಾರ,ಕುಂಭಾಶಿ ಅಯ್ಯಪ್ಪ ಸ್ವಾಮಿ ದೇವಾಲಯ, ಸಹಿತ  ಹಲವೆಡೆ ದೇವಸ್ಥಾನ ಮತ್ತು ಮಠಗಳ ಮರು ನಿರ್ಮಾಣದ ಕಾಮಗಾರಿಗೆ ನಕ್ಷೆ ಗಳನ್ನು ತಯಾರಿಸಿ ಕಟ್ಟಡಗಳ ನಿರ್ಮಾಣಕ್ಕೆ  ರೂಪು ರೇಷೆಗಳನ್ನು ತಯಾರಿಸಿಕೊಡುತ್ತಿದ್ದರು. 

ಮೃತರು ಪತ್ನಿ,ಇಬ್ಬರು ಪುತ್ರರು, ಓರ್ವ ಪುತ್ರಿಯನ್ನು ಅಗಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು