7:07 PM Wednesday23 - October 2024
ಬ್ರೇಕಿಂಗ್ ನ್ಯೂಸ್
ವಯನಾಡು ಉಪ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಯಾಗಿ ಪ್ರಿಯಾಂಕಾ ಗಾಂಧಿ ನಾಮಪತ್ರ ಸಲ್ಲಿಕೆ; ಬೃಹತ್… ಪಂಚಾಯತ್ ಪಾಲಿಟಿಕ್ಸ್: ಅಧಿಕಾರ, ಅನುದಾನದ ಆಸೆಗೆ ಗ್ರಾಪಂ ಸದಸ್ಯೆಯ ಪತಿಯ ಭೀಕರ ಹತ್ಯೆ:… ಮೂಡಿಗೆರೆ ರೈತ ಭವನದಲ್ಲಿ ಅ.25ರಂದು ವೈವಿಧ್ಯಮಯ ‘ಮಲೆನಾಡು ಹಬ್ಬ’ ಸುರತ್ಕಲ್ ಎನ್ ಐಟಿಕೆ: ಯುವ ಸ್ಕೌಟ್ಸ್ ಮತ್ತು ಗೈಡ್ಸ್ ಸಂಪರ್ಕಿಸುವ ‘ಜಂಬೋರಿ ಆನ್… ರೈಲ್ವೆ ಹಳಿ ಮೇಲೆ ಕಲ್ಲು ಇಟ್ಟ ದುಷ್ಕರ್ಮಿಗಳನ್ನು ತಕ್ಷಣ ಬಂಧಿಸಿ: ಸಂಸದ ಕ್ಯಾ.… ಕ್ರೂರ ವಿಧಿಯಾಟ: ಮದುವೆ ನಿಶ್ಚಿತಾರ್ಥವಾದ ಯುವತಿ ರಸ್ತೆ ಅಪಘಾತಕ್ಕೆ ಬಲಿ; ಮುಂದಿನ ತಿಂಗಳು… ಚಿಕ್ಕಮಗಳೂರು: ಭಾರೀ ಮಳೆ; ಜನಜೀವನ ಅಸ್ತವ್ಯಸ್ತ; ಸಿಡಿಲಿಗೆ ಎತ್ತು ಬಲಿ ವಿಜ್ಞಾನ ಮೇಳ: ಸೆನ್ಸಾರ್ ಆಧಾರಿತ ಮಾದರಿಯಲ್ಲಿ ಸೇವಾ ಭಾರತಿ ವಿದ್ಯಾರ್ಥಿ ನಹುಷ್ ಪ್ರಥಮ ಏಷ್ಯಾದ ಗೇಮಿಂಗ್ ಮತ್ತು ಅನಿಮೇಷನ್ ರಾಜಧಾನಿಯಾಗುವುದು ಕರ್ನಾಟಕದ ಗುರಿ: ಐಜಿಸಿ 2024ರಲ್ಲಿ ಸಚಿವ… ಬಿಳಾಲುಕೊಪ್ಪ-ಬಸರೀಕಟ್ಟೆ ರಸ್ತೆ ಕೆಸರುಮಯ: ಬಸ್ ಸಂಚಾರ ಸ್ಥಗಿತ, ಪ್ರಯಾಣಿಕರ ಪರದಾಟ

ಇತ್ತೀಚಿನ ಸುದ್ದಿ

ಪೆಟ್ರೋಲ್ ಬಂಕ್ ಮೆನೇಜರಿಂದ 4.20 ಲಕ್ಷ ರೂ. ದೋಚಿದ ಪ್ರಕರಣ: ಎಲ್ಲ 4 ಮಂದಿ ಆರೋಪಿಗಳ ಬಂಧನ

05/10/2021, 19:25

ಮಂಗಳೂರು(reporterkarnataka.com): ಬ್ಯಾಂಕ್ ಗೆ ಹಣ ಹಾಕಲು ಹೋಗುತ್ತಿದ್ದ ವ್ಯಕ್ತಿಯನ್ನು ನಾಲ್ವರ ತಂಡವೊಂದು ತಡೆದು ಹಲ್ಲೆ ನಡೆಸಿ 4.20 ಲಕ್ಷ ರೂ. ದೋಚಿದ ಪ್ರಕರಣದ ಎಲ್ಲ ಆರೋಪಿಗಳನ್ನು ಬಂಧಿಸಲಾಗಿದೆ.

ಊರ್ವ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸೆ.28 ರಂದು ನಗರದ ಮಣ್ಣಗುಡ್ಡೆ ಆಶೀರ್ವಾದ್ ಪೆಟ್ರೋಲ್ ಬಂಕ್‌ನಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ಭೋಜಪ್ಪ ಅವರು ಮಧ್ಯಾಹ್ನ ಸಾರಸ್ವತ್ ಬ್ಯಾಂಕಿಗೆ ಹಣ ಹಾಕಲು ಹೋಗುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ನಾಲ್ಕು ಮಂದಿಯ ತಂಡ ಭೋಜಪ್ಪ ಅವರನ್ನು ತಡೆದು ಬ್ಯಾಟಿನಿಂದ ಹಲ್ಲೆ ನಡೆಸಿ 4.20 ಲಕ್ಷ ರೂ. ಹಣ ದೋಚಿ ಪರಾರಿಯಾಗಿದ್ದರು. ಇದೀಗ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ತಿಳಿಸಿದ್ದಾರೆ.

ಅವರು ಮಂಗಳವಾರ ತನ್ನ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಇದೇ ಪೆಟ್ರೋಲ್ ಬಂಕ್‌ನಲ್ಲಿ ಕೆಲಸ ಮಾಡುತ್ತಿದ್ದ ಕುಲಶೇಖರ ಮೂಲದ ಶ್ಯಾಂಶಂಕರ್ ಎಂಬಾತ ತನ್ನೊಂದಿಗೆ ಮೂವರನ್ನು ಸೇರಿಸಿಕೊಂಡು ಸೆ.13ರಿಂದ ಈ ಕೃತ್ಯಕ್ಕೆ ಯೋಜನೆಗಳನ್ನು ರೂಪಿಸಿ ಸೆ.26ರಂದು ಕೃತ್ಯವೆಸಗಲು ಪ್ರಯತ್ನಿಸಿದ್ದು, ಈ ಕಾರ್ಯದಲ್ಲಿ ವಿಫಲರಾಗಿ ಸೆ.28 ರಂದು ಹಲ್ಲೆ ನಡೆಸಿ ಹಣವನ್ನು ದೋಚಿದ್ದಾರೆ.

ಪೆಟ್ರೋಲ್ ಬಂಕ್‌ನಲ್ಲಿ ನೌಕರನಾಗಿದ್ದ ಶಕ್ತಿನಗರ ನಿವಾಸಿ ಶ್ಯಾಮ್ ಶಂಕರ್, ಮುಂಬೈನ ಬಾರೊಂದರಲ್ಲಿ ಮ್ಯಾನೇಜರ್ ಆಗಿದ್ದ, ಕುಡುಪು ನಿವಾಸಿ ಅಭಿಷೇಕ್ ಯಾನೇ ಅಭಿ, ಪೈಟಿಂಗ್ ಕೆಲಸಕ್ಕೆ ಮಾಡುತ್ತಿದ್ದ ಶಕ್ತಿನಗರ ನಿವಾಸಿಗಳಾದ ಕಾರ್ತಿಕ್ ಮತ್ತು ಸಾಗರ್ ಬಂಧಿತರು. ಇದರಲ್ಲಿ ಮೊದಲನೆ ಆರೋಪಿಯ ಮೇಲೆ 6, ಎರಡನೇ ಆರೋಪಿಯ ಮೇಲೆ 7 ಹಾಗೂ ಮೂರನೇ ಆರೋಪಿಯ ಮೇಲೆ 6 ಕೇಸ್ ಮೊದಲೇ ದಾಖಲಾಗಿದೆ ಎಂದರು.

ಈ ಸಂದರ್ಭ ಭೋಜಪ್ಪ ಅವರಿಗೆ ಕಿವಿಗೆ ಹಾಗೂ ತಲೆಗೆ ಗಾಯಗಳಾಗಿದ್ದು, ಕಿವಿಯಿಂದ ರಕ್ತ ಬಂದಿದೆ. ಎಂದಿನಂತೆ ಸೈಡ್ ಬ್ಯಾಗಿನಲ್ಲಿ ಹಣವನ್ನು ಇರಿಸಿ ಬ್ಯಾಂಕಿಗೆ ಕಟ್ಟಲು ಹೋಗುತ್ತಿದ್ದ ಸಂದರ್ಭ ಈ ಘಟನೆ ನಡೆದಿದೆ ಎಂದರು.

ದರೋಡೆ ಬಳಿಕ ನಾಲ್ವರು ಮುಂಬೈಗೆ ಪರಾರಿಯಾಗಿದ್ದರು. ಅಲ್ಲಿ ಕೆಲವರಿಗೆ ನೀಡಬೇಕಾಗಿದ್ದ ಹಣ ನೀಡಿದ್ದು, ಉಳಿದ ಮೊತ್ತದಲ್ಲಿ ಮೊಬೈಲ್, ಚಿನ್ನ ಖರೀದಿಸಿದ್ದು, ಹುಡುಗಿಯರಿಗಾಗಿಯೂ ಉಪಯೋಗಿಸಿದ್ದಾರೆ. ಸದ್ಯ ಆರೋಪಿಗಳಿಂದ 60 ಸಾವಿರ ರೂ. ಹಾಗೂ ಎರಡು ವಾಹನ, ಮೊಬೈಲ್ ವಶಕ್ಕೆ ಪಡೆಯಲಾಗಿದೆ ಎಂದು ಕಮಿಷನರ್ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು