7:29 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಪೆಟ್ರೋಲ್ ಬಂಕ್ ಮೆನೇಜರಿಂದ 4.20 ಲಕ್ಷ ರೂ. ದೋಚಿದ ಪ್ರಕರಣ: ಎಲ್ಲ 4 ಮಂದಿ ಆರೋಪಿಗಳ ಬಂಧನ

05/10/2021, 19:25

ಮಂಗಳೂರು(reporterkarnataka.com): ಬ್ಯಾಂಕ್ ಗೆ ಹಣ ಹಾಕಲು ಹೋಗುತ್ತಿದ್ದ ವ್ಯಕ್ತಿಯನ್ನು ನಾಲ್ವರ ತಂಡವೊಂದು ತಡೆದು ಹಲ್ಲೆ ನಡೆಸಿ 4.20 ಲಕ್ಷ ರೂ. ದೋಚಿದ ಪ್ರಕರಣದ ಎಲ್ಲ ಆರೋಪಿಗಳನ್ನು ಬಂಧಿಸಲಾಗಿದೆ.

ಊರ್ವ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸೆ.28 ರಂದು ನಗರದ ಮಣ್ಣಗುಡ್ಡೆ ಆಶೀರ್ವಾದ್ ಪೆಟ್ರೋಲ್ ಬಂಕ್‌ನಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ಭೋಜಪ್ಪ ಅವರು ಮಧ್ಯಾಹ್ನ ಸಾರಸ್ವತ್ ಬ್ಯಾಂಕಿಗೆ ಹಣ ಹಾಕಲು ಹೋಗುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ನಾಲ್ಕು ಮಂದಿಯ ತಂಡ ಭೋಜಪ್ಪ ಅವರನ್ನು ತಡೆದು ಬ್ಯಾಟಿನಿಂದ ಹಲ್ಲೆ ನಡೆಸಿ 4.20 ಲಕ್ಷ ರೂ. ಹಣ ದೋಚಿ ಪರಾರಿಯಾಗಿದ್ದರು. ಇದೀಗ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ತಿಳಿಸಿದ್ದಾರೆ.

ಅವರು ಮಂಗಳವಾರ ತನ್ನ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಇದೇ ಪೆಟ್ರೋಲ್ ಬಂಕ್‌ನಲ್ಲಿ ಕೆಲಸ ಮಾಡುತ್ತಿದ್ದ ಕುಲಶೇಖರ ಮೂಲದ ಶ್ಯಾಂಶಂಕರ್ ಎಂಬಾತ ತನ್ನೊಂದಿಗೆ ಮೂವರನ್ನು ಸೇರಿಸಿಕೊಂಡು ಸೆ.13ರಿಂದ ಈ ಕೃತ್ಯಕ್ಕೆ ಯೋಜನೆಗಳನ್ನು ರೂಪಿಸಿ ಸೆ.26ರಂದು ಕೃತ್ಯವೆಸಗಲು ಪ್ರಯತ್ನಿಸಿದ್ದು, ಈ ಕಾರ್ಯದಲ್ಲಿ ವಿಫಲರಾಗಿ ಸೆ.28 ರಂದು ಹಲ್ಲೆ ನಡೆಸಿ ಹಣವನ್ನು ದೋಚಿದ್ದಾರೆ.

ಪೆಟ್ರೋಲ್ ಬಂಕ್‌ನಲ್ಲಿ ನೌಕರನಾಗಿದ್ದ ಶಕ್ತಿನಗರ ನಿವಾಸಿ ಶ್ಯಾಮ್ ಶಂಕರ್, ಮುಂಬೈನ ಬಾರೊಂದರಲ್ಲಿ ಮ್ಯಾನೇಜರ್ ಆಗಿದ್ದ, ಕುಡುಪು ನಿವಾಸಿ ಅಭಿಷೇಕ್ ಯಾನೇ ಅಭಿ, ಪೈಟಿಂಗ್ ಕೆಲಸಕ್ಕೆ ಮಾಡುತ್ತಿದ್ದ ಶಕ್ತಿನಗರ ನಿವಾಸಿಗಳಾದ ಕಾರ್ತಿಕ್ ಮತ್ತು ಸಾಗರ್ ಬಂಧಿತರು. ಇದರಲ್ಲಿ ಮೊದಲನೆ ಆರೋಪಿಯ ಮೇಲೆ 6, ಎರಡನೇ ಆರೋಪಿಯ ಮೇಲೆ 7 ಹಾಗೂ ಮೂರನೇ ಆರೋಪಿಯ ಮೇಲೆ 6 ಕೇಸ್ ಮೊದಲೇ ದಾಖಲಾಗಿದೆ ಎಂದರು.

ಈ ಸಂದರ್ಭ ಭೋಜಪ್ಪ ಅವರಿಗೆ ಕಿವಿಗೆ ಹಾಗೂ ತಲೆಗೆ ಗಾಯಗಳಾಗಿದ್ದು, ಕಿವಿಯಿಂದ ರಕ್ತ ಬಂದಿದೆ. ಎಂದಿನಂತೆ ಸೈಡ್ ಬ್ಯಾಗಿನಲ್ಲಿ ಹಣವನ್ನು ಇರಿಸಿ ಬ್ಯಾಂಕಿಗೆ ಕಟ್ಟಲು ಹೋಗುತ್ತಿದ್ದ ಸಂದರ್ಭ ಈ ಘಟನೆ ನಡೆದಿದೆ ಎಂದರು.

ದರೋಡೆ ಬಳಿಕ ನಾಲ್ವರು ಮುಂಬೈಗೆ ಪರಾರಿಯಾಗಿದ್ದರು. ಅಲ್ಲಿ ಕೆಲವರಿಗೆ ನೀಡಬೇಕಾಗಿದ್ದ ಹಣ ನೀಡಿದ್ದು, ಉಳಿದ ಮೊತ್ತದಲ್ಲಿ ಮೊಬೈಲ್, ಚಿನ್ನ ಖರೀದಿಸಿದ್ದು, ಹುಡುಗಿಯರಿಗಾಗಿಯೂ ಉಪಯೋಗಿಸಿದ್ದಾರೆ. ಸದ್ಯ ಆರೋಪಿಗಳಿಂದ 60 ಸಾವಿರ ರೂ. ಹಾಗೂ ಎರಡು ವಾಹನ, ಮೊಬೈಲ್ ವಶಕ್ಕೆ ಪಡೆಯಲಾಗಿದೆ ಎಂದು ಕಮಿಷನರ್ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು