1:36 AM Monday17 - November 2025
ಬ್ರೇಕಿಂಗ್ ನ್ಯೂಸ್
Kodagu | ಪಿರಿಯಾಪಟ್ಟಣ: ಅತ್ತೆ ಮನೆಗೆ ಬಂದು ಈಜಲು ಹೋದ ಬಾಲಕ ನೀರಿನಲ್ಲಿ… Madikeri | ಕಾಡಾನೆ ದಾಳಿಗೆ ಸಿಲುಕಿದ್ದ ಟೀ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಅನಾಹುತ:… ಪೊಲೀಸರ ಕಟ್ಟುನಿಟ್ಟಿನ ಕ್ರಮಕ್ಕೆ ಸವಾಲು: ಚಾರ್ಮಾಡಿ ಅಡ್ಡದಾರಿಯಲ್ಲಿ ಅಳವಡಿಸಿದ್ದ 12 ಅಡಿ ಗೇಟ್‌… ಡಿಕ್ಕಿ ಹೊಡೆದ ಕಾರಿನ ಮೇಲೆಯೇ ಬಿದ್ದ ಕಾಡಾನೆ: ಕಾರಿನ ಮುಂಭಾಗ ಸಂಪೂರ್ಣ ಜಖಂ;… ಬೆಂಗಳೂರು: ಮತ ಕಳ್ಳತನ ವಿರುದ್ಧ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಬೆಳಗಾವಿ ಮೃಗಾಲಯದಲ್ಲಿ 19 ಜಿಂಕೆಗಳ ಸಾವು: ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ… ಮೂಡಿಗೆರೆಯಲ್ಲಿ 80 ಮೂಟೆ ಕಾಳುಮೆಣಸು ಕಳ್ಳತನ ಪ್ರಕರಣ: ಮಹಿಳಾ ಆರೋಪಿ ಬಂಧನ, ಮೂವರು… ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಅವಾಚ್ಯ ಪದ ಬಳಕೆ: ಆರೋಪಿ ವಿರುದ್ಧ… Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ

ಇತ್ತೀಚಿನ ಸುದ್ದಿ

ಪೆಟ್ರೋಲ್, ಡೀಸೆಲ್ ಖರೀದಿಯಲ್ಲಿ ರೇಷನಿಂಗ್:  ಪ್ರತಿಪಕ್ಷದ ಉಪ ನಾಯಕ ಯು.ಟಿ. ಖಾದರ್ ಕಳವಳ

24/05/2022, 07:23

ಮಂಗಳೂರು(reporterkarnataka.com):ದೇಶದಲ್ಲಿ ಮೊದಲ ಬಾರಿಗೆ ಪೆಟ್ರೋಲ್ ಮತ್ತು ಡೀಸೆಲ್ ಖರೀದಿಯಲ್ಲಿ ರೇಷನಿಂಗ್ ಪ್ರಾರಂಭವಾಗಿದ್ದು, ಮುಂದಿನ ದಿನಗಳಲ್ಲಿ ಶ್ರೀಲಂಕಾ ಮಾದರಿನ್ನು ತಲುಪುವ ಸಾಧ್ಯತೆ ಇದೆ ಎಂದು ವಿಧಾನಸಭೆ ಪ್ರತಿಪಕ್ಷದ ಉಪ ನಾಯಕ ಯು.ಟಿ. ಖಾದರ್ ಕಳವಳ ವ್ಯಕ್ತಪಡಿಸಿದರು.

ಅವರು ನಗರದ ಕಾಂಗ್ರೆಸ್ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಪೆಟ್ರೋಲಿಯಂ ಕಂಪೆನಿಗಳು ಪೆಟ್ರೋಲ್ ಬಂಕ್‌ಗಳಿಗೆ ಸಮರ್ಪಕವಾಗಿ ಪೆಟ್ರೋಲ್, ಡೀಸೆಲ್ ಅನ್ನು ಪೂರೈಸಲು ಸಾಧ್ಯವಾಗುತ್ತಿಲ್ಲ. ೨ ಟ್ಯಾಂಕ್ ಕೇಲಿದಲ್ಲಿ ಒಂದು ಟ್ಯಾಂಕ್, ಪ್ರತೀ ದಿನ ಕೇಳಿದರೂ ೨ ದಿನಗಳಿಗೊಮ್ಮೆ ನೀಡುತ್ತಿದ್ದು, ಪೆಟ್ರೋಲಿಯಂ ಕಂಪೆನಿಗಳು ರೇಷನಿಂಗ್ ಪ್ರಾರಂಭಿಸಿದಂತಾಗಿದ್ದು, ಇದಕ್ಕೆ ಸರ್ಕಾರದ ವೈಫಲ್ಯವೇ ನೇರ ಕಾರಣ ಎಂದು ಆರೋಪಿಸಿದರು.

ಪ್ರತೀ ಪೆಟ್ರೋಲ್ ಬಂಕ್‌ನವರು ಒಂದು ಲೀಟರ್‌ಗೆ ೨೦ ರೂ. ನಷ್ಠವನ್ನು ಅನುಭವಿಸುತ್ತಿದ್ದು, ಪೆಟ್ರೋಲ್ ಡೀಸೆಲ್ ಮೇಲೆ ಶೇ.೩೦ ತೆರಿಗೆ ವಿಧಿಸಿ ಶೋಷಣೆಗೊಳಪಡಿಸಿದ್ದಾರೆ. ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ಶೇ.೩-೯ ತೆರಿಗೆ ಇದ್ದು, ಜನರಿಗೆ ಹೊರೆಯಾಗಬಾರದು ಎಂಬ ಕಾರಣಕ್ಕೆ ಪೆಟ್ರೋಲಿಯಂ ಕಂಪೆನಿಗಳಿಗೆ ಸಬ್ಸಿಡಿ ನೀಡಿ ಯಾವುದೇ ತೊಂದರೆಯಾಗದಂತೆ ನೋಡಿಕೊಂಡಿದ್ದರು. ಆದರೆ ಬಿಜೆಪಿ ಸರ್ಕಾರ ಬಂದ ನಂತರ ಕ್ರೂಡ್ ಆಯಿಲ್ ೩೦-೪೦ ರೂ. ಸಿಗುವ ಸಂದರ್ಭದಲ್ಲಿ ಕೂಡ ಶೇ.೩೦ ತೆರಿಗೆ ಹೇರಿದ್ದು, ಈಗ ಕ್ರೂಡ್ ಆಯಿಲ್‌ಗೆ ಬ್ಯಾರಲ್‌ಗೆ ೧೨೦-೧೩೦ ರೂ. ಆಗಿರುವಾಗ ಸುಲಿಗೆ ಮಾಡಲು ಹೊರಟಿದ್ದು, ಈಗಾಗಲೇ ಅನೇಕ ಖಾಸಗಿ ಬಂಕ್‌ಗಳು ಮುಚಿದ್ದು, ಮುಂದಿನ ದಿನಗಳಲ್ಲಿ ಸರ್ಕಾರಿ ಸೌಮ್ಯದಲ್ಲಿರುವ ಬಂಕ್‌ಗಳು ಕೂಡ ಮುಚ್ಚಬೇಕಾದ ಸನ್ನಿವೇಶ ಎದುರಾಗಬಾರದು ಎಂದು ಟೀಕಿಸಿದರು.

ಈಗ ಏಕಾಏಕಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಇಳಿಸಿದ್ದು, ಇದರಲ್ಲಿ ಯಾವುದೇ ದೂರ ದೃಷ್ಠಿ ಕಾಣುತ್ತಿಲ್ಲ. ಕಳೆದ ಬಾರಿ ಪಂಚ ರಾಜ್ಯ ಚುನಾವಣೆಯಲ್ಲಿ ಬೆಲೆ ಇಳಿಸಿ ಮತ್ತೆ ಹೆಚ್ಚಿಸಿದರು ಈಗ ಗುಜರಾತ್ ಹಾಗೂ ಹಿಮಾಚಲ ಪ್ರದೇಶದಲ್ಲಿ ಚುನಾವಣೆ ಬರಲಿದ್ದು ಈಗ ಬೆಲೆ ಕಡಿಮೆ ಮಾಡಿದ್ದು, ಚುನಾವಣೆಯ ನಂತರ ಮತ್ತೆ ಬೆಲೆ ಹೆಚ್ಚಿಸಲಿದ್ದಾರೆ. ಇದು ಜನರಿಗೆ ಬೇಕಾಗಿ ಮಾಡಿರುವುದಲ್ಲ, ಕಂಪೆನಿಯನ ನಿಯಮವನ್ನು ಬುಡಮೇಲು ಮಾಡಲು ಹೊರಟಿರುವುದು ಎಂದರು.

ಪ್ರಮುಖರಾದ ಸದಾಶಿವ ಉಳ್ಳಾಲ್, ಇಬ್ರಾಹಿಂ ಕೋಡಿಜಾಲ್, ಮೊಹಮದ್ ಮೋನು, ಕಲಾವತಿ, ಮೊಹಮದ್ ಕುಂಜತ್‌ಬೈಲ್ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು