2:22 PM Wednesday27 - August 2025
ಬ್ರೇಕಿಂಗ್ ನ್ಯೂಸ್
ಜಾತ್ಯತೀತತೆಯ ಸಂಕೇತವಾಗಿರುವ ನಾಡ ಹಬ್ಬ, ಧಾರ್ಮಿಕವಲ್ಲ: ಡಾ. ಪುರುಷೋತ್ತಮ ಬಿಳಿಮಲೆ Bangalore | ಪರಿಶಿಷ್ಟ ಜಾತಿ/ ಪಂಗಡ ದೌರ್ಜನ್ಯ ತಡೆ ಕಾಯ್ದೆ ಕಟ್ಟುನಿಟ್ಟಿನಲ್ಲಿ ಜಾರಿಗೊಳಿಸಿ:… Kodagu | ಸಿದ್ದಾಪುರ: ಕರಡಿಗೋಡು ವಂದನಾಪುರ ಎಸ್ಟೇಟ್ ಮನೆ ಆವರಣದಲ್ಲಿ ಕಾಡಾನೆಗಳ ದಾoಧಲೆ ಡಿಸ್ಕಸ್ ಥ್ರೋ ವೇಳೆ ಅವಘಡ: ವಿದ್ಯಾರ್ಥಿ ಗಂಭೀರ: ಮಂಗಳೂರು ಆಸ್ಪತ್ರೆಗೆ ದಾಖಲು ಬ್ರ್ಯಾಂಡ್ ಕರಾವಳಿ ಹೆಸರಲ್ಲಿ ಅಭಿವೃದ್ಧಿಗೆ ಒತ್ತು ನೀಡಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ನೇಹಿತನ ಆಟೋ ತರಲು ಹೋಗಿದ್ದ ಚಾಲಕ ಅಪಘಾತದಲ್ಲಿ ದುರ್ಮರಣ: ಕಾರು ಡಿಕ್ಕಿ ಹೊಡೆದು… ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ನಾಪತ್ತೆ ಪ್ರಕರಣ: ಸುಜಾತ ಭಟ್ ದೂರು ಎಸ್ಐಟಿಗೆ… ಕುಶಾಲನಗರ: ರಾಷ್ಟ್ರ ರಕ್ಷಣಾ ಪಡೆ ಸಂಸ್ಥಾಪಕ ಪುನೀತ್ ಕೆರೇಹಳ್ಳಿ ಪೊಲೀಸ್ ವಶಕ್ಕೆ ದಲಿತ ಸಿಎಂ ಕೂಗು ತಪ್ಪಿಸಲು ಒಳ ಮೀಸಲಾತಿ ಜಾರಿ: ದಿಲ್ಲಿಯಲ್ಲಿ ಮಾಜಿ ಸಿಎಂ… ತೋಟದಲ್ಲಿ ಬಿದ್ದಿದ್ದ ತೆಂಗಿನಕಾಯಿ ಹೆಕ್ಕಿದ್ದಕ್ಕೆ ಮಾಲೀಕನಿಂದ ಅಮಾನುಷ ಹಲ್ಲೆ: ಯುವಕ ಸಾವು

ಇತ್ತೀಚಿನ ಸುದ್ದಿ

ಪೆಟ್ರೋಲ್, ಡೀಸೆಲ್ ಖರೀದಿಯಲ್ಲಿ ರೇಷನಿಂಗ್:  ಪ್ರತಿಪಕ್ಷದ ಉಪ ನಾಯಕ ಯು.ಟಿ. ಖಾದರ್ ಕಳವಳ

24/05/2022, 07:23

ಮಂಗಳೂರು(reporterkarnataka.com):ದೇಶದಲ್ಲಿ ಮೊದಲ ಬಾರಿಗೆ ಪೆಟ್ರೋಲ್ ಮತ್ತು ಡೀಸೆಲ್ ಖರೀದಿಯಲ್ಲಿ ರೇಷನಿಂಗ್ ಪ್ರಾರಂಭವಾಗಿದ್ದು, ಮುಂದಿನ ದಿನಗಳಲ್ಲಿ ಶ್ರೀಲಂಕಾ ಮಾದರಿನ್ನು ತಲುಪುವ ಸಾಧ್ಯತೆ ಇದೆ ಎಂದು ವಿಧಾನಸಭೆ ಪ್ರತಿಪಕ್ಷದ ಉಪ ನಾಯಕ ಯು.ಟಿ. ಖಾದರ್ ಕಳವಳ ವ್ಯಕ್ತಪಡಿಸಿದರು.

ಅವರು ನಗರದ ಕಾಂಗ್ರೆಸ್ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಪೆಟ್ರೋಲಿಯಂ ಕಂಪೆನಿಗಳು ಪೆಟ್ರೋಲ್ ಬಂಕ್‌ಗಳಿಗೆ ಸಮರ್ಪಕವಾಗಿ ಪೆಟ್ರೋಲ್, ಡೀಸೆಲ್ ಅನ್ನು ಪೂರೈಸಲು ಸಾಧ್ಯವಾಗುತ್ತಿಲ್ಲ. ೨ ಟ್ಯಾಂಕ್ ಕೇಲಿದಲ್ಲಿ ಒಂದು ಟ್ಯಾಂಕ್, ಪ್ರತೀ ದಿನ ಕೇಳಿದರೂ ೨ ದಿನಗಳಿಗೊಮ್ಮೆ ನೀಡುತ್ತಿದ್ದು, ಪೆಟ್ರೋಲಿಯಂ ಕಂಪೆನಿಗಳು ರೇಷನಿಂಗ್ ಪ್ರಾರಂಭಿಸಿದಂತಾಗಿದ್ದು, ಇದಕ್ಕೆ ಸರ್ಕಾರದ ವೈಫಲ್ಯವೇ ನೇರ ಕಾರಣ ಎಂದು ಆರೋಪಿಸಿದರು.

ಪ್ರತೀ ಪೆಟ್ರೋಲ್ ಬಂಕ್‌ನವರು ಒಂದು ಲೀಟರ್‌ಗೆ ೨೦ ರೂ. ನಷ್ಠವನ್ನು ಅನುಭವಿಸುತ್ತಿದ್ದು, ಪೆಟ್ರೋಲ್ ಡೀಸೆಲ್ ಮೇಲೆ ಶೇ.೩೦ ತೆರಿಗೆ ವಿಧಿಸಿ ಶೋಷಣೆಗೊಳಪಡಿಸಿದ್ದಾರೆ. ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ಶೇ.೩-೯ ತೆರಿಗೆ ಇದ್ದು, ಜನರಿಗೆ ಹೊರೆಯಾಗಬಾರದು ಎಂಬ ಕಾರಣಕ್ಕೆ ಪೆಟ್ರೋಲಿಯಂ ಕಂಪೆನಿಗಳಿಗೆ ಸಬ್ಸಿಡಿ ನೀಡಿ ಯಾವುದೇ ತೊಂದರೆಯಾಗದಂತೆ ನೋಡಿಕೊಂಡಿದ್ದರು. ಆದರೆ ಬಿಜೆಪಿ ಸರ್ಕಾರ ಬಂದ ನಂತರ ಕ್ರೂಡ್ ಆಯಿಲ್ ೩೦-೪೦ ರೂ. ಸಿಗುವ ಸಂದರ್ಭದಲ್ಲಿ ಕೂಡ ಶೇ.೩೦ ತೆರಿಗೆ ಹೇರಿದ್ದು, ಈಗ ಕ್ರೂಡ್ ಆಯಿಲ್‌ಗೆ ಬ್ಯಾರಲ್‌ಗೆ ೧೨೦-೧೩೦ ರೂ. ಆಗಿರುವಾಗ ಸುಲಿಗೆ ಮಾಡಲು ಹೊರಟಿದ್ದು, ಈಗಾಗಲೇ ಅನೇಕ ಖಾಸಗಿ ಬಂಕ್‌ಗಳು ಮುಚಿದ್ದು, ಮುಂದಿನ ದಿನಗಳಲ್ಲಿ ಸರ್ಕಾರಿ ಸೌಮ್ಯದಲ್ಲಿರುವ ಬಂಕ್‌ಗಳು ಕೂಡ ಮುಚ್ಚಬೇಕಾದ ಸನ್ನಿವೇಶ ಎದುರಾಗಬಾರದು ಎಂದು ಟೀಕಿಸಿದರು.

ಈಗ ಏಕಾಏಕಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಇಳಿಸಿದ್ದು, ಇದರಲ್ಲಿ ಯಾವುದೇ ದೂರ ದೃಷ್ಠಿ ಕಾಣುತ್ತಿಲ್ಲ. ಕಳೆದ ಬಾರಿ ಪಂಚ ರಾಜ್ಯ ಚುನಾವಣೆಯಲ್ಲಿ ಬೆಲೆ ಇಳಿಸಿ ಮತ್ತೆ ಹೆಚ್ಚಿಸಿದರು ಈಗ ಗುಜರಾತ್ ಹಾಗೂ ಹಿಮಾಚಲ ಪ್ರದೇಶದಲ್ಲಿ ಚುನಾವಣೆ ಬರಲಿದ್ದು ಈಗ ಬೆಲೆ ಕಡಿಮೆ ಮಾಡಿದ್ದು, ಚುನಾವಣೆಯ ನಂತರ ಮತ್ತೆ ಬೆಲೆ ಹೆಚ್ಚಿಸಲಿದ್ದಾರೆ. ಇದು ಜನರಿಗೆ ಬೇಕಾಗಿ ಮಾಡಿರುವುದಲ್ಲ, ಕಂಪೆನಿಯನ ನಿಯಮವನ್ನು ಬುಡಮೇಲು ಮಾಡಲು ಹೊರಟಿರುವುದು ಎಂದರು.

ಪ್ರಮುಖರಾದ ಸದಾಶಿವ ಉಳ್ಳಾಲ್, ಇಬ್ರಾಹಿಂ ಕೋಡಿಜಾಲ್, ಮೊಹಮದ್ ಮೋನು, ಕಲಾವತಿ, ಮೊಹಮದ್ ಕುಂಜತ್‌ಬೈಲ್ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು