9:12 AM Friday13 - February 2026
ಬ್ರೇಕಿಂಗ್ ನ್ಯೂಸ್
ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ…

ಇತ್ತೀಚಿನ ಸುದ್ದಿ

ಪೆಟ್ರೋಲ್, ಡೀಸೆಲ್ ಖರೀದಿಯಲ್ಲಿ ರೇಷನಿಂಗ್:  ಪ್ರತಿಪಕ್ಷದ ಉಪ ನಾಯಕ ಯು.ಟಿ. ಖಾದರ್ ಕಳವಳ

24/05/2022, 07:23

ಮಂಗಳೂರು(reporterkarnataka.com):ದೇಶದಲ್ಲಿ ಮೊದಲ ಬಾರಿಗೆ ಪೆಟ್ರೋಲ್ ಮತ್ತು ಡೀಸೆಲ್ ಖರೀದಿಯಲ್ಲಿ ರೇಷನಿಂಗ್ ಪ್ರಾರಂಭವಾಗಿದ್ದು, ಮುಂದಿನ ದಿನಗಳಲ್ಲಿ ಶ್ರೀಲಂಕಾ ಮಾದರಿನ್ನು ತಲುಪುವ ಸಾಧ್ಯತೆ ಇದೆ ಎಂದು ವಿಧಾನಸಭೆ ಪ್ರತಿಪಕ್ಷದ ಉಪ ನಾಯಕ ಯು.ಟಿ. ಖಾದರ್ ಕಳವಳ ವ್ಯಕ್ತಪಡಿಸಿದರು.

ಅವರು ನಗರದ ಕಾಂಗ್ರೆಸ್ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಪೆಟ್ರೋಲಿಯಂ ಕಂಪೆನಿಗಳು ಪೆಟ್ರೋಲ್ ಬಂಕ್‌ಗಳಿಗೆ ಸಮರ್ಪಕವಾಗಿ ಪೆಟ್ರೋಲ್, ಡೀಸೆಲ್ ಅನ್ನು ಪೂರೈಸಲು ಸಾಧ್ಯವಾಗುತ್ತಿಲ್ಲ. ೨ ಟ್ಯಾಂಕ್ ಕೇಲಿದಲ್ಲಿ ಒಂದು ಟ್ಯಾಂಕ್, ಪ್ರತೀ ದಿನ ಕೇಳಿದರೂ ೨ ದಿನಗಳಿಗೊಮ್ಮೆ ನೀಡುತ್ತಿದ್ದು, ಪೆಟ್ರೋಲಿಯಂ ಕಂಪೆನಿಗಳು ರೇಷನಿಂಗ್ ಪ್ರಾರಂಭಿಸಿದಂತಾಗಿದ್ದು, ಇದಕ್ಕೆ ಸರ್ಕಾರದ ವೈಫಲ್ಯವೇ ನೇರ ಕಾರಣ ಎಂದು ಆರೋಪಿಸಿದರು.

ಪ್ರತೀ ಪೆಟ್ರೋಲ್ ಬಂಕ್‌ನವರು ಒಂದು ಲೀಟರ್‌ಗೆ ೨೦ ರೂ. ನಷ್ಠವನ್ನು ಅನುಭವಿಸುತ್ತಿದ್ದು, ಪೆಟ್ರೋಲ್ ಡೀಸೆಲ್ ಮೇಲೆ ಶೇ.೩೦ ತೆರಿಗೆ ವಿಧಿಸಿ ಶೋಷಣೆಗೊಳಪಡಿಸಿದ್ದಾರೆ. ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ಶೇ.೩-೯ ತೆರಿಗೆ ಇದ್ದು, ಜನರಿಗೆ ಹೊರೆಯಾಗಬಾರದು ಎಂಬ ಕಾರಣಕ್ಕೆ ಪೆಟ್ರೋಲಿಯಂ ಕಂಪೆನಿಗಳಿಗೆ ಸಬ್ಸಿಡಿ ನೀಡಿ ಯಾವುದೇ ತೊಂದರೆಯಾಗದಂತೆ ನೋಡಿಕೊಂಡಿದ್ದರು. ಆದರೆ ಬಿಜೆಪಿ ಸರ್ಕಾರ ಬಂದ ನಂತರ ಕ್ರೂಡ್ ಆಯಿಲ್ ೩೦-೪೦ ರೂ. ಸಿಗುವ ಸಂದರ್ಭದಲ್ಲಿ ಕೂಡ ಶೇ.೩೦ ತೆರಿಗೆ ಹೇರಿದ್ದು, ಈಗ ಕ್ರೂಡ್ ಆಯಿಲ್‌ಗೆ ಬ್ಯಾರಲ್‌ಗೆ ೧೨೦-೧೩೦ ರೂ. ಆಗಿರುವಾಗ ಸುಲಿಗೆ ಮಾಡಲು ಹೊರಟಿದ್ದು, ಈಗಾಗಲೇ ಅನೇಕ ಖಾಸಗಿ ಬಂಕ್‌ಗಳು ಮುಚಿದ್ದು, ಮುಂದಿನ ದಿನಗಳಲ್ಲಿ ಸರ್ಕಾರಿ ಸೌಮ್ಯದಲ್ಲಿರುವ ಬಂಕ್‌ಗಳು ಕೂಡ ಮುಚ್ಚಬೇಕಾದ ಸನ್ನಿವೇಶ ಎದುರಾಗಬಾರದು ಎಂದು ಟೀಕಿಸಿದರು.

ಈಗ ಏಕಾಏಕಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಇಳಿಸಿದ್ದು, ಇದರಲ್ಲಿ ಯಾವುದೇ ದೂರ ದೃಷ್ಠಿ ಕಾಣುತ್ತಿಲ್ಲ. ಕಳೆದ ಬಾರಿ ಪಂಚ ರಾಜ್ಯ ಚುನಾವಣೆಯಲ್ಲಿ ಬೆಲೆ ಇಳಿಸಿ ಮತ್ತೆ ಹೆಚ್ಚಿಸಿದರು ಈಗ ಗುಜರಾತ್ ಹಾಗೂ ಹಿಮಾಚಲ ಪ್ರದೇಶದಲ್ಲಿ ಚುನಾವಣೆ ಬರಲಿದ್ದು ಈಗ ಬೆಲೆ ಕಡಿಮೆ ಮಾಡಿದ್ದು, ಚುನಾವಣೆಯ ನಂತರ ಮತ್ತೆ ಬೆಲೆ ಹೆಚ್ಚಿಸಲಿದ್ದಾರೆ. ಇದು ಜನರಿಗೆ ಬೇಕಾಗಿ ಮಾಡಿರುವುದಲ್ಲ, ಕಂಪೆನಿಯನ ನಿಯಮವನ್ನು ಬುಡಮೇಲು ಮಾಡಲು ಹೊರಟಿರುವುದು ಎಂದರು.

ಪ್ರಮುಖರಾದ ಸದಾಶಿವ ಉಳ್ಳಾಲ್, ಇಬ್ರಾಹಿಂ ಕೋಡಿಜಾಲ್, ಮೊಹಮದ್ ಮೋನು, ಕಲಾವತಿ, ಮೊಹಮದ್ ಕುಂಜತ್‌ಬೈಲ್ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು