1:02 AM Wednesday6 - May 2026
ಬ್ರೇಕಿಂಗ್ ನ್ಯೂಸ್
ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ…

ಇತ್ತೀಚಿನ ಸುದ್ದಿ

ಪಿಎಫ್ ಖಾತೆದಾರರಿಗೆ ಶೇ. 8.1ರಷ್ಟು ಬಡ್ಡಿ ನೀಡಲು ಕೇಂದ್ರ ಹಣಕಾಸು ಇಲಾಖೆ ಒಪ್ಪಿಗೆ

04/06/2022, 11:03

ಹೊಸದಿಲ್ಲಿ(reporterkarnataka.com): ಕೇಂದ್ರ ಸರ್ಕಾರ ಪಿಎಫ್ ಠೇವಣಿಗಳಿಗೆ ಶೇಕಡ 8.1 ರಷ್ಟು ಬಡ್ಡಿ ನೀಡಲು ಒಪ್ಪಿಗೆ ಸೂಚಿಸಿದೆ. ಇಪಿಎಫ್ ಒ ತೀರ್ಮಾನಕ್ಕೆ ಕೇಂದ್ರ ಹಣಕಾಸು ಇಲಾಖೆ ಸಮ್ಮತಿಸಿದೆ.

ಈ ಮೂಲಕ ಶೀಘ್ರವೇ 2021 -22 ನೇ ಸಾಲಿನ ಠೇವಣಿಗಳಿಗೆ ಬಡ್ಡಿ ಜಮಾ ಮಾಡಲಾಗುವುದು.

2021-22 ಕ್ಕೆ ಉದ್ಯೋಗಿ ಭವಿಷ್ಯ ನಿಧಿ ಅಥವಾ ಇಪಿಎಫ್ ಠೇವಣಿಗಳ ಮೇಲೆ ಶೇ. 8.1 ರಷ್ಟು ಬಡ್ಡಿ ದರ ನೀಡಲು ಕೇಂದ್ರ ಸರ್ಕಾರ ಅನುಮೋದಿಸಿದೆ. ಕೇಂದ್ರ ಹಣಕಾಸು ಸಚಿವಾಲಯದ ಅನುಮೋದನೆಯ ನಂತರ ಬಡ್ಡಿ ದರ ಸೂಚಿಸಲಾಗುತ್ತದೆ, ಅದರ ನಂತರ ಬಡ್ಡಿಯನ್ನು ಅದರ ಚಂದಾದಾರರ ಖಾತೆಗಳಿಗೆ ಜಮಾ ಮಾಡಲಾಗುತ್ತದೆ.

ಮಾರ್ಚ್‌ ನಲ್ಲಿ ನಿವೃತ್ತಿ ನಿಧಿ ಸಂಸ್ಥೆ ಇಎಫ್‌ಪಿಒ ಅ ಸಂಸ್ಥೆಯು ಉದ್ಯೋಗಿಗಳ ಭವಿಷ್ಯ ನಿಧಿ ಠೇವಣಿಗಳ ಮೇಲಿನ ಬಡ್ಡಿದರವನ್ನು 2021-22 ಹಣಕಾಸು ವರ್ಷದಲ್ಲಿ ಹಿಂದಿನ ವರ್ಷದಲ್ಲಿ ಶೇ. 8.5 ರಿಂದ ನಾಲ್ಕು ದಶಕಗಳ ಕನಿಷ್ಠ ಶೇ. 8.1 ಕ್ಕೆ ಕಡಿತಗೊಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು