9:47 PM Tuesday23 - September 2025
ಬ್ರೇಕಿಂಗ್ ನ್ಯೂಸ್
Kodagu | ವಿರಾಜಪೇಟೆ, ಕುಶಾಲನಗರ ಮತ್ತು ಹುದಿಕೇರಿ ಆಸ್ಪತ್ರೆ ಮೇಲ್ದರ್ಜೆಗೆ: ಆರೋಗ್ಯ ಸಚಿವ… ಪಂಚ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಮಹಿಳೆಯರ ಬದುಕು ಸುಧಾರಣೆ: ಮಹಿಳಾ ದಸರಾ ಉದ್ಘಾಟಿಸಿ… ಪೊನ್ನಂಪೇಟೆ ಕೋಣಗೇರಿಯಲ್ಲಿ ಸೈನಿಕ ಪತಿಯಿಂದಲೇ ಪತ್ನಿಗೆ ಗುಂಡು: ಮೈಸೂರಿಗೆ ರವಾನೆ ಗೋಣಿಕೊಪ್ಪಲು ಬಿಟ್ಟಂಗಾಲ ಮುಖ್ಯರಸ್ತೆಯಲ್ಲಿ ಖಾಸಗಿ ಬಸ್ – ಜೀಪು ಅಪಘಾತ: ಅದೃಷ್ಟವಶಾತ್ ಎಲ್ಲರೂ… Kodagu | ಐತಿಹಾಸಿಕ ಮಡಿಕೇರಿ ದಸರಾಕ್ಕೆ ಚಾಲನೆ: 4 ಶಕ್ತಿ ದೇವತೆಗಳಿಗೆ ವಿಶೇಷ… ಮುಂದಿನ ಒಲಂಪಿಕ್ಸ್ ಪದಕ ವಿಜೇತರಿಗೆ ಸರ್ಕಾರದಿಂದ 6 ಕೋಟಿ ನಗದು ಬಹುಮಾನ: ಮುಖ್ಯಮಂತ್ರಿ… ಜಿಎಸ್ ಟಿ ಜಾರಿ ಮಾಡಿದ್ದೂ ಮೋದಿ, ಜಿಎಸ್ ಟಿ ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ,… ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ: ಬೆಂಗಳೂರು ಇಸ್ಕಾನ್ ದೇವಾಲಯಕ್ಕೆ ಚಿನ್ನದ ಬಣ್ಣದ ಬೆಳಕು ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ

ಇತ್ತೀಚಿನ ಸುದ್ದಿ

ಪಿಎಫ್ ಐ ನಿಷೇಧ ಮಾಡಿಯೆಂದು ಯು.ಟಿ.ಖಾದರ್ ಕಣ್ಣೀರು ಹಾಕ್ತಾ ಇದ್ದರೆಂಬ ನಳಿನ್  ಹೇಳಿಕೆಗೆ ಪ್ರತಿಪಕ್ಷ ಉಪ ನಾಯಕ ಏನು ಹೇಳಿದರು ಗೊತ್ತೆ?

28/09/2022, 20:16

ಮಂಗಳೂರು(reporterkarnataka.com):ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ರಾಜಕಾರಣದಲ್ಲಿ ಗಾಳಿಯಲ್ಲಿ ಗುಂಡು ಹೊಡೆದು ವಿಕೃತ ಖುಷಿ ತಗೊಳ್ಳುವ ವಿಚಾರದಲ್ಲಿ ಅತ್ಯಂತ ಹೆಸರುವಾಸಿ. ಸುಳ್ಳು ಹೇಳೋದು, ಆಮೇಲೆ ಸುಳ್ಳಿನ ಮೇಲೆ ರಾಜಕಾರಣ ಮಾಡೋದು. ಇದು ವಿಘ್ನ ಸಂತೋಷಿಗಳ ಲಕ್ಷಣ. ಸುಳ್ಳು ಹೇಳೋದ್ರಲ್ಲಿ ನಳಿನ್ ಹಿಂದಿಕ್ಕಲು ಯಾರಿಂದಲೂ ಸಾಧ್ಯವಿಲ್ಲ ಎಂದು ಪ್ರತಿಪಕ್ಷದ ಉಪ ನಾಯಕ ಯು.ಟಿ. ಖಾದರ್ ಹೇಳಿದರು.

ನಳಿನ್ ನ ಮುಂದೆ ಕಣ್ಣೀರು ಹಾಕುವ ಅವಶ್ಯಕತೆ ನನಗಿಲ್ಲ. ಅಂಥಹ ಅವಶ್ಯಕತೆ ಇನ್ನು ಮುಂದಕ್ಕೂ ಕೂಡಾ ಬರುವುದೂ ಇಲ್ಲ. ತಾನು ಮಾಡಿದ ಕೆಲಸವನ್ನು ನಾನೇ ಮಾಡಿದ್ದು ಎಂದು ಹೇಳುವಷ್ಟು ಸಾಮರ್ಥ್ಯ, ಧೈರ್ಯವಿಲ್ಲದವರು ಈ ರೀತಿಯ ಅಪಾದನೆ ಮಾಡುವುದು ಸಹಜ. ನಿಮಗೆ ನಿಜವಾದ ದೇಶಭಕ್ತಿಯಿದ್ದಲ್ಲಿ, ಧರ್ಮದ ಆಧಾರದಲ್ಲಿ ವಿಷ ಬೀಜ ಬಿತ್ತಿ ಸಮಾಜ ಸ್ವಾಸ್ಥ್ಯ ಕೆಡಿಸುವ, ಭಾರತದ ಶ್ರೇಷ್ಠ ಸಂವಿಧಾನವನ್ನು ವಿರೋಧಿಸಿ ಕಾನೂನು ಕೈಗೆತ್ತಿಕೊಳ್ಳುವ ಎಲ್ಲಾ ಸಂಘಟನೆಗಳನ್ನೂ ನಿಷೇಧ ಮಾಡಿಯೆಂದು ಕಟೀಲು ಅವರಿಗೆ ಖಾದರ್ ಸಲಹೆ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು