1:47 AM Thursday2 - April 2026
ಬ್ರೇಕಿಂಗ್ ನ್ಯೂಸ್
ಪಾಟೀಲ್ – ಯತ್ನಾಳ್ ವಾಕ್ಸಮರ | ಒಂದು ದಿನ ಅವರೇ ಅಪ್ಪ-ಮಕ್ಕಳನ್ನು ಕೈಬಿಟ್ಟು… ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;…

ಇತ್ತೀಚಿನ ಸುದ್ದಿ

ಪಿಎಫ್ ಐ ನಿಷೇಧ ಮಾಡಿಯೆಂದು ಯು.ಟಿ.ಖಾದರ್ ಕಣ್ಣೀರು ಹಾಕ್ತಾ ಇದ್ದರೆಂಬ ನಳಿನ್  ಹೇಳಿಕೆಗೆ ಪ್ರತಿಪಕ್ಷ ಉಪ ನಾಯಕ ಏನು ಹೇಳಿದರು ಗೊತ್ತೆ?

28/09/2022, 20:16

ಮಂಗಳೂರು(reporterkarnataka.com):ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ರಾಜಕಾರಣದಲ್ಲಿ ಗಾಳಿಯಲ್ಲಿ ಗುಂಡು ಹೊಡೆದು ವಿಕೃತ ಖುಷಿ ತಗೊಳ್ಳುವ ವಿಚಾರದಲ್ಲಿ ಅತ್ಯಂತ ಹೆಸರುವಾಸಿ. ಸುಳ್ಳು ಹೇಳೋದು, ಆಮೇಲೆ ಸುಳ್ಳಿನ ಮೇಲೆ ರಾಜಕಾರಣ ಮಾಡೋದು. ಇದು ವಿಘ್ನ ಸಂತೋಷಿಗಳ ಲಕ್ಷಣ. ಸುಳ್ಳು ಹೇಳೋದ್ರಲ್ಲಿ ನಳಿನ್ ಹಿಂದಿಕ್ಕಲು ಯಾರಿಂದಲೂ ಸಾಧ್ಯವಿಲ್ಲ ಎಂದು ಪ್ರತಿಪಕ್ಷದ ಉಪ ನಾಯಕ ಯು.ಟಿ. ಖಾದರ್ ಹೇಳಿದರು.

ನಳಿನ್ ನ ಮುಂದೆ ಕಣ್ಣೀರು ಹಾಕುವ ಅವಶ್ಯಕತೆ ನನಗಿಲ್ಲ. ಅಂಥಹ ಅವಶ್ಯಕತೆ ಇನ್ನು ಮುಂದಕ್ಕೂ ಕೂಡಾ ಬರುವುದೂ ಇಲ್ಲ. ತಾನು ಮಾಡಿದ ಕೆಲಸವನ್ನು ನಾನೇ ಮಾಡಿದ್ದು ಎಂದು ಹೇಳುವಷ್ಟು ಸಾಮರ್ಥ್ಯ, ಧೈರ್ಯವಿಲ್ಲದವರು ಈ ರೀತಿಯ ಅಪಾದನೆ ಮಾಡುವುದು ಸಹಜ. ನಿಮಗೆ ನಿಜವಾದ ದೇಶಭಕ್ತಿಯಿದ್ದಲ್ಲಿ, ಧರ್ಮದ ಆಧಾರದಲ್ಲಿ ವಿಷ ಬೀಜ ಬಿತ್ತಿ ಸಮಾಜ ಸ್ವಾಸ್ಥ್ಯ ಕೆಡಿಸುವ, ಭಾರತದ ಶ್ರೇಷ್ಠ ಸಂವಿಧಾನವನ್ನು ವಿರೋಧಿಸಿ ಕಾನೂನು ಕೈಗೆತ್ತಿಕೊಳ್ಳುವ ಎಲ್ಲಾ ಸಂಘಟನೆಗಳನ್ನೂ ನಿಷೇಧ ಮಾಡಿಯೆಂದು ಕಟೀಲು ಅವರಿಗೆ ಖಾದರ್ ಸಲಹೆ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು